ಹಿಟ್ ಅಂಡ್ ರನ್ ಗೆ ಪಾದಾಚಾರಿ ಬಲಿಯಾಗಿರುವ ಘಟನೆ ನಗರದ ಹೊರವಕಯದ ರೈಲ್ವೆ ನಿಲ್ದಾಣ ಸಮೀಪ ನ.9ರ ಸಂಜೆ ಸುಮಾರು 7ಗಂಟೆ ಸಮಯದಲ್ಲಿ ನಡೆದಿದೆ.
ಕದೀರ್ ಪಾಷಾ(26), ಹಿಟ್ & ರನ್ ಗೆ ಬಲಿಯಾದ ಪಾದಚಾರಿ.
ಕದೀರ್ ಪಾಷಾ ಅವರು ರೈಲ್ವೆ ನಿಲ್ದಾದಲ್ಲಿ ಕೆಲಸ ಮುಗಿಸಿಕೊಂಡು ರಸ್ತೆ ಪಕ್ಕದಲ್ಲಿ ನಡೆದುಕೊಂಡು ಮನೆಗೆ ತೆರಳುವಾಗ ಯಾವುದೋ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಸ್ಥಳದಿಂದ ಎಸ್ಕೇಪ್ ಆಗಿದೆ. ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ಕದೀರ್ ಪಾಷಾ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ಒದಗಿಬಂದಿದೆ.
ಸ್ಥಳಕ್ಕೆ ನಗರ ಠಾಣಾ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮಿನಿ ಕ್ಯಾಂಟರ್ ಡಿಕ್ಕಿ ಹೊಡೆದಿರಬಹುದು ಎಂದು ಪೊಲೀಸ್ ಸಿಬ್ಬಂದಿ ಶಂಕಿಸಿದ್ದಾರೆ. ಘಟನಾ ಸ್ಥಳದ ಸಮೀಪವಿರುವ ಸಿಸಿಟಿವಿ ಪರಿಶೀಲನೆ ಮಾಡುತ್ತಿರುವ ಪೊಲೀಸ್ ಇಲಾಖೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…
ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…
ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…