ನ.9ರ ಸಂಜೆ ದೊಡ್ಡಬಳ್ಳಾಪುರ ನಗರದ ಮುತ್ತೂರಿನ ಅಂಜನೇಯ ದೇವಸ್ಥಾನದ ಬಳಿ ಅಪರಿಚಿತ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಈ ಅಪಘಾತದಲ್ಲಿ ಕೂಲಿ ಮಾಡುವ ವ್ಯಕ್ತಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದ. ಈ ಅಪಘಾತಕ್ಕೆ ನೇರ ಕಾರಣ ಸರ್ವಿಸ್ ರಸ್ತೆ ಮತ್ತು ಬೀದಿ ದೀಪಗಳ ವ್ಯವಸ್ಥೆ ಇಲ್ಲದೆ ಇರುವುದು ಅಪಘಾತಗಳಿಗೆ ಕಾರಣವಾಗಿದೆ ಎಂದು ಅಕ್ರೋಶಗೊಂಡ ಸ್ಥಳಿಯರು ಶವವನ್ನ ರಸ್ತೆಯಲ್ಲೇ ಇಟ್ಟು ಇಂದು ಪ್ರತಿಭಟನೆ ನಡೆಸಿದರು.
ಟೋಲ್ ನವರ ನಿರ್ಲಕ್ಷ್ಯತೆಯ ವಿರುದ್ಧ ಅಕ್ರೋಶಗೊಂಡ ಸ್ಥಳೀಯರು ಶವವನ್ನ ರಸ್ತೆಯಲ್ಲೇ ಇಟ್ಟು ಪ್ರತಿಭಟನೆ ನಡೆಸಿದರು, ಇದರಿಂದ ಕೆಲಕಾಲ ರಸ್ತೆ ಬಂದ್ ಆಗಿತು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯ ನಿಯಂತ್ರಿಸಿ ವಾಹನಗಳ ಓಡಾಟಕ್ಕೆ ಅನುವು ಮಾಡಿಕೊಟ್ಪರು.
ಪ್ರತಿಭಟನೆಯಲ್ಲಿ ಸಮತ ಸೈನಿಕ ದಳದ ಜಿಲ್ಲಾಧ್ಯಕ್ಷರಾದ ಒಬಳೇಶ್, ತಾಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಸಯೈದ್ ರಜಾಕ್, ಸ್ಥಳೀಯರಾದ ಇಮ್ರಾನ್, ಆನಂದ್ ಕುಮಾರ್ ಸೇರಿದಂತೆ ನೂರಾರು ಮುತ್ತೂರಿನ ನಿವಾಸಿಗಳು ಭಾಗಿಯಾಗಿದ್ದರು.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…