
ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು 8:30 ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಮೇಲಿನ ನಾಯಕರಂಡನಹಳ್ಳಿ ಬಳಿ ನಡೆದಿದೆ..

ಘಟನೆ ತಡವಾಗಿ ಬೆಳಕಿಗೆ ಬಂದಿದೆ….
ಹಿಂದೂಪುರ ಮೂಲದ ಪವನ್ ಕುಮಾರ್ (22) ಸ್ಥಳದಲ್ಲೇ ಸಾವನ್ನಪ್ಪಿದ್ದು, ಪಾವಗಡ ತಾಲೂಕಿನ ಗಂಗವಾರ ಗ್ರಾಮದ ಅಶೋಕ್(24) ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯೆದಲ್ಲಿ ಅಸುನೀಗಿದ್ದಾನೆ ಎಂದು ತಿಳಿದುಬಂದಿದೆ….

ರಾತ್ರಿ ಹಿಂದೂಪುರದಿಂದ ಬೆಂಗಳೂರಿ ಕಡೆಗೆ ಬೈಕಿನಲ್ಲಿ ಬರುವ ವೇಳೆ ಮುಂದೆ ಸಾಗುತ್ತಿದ್ದ ಸಿಮೆಂಟ್ ಬಲ್ಕರ್ ಲಾರಿ ದಿಢೀರನೇ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದಿದೆ, ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ಪವನ್ ಎಂಬಾತ ಸಾವನ್ನಪ್ಪಿದ್ದು, ಮತ್ತೊರ್ವ ಅಶೋಕ್ ಆಸ್ಪತ್ರೆಗೆ ರವಾನಿಸುವ ವೇಳೆ ಮೃತನಾಗಿದ್ದಾನೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ…..

ಸದ್ಯ ಸಿಮೆಂಟ್ ಬಲ್ಕರ್ ಎಸ್ಕೇಪ್ ಆಗಿದ್ದು, ಪೊಲೀಸರು ಚಾಲಕನನ್ನು ಪತ್ತೆಹಚ್ಚಲು ಹುಡುಕಾಟ ಪ್ರಾರಂಭಿಸಿದ್ದಾರೆ… ಮೇಲ್ನೋಟಕ್ಕೆ ಬಲ್ಕರ್ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ…