ಹಿರಿಯ ಕನ್ನಡಪರ ಹೋರಾಟಗಾರ ಕಛೇರಿ ಪಾಳ್ಯದ ಮುನಿಯಪ್ಪ (62) ನಿಧನ

ಹಿರಿಯ ಕನ್ನಡಪರ ಹೋರಾಟಗಾರ ಕಛೇರಿ ಪಾಳ್ಯದ ಮುನಿಯಪ್ಪ (62) ವರ್ಷ ಇಂದು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅವರು ಪತ್ನಿ , ಪುತ್ರ ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ದಿನಾಂಕ 12-02-2025 ರಂದು ಕಚೇರಿ ಪಾಳ್ಯದ ಸಾರ್ವಜನಿಕ ರುದ್ರಭೂಮಿಯಲ್ಲಿ ನಡೆಯಲಿದೆ.

ಮುನಿಯಪ್ಪ ಅವರು ಗೋಕಾಕ್ ಚಳವಳಿಯ ಮೂಲಕ ಹೋರಾಟಕ್ಕೆ ಧುಮುಕಿದ ಅವರು ಕನ್ನಡ ಚಳವಳಿ, ದಲಿತ ಚಳವಳಿಗಳಲ್ಲಿ ತೊಡಗಿಸಿಕೊಂಡವರು.

ಭುವನೇಶ್ವರಿ ಕನ್ನಡ ಸಂಘ, ಕನ್ನಡ ಜಾಗೃತ ಪರಿಷತ್ತು, ಕನ್ನಡ ಪಕ್ಷದ ಎಲ್ಲಾ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು.

ಕಳೆದ ತಿಂಗಳು ಕನ್ನಡ ಜಾಗೃತ ಪರಿಷತ್ತಿನಲ್ಲಿ ಪ್ರಾರಂಭವಾದ ಕನ್ನಡ ಕಲಿಗಳಿಗೆ ಕಜಾಪ ಜೊತೆಗಾರ ಯೋಜನೆಯ ಫಲಾನುಭವಿಗಳು ಆಗಿದ್ದರು.

ಮುನಿಯಪ್ಪ ಅವರ ನಿಧನದಿಂದ ಕನ್ನಡ ಹಾಗೂ ದಲಿತ ಚಳವಳಿಗಾರರೊಬ್ಬರನ್ನು ಕಳಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಸಾವಿನ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ ಎಂದು ಭುವನೇಶ್ವರಿ ಕನ್ನಡ ಸಂಘ, ಕನ್ನಡ ಜಾಗೃತ ಪರಿಷತ್ತು, ಕನ್ನಡ ಪಕ್ಷ ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

8 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

11 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

23 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

1 day ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago