ಉತ್ತಮ ಆಡಳಿತ ಸಪ್ತಾಹ-2024 ರ ಅಂಗವಾಗಿ “ಇಂದೇ ಸಕಾಲ”ದಲ್ಲಿ ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಿದ ಕೆಲವೇ ನಿಮಿಷಗಳಲ್ಲಿ ಅನುಮೋದಿಸಿ ಜಿಲ್ಲಾಧಿಕಾರಿಗಳಿಂದ ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಲಾಯಿತು.
ಉತ್ತಮ ಆಡಳಿತ ಸಪ್ತಾಹ-2024 ವು 19.12.2024 ರಿಂದ 24.12.2024 ರವರೆಗೆ ನಡೆಯಲಿದೆ. “ಪ್ರಶಾಸನ್ ಗಾಂವ್ ಕಿ ಓರೆ(ಗ್ರಾಮದ ಕಡೆಗೆ ಆಡಳಿತ)” ಎಂಬ ಅಭಿಯಾನದ ಮೂಲಕ ಜಿಲ್ಲೆಯಾದ್ಯಂತ ಸಾರ್ವಜನಿಕ ಕುಂದುಕೊರತೆಗಳಿಗೆ ತ್ವರಿತ ಪರಿಹಾರ ಮತ್ತು ಸೇವಾ ವಿತರಣೆಯನ್ನು ಸುಧಾರಿಸುವುದು ಸಪ್ತಾಹದ ಮುಖ್ಯ ಉದ್ದೇಶವಾಗಿದೆ.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೇವನಹಳ್ಳಿ ತಾಲ್ಲೂಕಿನ ಕೊಯಿರಾ ಗ್ರಾಮದ ಗಾಂಧಿವಾದಿ ಹಾಗೂ ಪರಿಸರ ಸಂರಕ್ಷಕರಾದ ಕೆ.ಎಸ್ ಕೃಷ್ಣಪ್ಪ ಹಾಗೂ ದೊಡ್ಡಬಳ್ಳಾಪುರ ನಗರದ ನಿವೃತ್ತ ಶಿಕ್ಷರಾದ ಎಸ್.ಎಸ್ ರಾಜೇಂದ್ರ ಅವರಿಗೆ ಹಿರಿಯ ನಾಗರಿಕರ ಗುರುತಿನ ಚೀಟಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಅವರು ಮಾತನಾಡಿ ಜಿಲ್ಲೆಯ ಎಲ್ಲಾ ಹಿರಿಯ ನಾಗರಿಕರು “ಇಂದೇ ಸಕಾಲ” ವಿಶೇಷ ಯೋಜನೆಯಲ್ಲಿ ಹಿರಿಯ ನಾಗರಿಕರ ಗುರುತಿನ ಚೀಟಿಗಳನ್ನು ಪಡೆದು ವಿನೂತನ ಕಾರ್ಯಕ್ರಮದ ಸೌಲಭ್ಯಗಳನ್ನು ಪಡೆಯಲು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಜಗದೀಶ ಎನ್.ಎಂ, ಇಲಾಖೆಯ ಸಿಬ್ಬಂದಿ ರವಿಕುಮಾರ್, ಪ್ರಸನ್ನ ಮತ್ತು ಸಮಾಜಕಾರ್ಯ ಪ್ರಶಿಕ್ಷಣಾರ್ಥಿ ಮನೋಜ್ ಬಿ.ಹೆಚ್ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…