ಹಿರಿಯ ಕನ್ನಡಪರ ಹೋರಾಟಗಾರ ಕಛೇರಿ ಪಾಳ್ಯದ ಮುನಿಯಪ್ಪ (62) ವರ್ಷ ಇಂದು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅವರು ಪತ್ನಿ , ಪುತ್ರ ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ದಿನಾಂಕ 12-02-2025 ರಂದು ಕಚೇರಿ ಪಾಳ್ಯದ ಸಾರ್ವಜನಿಕ ರುದ್ರಭೂಮಿಯಲ್ಲಿ ನಡೆಯಲಿದೆ.
ಮುನಿಯಪ್ಪ ಅವರು ಗೋಕಾಕ್ ಚಳವಳಿಯ ಮೂಲಕ ಹೋರಾಟಕ್ಕೆ ಧುಮುಕಿದ ಅವರು ಕನ್ನಡ ಚಳವಳಿ, ದಲಿತ ಚಳವಳಿಗಳಲ್ಲಿ ತೊಡಗಿಸಿಕೊಂಡವರು.
ಭುವನೇಶ್ವರಿ ಕನ್ನಡ ಸಂಘ, ಕನ್ನಡ ಜಾಗೃತ ಪರಿಷತ್ತು, ಕನ್ನಡ ಪಕ್ಷದ ಎಲ್ಲಾ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು.
ಕಳೆದ ತಿಂಗಳು ಕನ್ನಡ ಜಾಗೃತ ಪರಿಷತ್ತಿನಲ್ಲಿ ಪ್ರಾರಂಭವಾದ ಕನ್ನಡ ಕಲಿಗಳಿಗೆ ಕಜಾಪ ಜೊತೆಗಾರ ಯೋಜನೆಯ ಫಲಾನುಭವಿಗಳು ಆಗಿದ್ದರು.
ಮುನಿಯಪ್ಪ ಅವರ ನಿಧನದಿಂದ ಕನ್ನಡ ಹಾಗೂ ದಲಿತ ಚಳವಳಿಗಾರರೊಬ್ಬರನ್ನು ಕಳಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಸಾವಿನ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ ಎಂದು ಭುವನೇಶ್ವರಿ ಕನ್ನಡ ಸಂಘ, ಕನ್ನಡ ಜಾಗೃತ ಪರಿಷತ್ತು, ಕನ್ನಡ ಪಕ್ಷ ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…