ಕೆಎಸ್ ಆರ್ ಟಿಸಿ ಬಸ್ ಗೆ ಬೈಕ್ ಹ್ಯಾಂಡಲ್ ತಗುಲಿ ಬೈಕ್ ಸಮೇತ ಇಬ್ಬರು ಕೆಳಗೆ ಬಿದ್ದಿದ್ದಾರೆ. ಹಿಂದಿನಿಂದ ಬಂದ ಕ್ಯಾಂಟರ್ ಬೈಕ್ ಮೇಲೆ ಹರಿದಿದೆ. ಈ ವೇಳೆ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದಾನೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಿಹಳ್ಳಿ ಹಾಗೂ ಕಂಟನಕುಂಟೆ ಮಾರ್ಗ ಮಧ್ಯದ ಹಸನಘಟ್ಟ ಗೇಟ್ ಬಳಿ ಇಂದು ರಾತ್ರಿ 8 ಗಂಟೆ ಸಮಯದಲ್ಲಿ ಘಟನೆ ನಡೆದಿದೆ.
ಹಿಟ್ ಆಂಡ್ ರನ್ ಪ್ರಕರಣದಲ್ಲಿ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಪುರಾ ಗ್ರಾಮದ ಉಪೇಂದ್ರ(27) ಎಂಬ ವ್ಯಕ್ತಿ ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. ಚಂದ್ರಶೇಖರ್ ಗಾಯಗೊಂಡಿರುವ ವ್ಯಕ್ತಿ. ಈತ ಮಲತ್ತಹಳ್ಳಿಯ ನಿವಾಸಿಯಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೃತ ಉಪೇಂದ್ರ ಮಲತ್ತಹಳ್ಳಿಯ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆ ಬಂದಿದ್ದು, ಊರಿಗೆ ವಾಪಸ್ ಹೋಗುವ ವೇಳೆ ಘಟನೆ ನಡೆದಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಹಾಗೂ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಓವರ್ ಟೇಕ್ ಮಾಡುವಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…