ಹಿರಿಯ ಕನ್ನಡಪರ ಹೋರಾಟಗಾರ ಕಛೇರಿ ಪಾಳ್ಯದ ಮುನಿಯಪ್ಪ (62) ನಿಧನ

ಹಿರಿಯ ಕನ್ನಡಪರ ಹೋರಾಟಗಾರ ಕಛೇರಿ ಪಾಳ್ಯದ ಮುನಿಯಪ್ಪ (62) ವರ್ಷ ಇಂದು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅವರು ಪತ್ನಿ , ಪುತ್ರ ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ದಿನಾಂಕ 12-02-2025 ರಂದು ಕಚೇರಿ ಪಾಳ್ಯದ ಸಾರ್ವಜನಿಕ ರುದ್ರಭೂಮಿಯಲ್ಲಿ ನಡೆಯಲಿದೆ.

ಮುನಿಯಪ್ಪ ಅವರು ಗೋಕಾಕ್ ಚಳವಳಿಯ ಮೂಲಕ ಹೋರಾಟಕ್ಕೆ ಧುಮುಕಿದ ಅವರು ಕನ್ನಡ ಚಳವಳಿ, ದಲಿತ ಚಳವಳಿಗಳಲ್ಲಿ ತೊಡಗಿಸಿಕೊಂಡವರು.

ಭುವನೇಶ್ವರಿ ಕನ್ನಡ ಸಂಘ, ಕನ್ನಡ ಜಾಗೃತ ಪರಿಷತ್ತು, ಕನ್ನಡ ಪಕ್ಷದ ಎಲ್ಲಾ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು.

ಕಳೆದ ತಿಂಗಳು ಕನ್ನಡ ಜಾಗೃತ ಪರಿಷತ್ತಿನಲ್ಲಿ ಪ್ರಾರಂಭವಾದ ಕನ್ನಡ ಕಲಿಗಳಿಗೆ ಕಜಾಪ ಜೊತೆಗಾರ ಯೋಜನೆಯ ಫಲಾನುಭವಿಗಳು ಆಗಿದ್ದರು.

ಮುನಿಯಪ್ಪ ಅವರ ನಿಧನದಿಂದ ಕನ್ನಡ ಹಾಗೂ ದಲಿತ ಚಳವಳಿಗಾರರೊಬ್ಬರನ್ನು ಕಳಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಸಾವಿನ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ ಎಂದು ಭುವನೇಶ್ವರಿ ಕನ್ನಡ ಸಂಘ, ಕನ್ನಡ ಜಾಗೃತ ಪರಿಷತ್ತು, ಕನ್ನಡ ಪಕ್ಷ ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ.

Leave a Reply

Your email address will not be published. Required fields are marked *