ಉತ್ತಮ ಆಡಳಿತ ಸಪ್ತಾಹ-2024 ರ ಅಂಗವಾಗಿ “ಇಂದೇ ಸಕಾಲ”ದಲ್ಲಿ ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಿದ ಕೆಲವೇ ನಿಮಿಷಗಳಲ್ಲಿ ಅನುಮೋದಿಸಿ ಜಿಲ್ಲಾಧಿಕಾರಿಗಳಿಂದ ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಲಾಯಿತು.
ಉತ್ತಮ ಆಡಳಿತ ಸಪ್ತಾಹ-2024 ವು 19.12.2024 ರಿಂದ 24.12.2024 ರವರೆಗೆ ನಡೆಯಲಿದೆ. “ಪ್ರಶಾಸನ್ ಗಾಂವ್ ಕಿ ಓರೆ(ಗ್ರಾಮದ ಕಡೆಗೆ ಆಡಳಿತ)” ಎಂಬ ಅಭಿಯಾನದ ಮೂಲಕ ಜಿಲ್ಲೆಯಾದ್ಯಂತ ಸಾರ್ವಜನಿಕ ಕುಂದುಕೊರತೆಗಳಿಗೆ ತ್ವರಿತ ಪರಿಹಾರ ಮತ್ತು ಸೇವಾ ವಿತರಣೆಯನ್ನು ಸುಧಾರಿಸುವುದು ಸಪ್ತಾಹದ ಮುಖ್ಯ ಉದ್ದೇಶವಾಗಿದೆ.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೇವನಹಳ್ಳಿ ತಾಲ್ಲೂಕಿನ ಕೊಯಿರಾ ಗ್ರಾಮದ ಗಾಂಧಿವಾದಿ ಹಾಗೂ ಪರಿಸರ ಸಂರಕ್ಷಕರಾದ ಕೆ.ಎಸ್ ಕೃಷ್ಣಪ್ಪ ಹಾಗೂ ದೊಡ್ಡಬಳ್ಳಾಪುರ ನಗರದ ನಿವೃತ್ತ ಶಿಕ್ಷರಾದ ಎಸ್.ಎಸ್ ರಾಜೇಂದ್ರ ಅವರಿಗೆ ಹಿರಿಯ ನಾಗರಿಕರ ಗುರುತಿನ ಚೀಟಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಅವರು ಮಾತನಾಡಿ ಜಿಲ್ಲೆಯ ಎಲ್ಲಾ ಹಿರಿಯ ನಾಗರಿಕರು “ಇಂದೇ ಸಕಾಲ” ವಿಶೇಷ ಯೋಜನೆಯಲ್ಲಿ ಹಿರಿಯ ನಾಗರಿಕರ ಗುರುತಿನ ಚೀಟಿಗಳನ್ನು ಪಡೆದು ವಿನೂತನ ಕಾರ್ಯಕ್ರಮದ ಸೌಲಭ್ಯಗಳನ್ನು ಪಡೆಯಲು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಜಗದೀಶ ಎನ್.ಎಂ, ಇಲಾಖೆಯ ಸಿಬ್ಬಂದಿ ರವಿಕುಮಾರ್, ಪ್ರಸನ್ನ ಮತ್ತು ಸಮಾಜಕಾರ್ಯ ಪ್ರಶಿಕ್ಷಣಾರ್ಥಿ ಮನೋಜ್ ಬಿ.ಹೆಚ್ ಉಪಸ್ಥಿತರಿದ್ದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…