ಹಿರಿಯ ನಾಗರಿಕರು ಹಾಗೂ ವಿಶೇಷಚೇತನರನ್ನು ಪ್ರೀತಿ-ವಾತ್ಸಲ್ಯದಿಂದ ಕಾಣಿ- 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ ಅಭಿಮತ

ಇಂದಿನ ದಿನಮಾನಗಳಲ್ಲಿ ನಗರೀಕರಣ ಬೆಳೆದಂತೆ ಕುಟುಂಬಗಳು ವಿಭಕ್ತವಾಗಿ ಹಿರಿಯರನ್ನು ಪ್ರೀತಿ-ವಾತ್ಸಲ್ಯದಿಂದ ಕಾಣುವುದು ಕಡಿಮೆಯಾಗುತ್ತಿದೆ. ಪ್ರತಿಯೊಂದು ಕುಟುಂಬದ ಕಿರಿಯರು ಹಿರಿಯರಿಗೆ ಮುಪ್ಪಾವಸ್ಥೆಯಲ್ಲಿ ಒಳ್ಳೆಯ ಆರೈಕೆ, ಪ್ರೀತಿ, ಗೌರವವನ್ನು ನೀಡುವುದು ಆದ್ಯ ಕರ್ತವ್ಯವಾಗಿದೆ. ಪ್ರತಿಯೊಂದು ಮನೆಯಲ್ಲೂ ಹಿರಿಯ ನಾಗರಿಕರನ್ನು ಗೌರವಯುತವಾಗಿ ನಡೆಸಿಕೊಂಡು ಸಂತೋಷದ ಜೀವನ ನಡೆಸಲು ಅನುವು ಮಾಡಿಕೊಡಬೇಕು ಎಂದು ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ. ನಾರಾಯಣಸ್ವಾಮಿ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ “ಘನತೆಯ ಬಾಳಿನೊಂದಿಗೆ ವಯೋಪಕ್ವತೆ; ವಿಶ್ವದಾದ್ಯಂತ ಹಿರಿಯ ಜೀವಿಗಳಿಗೆ ಆರೈಕೆ ಮತ್ತು ಬೆಂಬಲ ವ್ಯವಸ್ಥೆಗಳನ್ನು ಸದೃಢಗೊಳಿಸುವುದರ ಮಹತ್ವ” ಎಂಬ ಘೋಷ ವಾಕ್ಯದೊಂದಿಗೆ ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ‘ವಿಶ್ವ ಹಿರಿಯ ನಾಗರಿಕರ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಹಿರಿಯ ನಾಗರಿಕರು ಹಾಗೂ ವಿಶೇಷಚೇತನರನ್ನು ಗೌರವಿಸುವ ಪ್ರವೃತ್ತಿ ಹೆಚ್ಚಾಗಬೇಕು. ದೇವರು ವಿಶೇಷಚೇತನರಲ್ಲಿ ತನ್ನದೇಯಾದ ವಿಶಿಷ್ಟ ಕಲೆ, ಶಕ್ತಿ ನೀಡಿರುತ್ತಾನೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಸಾಧಕರನ್ನಾಗಿಸುವ ಕೆಲಸ ಮಾಡುವಂತಾಗಬೇಕಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಮಾತನಾಡಿ ರಾಜ್ಯದಲ್ಲಿಯೇ ಜಿಲ್ಲೆಯಲ್ಲಿ 5 ಸಾವಿರ ಊರುಗೋಲುಗಳನ್ನು ಹಿರಿಯ ನಾಗರಿಕರಿಗೆ ಹಂತ ಹಂತವಾಗಿ ವಿತರಿಸಲಾಗುವುದು ಇದರಿಂದ ಹಿರಿಯ ನಾಗರಿಕರಿಗೆ ನಡೆದಾಡಲು ಸಹಾಯ ಕಲ್ಪಿಸುತ್ತದೆ. ಹಿರಿಯ ನಾಗರಿಕರ ಹಾಗೂ ವಿಶೇಷ ಚೇತನರ ಕುಂದು ಕೊರತೆಗಳನ್ನು ಪರಿಹರಿಸಲು ಜಿಲ್ಲಾಡಳಿತ ಸದಾ ಸಿದ್ಧವಿದೆ. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯೂ ನಿರಾಶ್ರಿತ ಹಿರಿಯ ನಾಗರಿಕರ ರಕ್ಷಣೆ, ಇಲಾಖೆಯ ಸಂಗಮ ಯೋಜನೆ ಹಾಗೂ ಹಿರಿಯ ನಾಗರಿಕರ ಮನರಂಜನಾ ಕಾರ್ಯಕ್ರಮಗಳನ್ನು ರೂಪಿಸಿ ನಾವೀನ್ಯ ಕಾರ್ಯಕ್ರಮಗಳು ರೂಪಿಸುತ್ತಿರುವುದು ಶ್ಲಾಘನೀಯ ಎಂದರು. ಈ ಸಂದರ್ಭದಲ್ಲಿ ಹಿರಿಯ ನಾಗರಿಕರು ಈಗಿರುವ 1200 ರೂಗಳ ಪಿಂಚಣಿ ಸೌಲಭ್ಯವನ್ನು 2000 ರೂಗಳಿಗೆ ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಇದಕ್ಕೆ ಜಿಲ್ಲಾಧಿಕಾರಿಗಳು ಸ್ಪಂದಿಸಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಹಿರಿಯ ನಾಗರಿಕರಿಗೆ ಆಶ್ವಾಸನೆ ನೀಡಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಅಲಿಮ್ಕೊ ಸಂಸ್ಥೆಯ ವತಿಯಿಂದ ವಯೋಶ್ರೀ ಮತ್ತು ಅಡಿಪ್ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 235 ವಿಕಚೇತನರಿಗೆ (ವ್ಹೀಲ್‌ಚೇರ್, ಯಂತ್ರಚಾಲಿತ ವ್ಹೀಲ್ ಚೇರ್ ಕ್ರರ‍್ಸ್, ಕ್ಯಾಲಿರ‍್ಸ, ವಾಕರ್, ಶ್ರವಣ ಸಾಧನ ಹಾಗೂ ಇತರೆ ಸಲಕರಣೆಗಳು) ಹಾಗೂ 182 ಹಿರಿಯ ನಾಗರಿಕರಿಗೆ ಸಾಧನ ಸಲಕರಣೆ (ವ್ಹೀಲ್‌ಚೇರ್, ತ್ರಿಚಕ್ರ, ಕ್ರರ‍್ಸ, ವಾಕರ್, ಶ್ರವಣ ಸಾಧನ ಹಾಗೂ ಇತರೆ ಸಲಕರಣೆಗಳು) ವಿತರಣೆ ಮಾಡಲಾಯಿತು.

