ನ.9ರ ಸಂಜೆ ದೊಡ್ಡಬಳ್ಳಾಪುರ ನಗರದ ಮುತ್ತೂರಿನ ಅಂಜನೇಯ ದೇವಸ್ಥಾನದ ಬಳಿ ಅಪರಿಚಿತ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಈ ಅಪಘಾತದಲ್ಲಿ ಕೂಲಿ ಮಾಡುವ ವ್ಯಕ್ತಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದ. ಈ ಅಪಘಾತಕ್ಕೆ ನೇರ ಕಾರಣ ಸರ್ವಿಸ್ ರಸ್ತೆ ಮತ್ತು ಬೀದಿ ದೀಪಗಳ ವ್ಯವಸ್ಥೆ ಇಲ್ಲದೆ ಇರುವುದು ಅಪಘಾತಗಳಿಗೆ ಕಾರಣವಾಗಿದೆ ಎಂದು ಅಕ್ರೋಶಗೊಂಡ ಸ್ಥಳಿಯರು ಶವವನ್ನ ರಸ್ತೆಯಲ್ಲೇ ಇಟ್ಟು ಇಂದು ಪ್ರತಿಭಟನೆ ನಡೆಸಿದರು.
ಟೋಲ್ ನವರ ನಿರ್ಲಕ್ಷ್ಯತೆಯ ವಿರುದ್ಧ ಅಕ್ರೋಶಗೊಂಡ ಸ್ಥಳೀಯರು ಶವವನ್ನ ರಸ್ತೆಯಲ್ಲೇ ಇಟ್ಟು ಪ್ರತಿಭಟನೆ ನಡೆಸಿದರು, ಇದರಿಂದ ಕೆಲಕಾಲ ರಸ್ತೆ ಬಂದ್ ಆಗಿತು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯ ನಿಯಂತ್ರಿಸಿ ವಾಹನಗಳ ಓಡಾಟಕ್ಕೆ ಅನುವು ಮಾಡಿಕೊಟ್ಪರು.
ಪ್ರತಿಭಟನೆಯಲ್ಲಿ ಸಮತ ಸೈನಿಕ ದಳದ ಜಿಲ್ಲಾಧ್ಯಕ್ಷರಾದ ಒಬಳೇಶ್, ತಾಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಸಯೈದ್ ರಜಾಕ್, ಸ್ಥಳೀಯರಾದ ಇಮ್ರಾನ್, ಆನಂದ್ ಕುಮಾರ್ ಸೇರಿದಂತೆ ನೂರಾರು ಮುತ್ತೂರಿನ ನಿವಾಸಿಗಳು ಭಾಗಿಯಾಗಿದ್ದರು.
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…