ಇಂದಿನ ದಿನಮಾನಗಳಲ್ಲಿ ನಗರೀಕರಣ ಬೆಳೆದಂತೆ ಕುಟುಂಬಗಳು ವಿಭಕ್ತವಾಗಿ ಹಿರಿಯರನ್ನು ಪ್ರೀತಿ-ವಾತ್ಸಲ್ಯದಿಂದ ಕಾಣುವುದು ಕಡಿಮೆಯಾಗುತ್ತಿದೆ. ಪ್ರತಿಯೊಂದು ಕುಟುಂಬದ ಕಿರಿಯರು ಹಿರಿಯರಿಗೆ ಮುಪ್ಪಾವಸ್ಥೆಯಲ್ಲಿ ಒಳ್ಳೆಯ ಆರೈಕೆ, ಪ್ರೀತಿ, ಗೌರವವನ್ನು ನೀಡುವುದು ಆದ್ಯ ಕರ್ತವ್ಯವಾಗಿದೆ. ಪ್ರತಿಯೊಂದು ಮನೆಯಲ್ಲೂ ಹಿರಿಯ ನಾಗರಿಕರನ್ನು ಗೌರವಯುತವಾಗಿ ನಡೆಸಿಕೊಂಡು ಸಂತೋಷದ ಜೀವನ ನಡೆಸಲು ಅನುವು ಮಾಡಿಕೊಡಬೇಕು ಎಂದು ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ. ನಾರಾಯಣಸ್ವಾಮಿ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ “ಘನತೆಯ ಬಾಳಿನೊಂದಿಗೆ ವಯೋಪಕ್ವತೆ; ವಿಶ್ವದಾದ್ಯಂತ ಹಿರಿಯ ಜೀವಿಗಳಿಗೆ ಆರೈಕೆ ಮತ್ತು ಬೆಂಬಲ ವ್ಯವಸ್ಥೆಗಳನ್ನು ಸದೃಢಗೊಳಿಸುವುದರ ಮಹತ್ವ” ಎಂಬ ಘೋಷ ವಾಕ್ಯದೊಂದಿಗೆ ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ‘ವಿಶ್ವ ಹಿರಿಯ ನಾಗರಿಕರ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಮಾತನಾಡಿ ರಾಜ್ಯದಲ್ಲಿಯೇ ಜಿಲ್ಲೆಯಲ್ಲಿ 5 ಸಾವಿರ ಊರುಗೋಲುಗಳನ್ನು ಹಿರಿಯ ನಾಗರಿಕರಿಗೆ ಹಂತ ಹಂತವಾಗಿ ವಿತರಿಸಲಾಗುವುದು ಇದರಿಂದ ಹಿರಿಯ ನಾಗರಿಕರಿಗೆ ನಡೆದಾಡಲು ಸಹಾಯ ಕಲ್ಪಿಸುತ್ತದೆ. ಹಿರಿಯ ನಾಗರಿಕರ ಹಾಗೂ ವಿಶೇಷ ಚೇತನರ ಕುಂದು ಕೊರತೆಗಳನ್ನು ಪರಿಹರಿಸಲು ಜಿಲ್ಲಾಡಳಿತ ಸದಾ ಸಿದ್ಧವಿದೆ. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯೂ ನಿರಾಶ್ರಿತ ಹಿರಿಯ ನಾಗರಿಕರ ರಕ್ಷಣೆ, ಇಲಾಖೆಯ ಸಂಗಮ ಯೋಜನೆ ಹಾಗೂ ಹಿರಿಯ ನಾಗರಿಕರ ಮನರಂಜನಾ ಕಾರ್ಯಕ್ರಮಗಳನ್ನು ರೂಪಿಸಿ ನಾವೀನ್ಯ ಕಾರ್ಯಕ್ರಮಗಳು ರೂಪಿಸುತ್ತಿರುವುದು ಶ್ಲಾಘನೀಯ ಎಂದರು. ಈ ಸಂದರ್ಭದಲ್ಲಿ ಹಿರಿಯ ನಾಗರಿಕರು ಈಗಿರುವ 1200 ರೂಗಳ ಪಿಂಚಣಿ ಸೌಲಭ್ಯವನ್ನು 2000 ರೂಗಳಿಗೆ ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಇದಕ್ಕೆ ಜಿಲ್ಲಾಧಿಕಾರಿಗಳು ಸ್ಪಂದಿಸಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಹಿರಿಯ ನಾಗರಿಕರಿಗೆ ಆಶ್ವಾಸನೆ ನೀಡಿದರು.
ಇದೇ ವೇಳೆ ಕ್ರೀಡೆ, ಪ್ರಬಂಧ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯ ನಾಗರಿಕರನ್ನು ಅಭಿನಂದನಾ ಪತ್ರ ನೀಡಿ, ಸನ್ಮಾನಿಸಲಾಯಿತು.
ಸಭೆಯಲ್ಲಿ ಆಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜಯಲಕ್ಷ್ಮಮ್ಮ, ಉಪಾಧ್ಯಕ್ಷರಾದ ಪಿ. ಮುನಿರಾಜು, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಮುದ್ದಣ್ಣ, ಹಿರಿಯ ನಾಗರಿಕರ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆಯ ಜಿಲ್ಲಾ ಅಧಿಕಾರಿ ಜಗದೀಶ್ ಎನ್.ಎಂ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಅನಿತಾಲಕ್ಷ್ಮೀ, ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು, ಸಿಬ್ಬಂದಿ, ಜಿಲ್ಲಾ/ತಾಲ್ಲೂಕು ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು/ಪಧಾದಿಕಾರಿಗಳು, ಗ್ರಾಮೀಣ/ನಗರ/ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ಇಲಾಖೆಯ ಸಿಬ್ಬಂದಿಗಳು, ಹಿರಿಯ ನಾಗರಿಕರು, ವಿಶೇಷ ಚೇತನರು ಉಪಸ್ಥಿತರಿದ್ದರು.
Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…