ಇದೇ ವೇಳೆ ಕ್ರೀಡೆ, ಪ್ರಬಂಧ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯ ನಾಗರಿಕರನ್ನು ಅಭಿನಂದನಾ ಪತ್ರ ನೀಡಿ, ಸನ್ಮಾನಿಸಲಾಯಿತು.

ಸಭೆಯಲ್ಲಿ ಆಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜಯಲಕ್ಷ್ಮಮ್ಮ, ಉಪಾಧ್ಯಕ್ಷರಾದ ಪಿ. ಮುನಿರಾಜು, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಮುದ್ದಣ್ಣ, ಹಿರಿಯ ನಾಗರಿಕರ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆಯ ಜಿಲ್ಲಾ ಅಧಿಕಾರಿ ಜಗದೀಶ್ ಎನ್.ಎಂ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಅನಿತಾಲಕ್ಷ್ಮೀ, ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು, ಸಿಬ್ಬಂದಿ, ಜಿಲ್ಲಾ/ತಾಲ್ಲೂಕು ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು/ಪಧಾದಿಕಾರಿಗಳು, ಗ್ರಾಮೀಣ/ನಗರ/ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ಇಲಾಖೆಯ ಸಿಬ್ಬಂದಿಗಳು, ಹಿರಿಯ ನಾಗರಿಕರು, ವಿಶೇಷ ಚೇತನರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…

43 minutes ago

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

24 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago