ಹಿಟ್ & ರನ್ ಪ್ರಕರಣ: ಅಪಘಾತಕ್ಕೆ ನೇರ ಕಾರಣ ಅವೈಜ್ಞಾನಿಕ ರಸ್ತೆ: ಅವೈಜ್ಞಾನಿಕ ರಸ್ತೆ ಖಂಡಿಸಿ ಶವವನ್ನ ರಸ್ತೆ ಮಧ್ಯೆ ಇಟ್ಟು ಪ್ರತಿಭಟನೆ

ನ.9ರ ಸಂಜೆ ದೊಡ್ಡಬಳ್ಳಾಪುರ ನಗರದ ಮುತ್ತೂರಿನ ಅಂಜನೇಯ ದೇವಸ್ಥಾನದ ಬಳಿ ಅಪರಿಚಿತ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಈ ಅಪಘಾತದಲ್ಲಿ ಕೂಲಿ ಮಾಡುವ ವ್ಯಕ್ತಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದ. ಈ ಅಪಘಾತಕ್ಕೆ ನೇರ ಕಾರಣ ಸರ್ವಿಸ್ ರಸ್ತೆ ಮತ್ತು ಬೀದಿ ದೀಪಗಳ ವ್ಯವಸ್ಥೆ ಇಲ್ಲದೆ ಇರುವುದು ಅಪಘಾತಗಳಿಗೆ ಕಾರಣವಾಗಿದೆ ಎಂದು ಅಕ್ರೋಶಗೊಂಡ ಸ್ಥಳಿಯರು ಶವವನ್ನ ರಸ್ತೆಯಲ್ಲೇ ಇಟ್ಟು ಇಂದು ಪ್ರತಿಭಟನೆ ನಡೆಸಿದರು.

ಮುತ್ತೂರು ಬಳಿ ಹಿಂದೂಪುರ-ಯಲಹಂಕ ರಾಜ್ಯ ಹೆದ್ದಾರಿ ಹಾದು ಹೋಗಿದೆ, ಮುತ್ತೂರು ಬಳಿ ಸರ್ವಿಸ್ ರಸ್ತೆ, ಬೀದಿ ದೀಪಗಳು ಮತ್ತು ರಸ್ತೆ ಉಬ್ಬುಗಳನ್ನ ಹಾಕದೆ ಇರುವುದು ಅಪಘಾತಗಳಿಗೆ ಕಾರಣವಾಗಿದೆ, ರಸ್ತೆ ನಿರ್ವಹಣೆ ಮಾಡುವ ಟೋಲ್ ನವರು ಕೇವಲ ವಾಹನ ಸವಾರರಿಂದ ಟೋಲ್ ಸಂಗ್ರಹ ಮಾಡುತ್ತಾರೆ ಹೊರತು ಸರ್ವಿಸ್ ರಸ್ತೆ  ಸೌಲಭ್ಯ ಮತ್ತು ಬೀದಿ ದೀಪಗಳ ವ್ಯವಸ್ಥೆ ಮಾಡಿಲ್ಲ ಎಂದು ಅಕ್ರೋಶ ವ್ಯಕ್ತಪಡಿಸಿದರು.

ಟೋಲ್ ನವರ ನಿರ್ಲಕ್ಷ್ಯತೆಯ ವಿರುದ್ಧ ಅಕ್ರೋಶಗೊಂಡ ಸ್ಥಳೀಯರು ಶವವನ್ನ ರಸ್ತೆಯಲ್ಲೇ ಇಟ್ಟು ಪ್ರತಿಭಟನೆ ನಡೆಸಿದರು, ಇದರಿಂದ ಕೆಲಕಾಲ ರಸ್ತೆ ಬಂದ್ ಆಗಿತು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯ ನಿಯಂತ್ರಿಸಿ ವಾಹನಗಳ ಓಡಾಟಕ್ಕೆ ಅನುವು ಮಾಡಿಕೊಟ್ಪರು.

ಮುತ್ತೂರು ಬಳಿ ರಸ್ತೆ ಅಪಘಾತಗಳಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ, ಕದೀರ್ ಪಾಷ ಒಬ್ಬನೇ ಮಗ, ಮನೆಗೆ ಆಧಾರವಾಗಿದ್ದ ಒಬ್ಬನೇ ಮಗನನ್ನ ಕಳೆದುಕೊಂಡ ಹೆತ್ತವರು ಕಣ್ಣೀರು ಹಾಕುತ್ತಿದ್ದಾರೆ, ಮುಂದೆ ನಮಗೆ ಯಾರು ಗತಿ, ಇನ್ನೂ ಎಷ್ಟು ತಾಯಂದಿರ ತಮ್ಮ ಮಕ್ಕಳನ್ನು ಕಳೆದುಕೊಳ್ಳ ಬೇಕೆಂದು ಕದೀರ್ ಪಾಷಾನ ತಾಯಿ ಝರೀನಾ ಕಣ್ಣೀರು ಹಾಕಿದರು.

ಪ್ರತಿಭಟನೆಯಲ್ಲಿ ಸಮತ ಸೈನಿಕ ದಳದ ಜಿಲ್ಲಾಧ್ಯಕ್ಷರಾದ ಒಬಳೇಶ್, ತಾಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಸಯೈದ್ ರಜಾಕ್, ಸ್ಥಳೀಯರಾದ ಇಮ್ರಾನ್, ಆನಂದ್ ಕುಮಾರ್ ಸೇರಿದಂತೆ ನೂರಾರು ಮುತ್ತೂರಿನ‌ ನಿವಾಸಿಗಳು ಭಾಗಿಯಾಗಿದ್ದರು.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

8 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

12 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

12 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

20 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

1 day ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 days ago