ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು 8:30 ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಮೇಲಿನ ನಾಯಕರಂಡನಹಳ್ಳಿ ಬಳಿ ನಡೆದಿದೆ..
ಘಟನೆ ತಡವಾಗಿ ಬೆಳಕಿಗೆ ಬಂದಿದೆ….
ಹಿಂದೂಪುರ ಮೂಲದ ಪವನ್ ಕುಮಾರ್ (22) ಸ್ಥಳದಲ್ಲೇ ಸಾವನ್ನಪ್ಪಿದ್ದು, ಪಾವಗಡ ತಾಲೂಕಿನ ಗಂಗವಾರ ಗ್ರಾಮದ ಅಶೋಕ್(24) ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯೆದಲ್ಲಿ ಅಸುನೀಗಿದ್ದಾನೆ ಎಂದು ತಿಳಿದುಬಂದಿದೆ….
ರಾತ್ರಿ ಹಿಂದೂಪುರದಿಂದ ಬೆಂಗಳೂರಿ ಕಡೆಗೆ ಬೈಕಿನಲ್ಲಿ ಬರುವ ವೇಳೆ ಮುಂದೆ ಸಾಗುತ್ತಿದ್ದ ಸಿಮೆಂಟ್ ಬಲ್ಕರ್ ಲಾರಿ ದಿಢೀರನೇ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದಿದೆ, ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ಪವನ್ ಎಂಬಾತ ಸಾವನ್ನಪ್ಪಿದ್ದು, ಮತ್ತೊರ್ವ ಅಶೋಕ್ ಆಸ್ಪತ್ರೆಗೆ ರವಾನಿಸುವ ವೇಳೆ ಮೃತನಾಗಿದ್ದಾನೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ…..
ಸದ್ಯ ಸಿಮೆಂಟ್ ಬಲ್ಕರ್ ಎಸ್ಕೇಪ್ ಆಗಿದ್ದು, ಪೊಲೀಸರು ಚಾಲಕನನ್ನು ಪತ್ತೆಹಚ್ಚಲು ಹುಡುಕಾಟ ಪ್ರಾರಂಭಿಸಿದ್ದಾರೆ… ಮೇಲ್ನೋಟಕ್ಕೆ ಬಲ್ಕರ್ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ…
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…