ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್

ಉತ್ತಮ ಆಡಳಿತ ಸಪ್ತಾಹ-2024 ರ ಅಂಗವಾಗಿ “ಇಂದೇ ಸಕಾಲ”ದಲ್ಲಿ ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಿದ ಕೆಲವೇ ನಿಮಿಷಗಳಲ್ಲಿ ಅನುಮೋದಿಸಿ ಜಿಲ್ಲಾಧಿಕಾರಿಗಳಿಂದ ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಲಾಯಿತು.

ಉತ್ತಮ ಆಡಳಿತ ಸಪ್ತಾಹ-2024 ವು 19.12.2024 ರಿಂದ 24.12.2024 ರವರೆಗೆ ನಡೆಯಲಿದೆ. “ಪ್ರಶಾಸನ್ ಗಾಂವ್ ಕಿ ಓರೆ(ಗ್ರಾಮದ ಕಡೆಗೆ ಆಡಳಿತ)” ಎಂಬ ಅಭಿಯಾನದ ಮೂಲಕ ಜಿಲ್ಲೆಯಾದ್ಯಂತ ಸಾರ್ವಜನಿಕ ಕುಂದುಕೊರತೆಗಳಿಗೆ ತ್ವರಿತ ಪರಿಹಾರ ಮತ್ತು ಸೇವಾ ವಿತರಣೆಯನ್ನು ಸುಧಾರಿಸುವುದು ಸಪ್ತಾಹದ ಮುಖ್ಯ ಉದ್ದೇಶವಾಗಿದೆ.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೇವನಹಳ್ಳಿ ತಾಲ್ಲೂಕಿನ ಕೊಯಿರಾ ಗ್ರಾಮದ ಗಾಂಧಿವಾದಿ ಹಾಗೂ ಪರಿಸರ ಸಂರಕ್ಷಕರಾದ ಕೆ.ಎಸ್ ಕೃಷ್ಣಪ್ಪ ಹಾಗೂ ದೊಡ್ಡಬಳ್ಳಾಪುರ ನಗರದ ನಿವೃತ್ತ ಶಿಕ್ಷರಾದ ಎಸ್.ಎಸ್ ರಾಜೇಂದ್ರ ಅವರಿಗೆ ಹಿರಿಯ ನಾಗರಿಕರ ಗುರುತಿನ ಚೀಟಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಅವರು ಮಾತನಾಡಿ ಜಿಲ್ಲೆಯ ಎಲ್ಲಾ ಹಿರಿಯ ನಾಗರಿಕರು “ಇಂದೇ ಸಕಾಲ” ವಿಶೇಷ ಯೋಜನೆಯಲ್ಲಿ ಹಿರಿಯ ನಾಗರಿಕರ ಗುರುತಿನ ಚೀಟಿಗಳನ್ನು ಪಡೆದು ವಿನೂತನ ಕಾರ್ಯಕ್ರಮದ ಸೌಲಭ್ಯಗಳನ್ನು ಪಡೆಯಲು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಜಗದೀಶ ಎನ್.ಎಂ, ಇಲಾಖೆಯ ಸಿಬ್ಬಂದಿ ರವಿಕುಮಾರ್, ಪ್ರಸನ್ನ ಮತ್ತು ಸಮಾಜಕಾರ್ಯ ಪ್ರಶಿಕ್ಷಣಾರ್ಥಿ ಮನೋಜ್ ಬಿ.ಹೆಚ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಾ.6ರಂದು ಗುತ್ತಿಗೆದಾರರ ಸಂಘದಿಂದ ಪ್ರತಿಭಟನೆ: ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್‌ಗಾಗಿ ಆಗ್ರಹ

ಕಳೆದ ಎರಡ್ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್‌ಗಾಗಿ ಆಗ್ರಹಿಸಿ ಮಾ.6ರಂದು ಬೆಂಗಳೂರಿನ…

2 minutes ago

ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮ: ವಿಜೇತರಿಗೆ ಬಹುಮಾನ ವಿತರಣೆ

ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…

4 hours ago

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

15 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

16 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

17 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

19 hours ago