ಹಿಟ್ ಅಂಡ್ ರನ್ ಗೆ ಪಾದಾಚಾರಿ ಬಲಿಯಾಗಿರುವ ಘಟನೆ ನಗರದ ಹೊರವಕಯದ ರೈಲ್ವೆ ನಿಲ್ದಾಣ ಸಮೀಪ ನ.9ರ ಸಂಜೆ ಸುಮಾರು 7ಗಂಟೆ ಸಮಯದಲ್ಲಿ ನಡೆದಿದೆ.
ಕದೀರ್ ಪಾಷಾ(26), ಹಿಟ್ & ರನ್ ಗೆ ಬಲಿಯಾದ ಪಾದಚಾರಿ.
ಕದೀರ್ ಪಾಷಾ ಅವರು ರೈಲ್ವೆ ನಿಲ್ದಾದಲ್ಲಿ ಕೆಲಸ ಮುಗಿಸಿಕೊಂಡು ರಸ್ತೆ ಪಕ್ಕದಲ್ಲಿ ನಡೆದುಕೊಂಡು ಮನೆಗೆ ತೆರಳುವಾಗ ಯಾವುದೋ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಸ್ಥಳದಿಂದ ಎಸ್ಕೇಪ್ ಆಗಿದೆ. ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ಕದೀರ್ ಪಾಷಾ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ಒದಗಿಬಂದಿದೆ.
ಸ್ಥಳಕ್ಕೆ ನಗರ ಠಾಣಾ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮಿನಿ ಕ್ಯಾಂಟರ್ ಡಿಕ್ಕಿ ಹೊಡೆದಿರಬಹುದು ಎಂದು ಪೊಲೀಸ್ ಸಿಬ್ಬಂದಿ ಶಂಕಿಸಿದ್ದಾರೆ. ಘಟನಾ ಸ್ಥಳದ ಸಮೀಪವಿರುವ ಸಿಸಿಟಿವಿ ಪರಿಶೀಲನೆ ಮಾಡುತ್ತಿರುವ ಪೊಲೀಸ್ ಇಲಾಖೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…