ನೈಟಿಂಗೇಲ್ ಮೆಡಿಕಲ್ ಟ್ರಸ್ಟ್, ಸೌಭಾಗ್ಯ ಸೇವಾ ಟ್ರಸ್ಟ್, ಗ್ರಾಮೀಣ ಅಭ್ಯುದಯ ಸೇವಾ ಸಂಸ್ಥೆ, ದೊಡ್ಡಬಳ್ಳಾಪುರ ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಹಿರಿಯ ನಾಗರಿಕರ ಆರೈಕೆ ಹಾಗೂ ಡಿಮೆನ್ಶಿಯಾ (ಮರೆವು ಖಾಯಿಲೆ) ಬಗ್ಗೆ ಅರಿವು ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರದ ಗ್ರಾಮೀಣ ಅಬ್ಯುದಯ ಸೇವಾ ಸಂಸ್ಥೆಯ ಕಚೇರಿಯಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಕಂಟನಕುಂಟೆ ಗ್ರಾಮ ಪಂಚಾಯತ್ ಅಧ್ಯೆಕ್ಷೆ ಶೋಭಾ ರಾಜಗೋಪಾಲ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿರಿಯ ನಾಗರಿಕರಿಗೆ ಮನೆಗಳಲ್ಲಿ ಹಾಗೂ ವಿವಿಧ ಸೇವಾ ಕ್ಷೇತ್ರಗಳಲ್ಲಿ ಗೌರವಯುತವಾದ ಸೇವೆ, ಆರೈಕೆಯನ್ನು ನೀಡಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು.
ಧರ್ಮಸ್ಥಳ ಗ್ರಾಮೀಣ ಅಭಿವೃದ್ದಿ ಸಂಸ್ಥೆಯ ಲಕ್ಷ್ಮೀಯವರು ಭಾಗವಹಿಸಿ ಹಿರಿಯ ನಾಗರೀಕರ ಸೇವೆಯಲ್ಲಿ ಸರ್ಕಾರದ ಹಾಗೂ ಸಂಘ ಸಂಸ್ಥೆಗಳ ಪಾತ್ರ ಬಹಳ ಮುಖ್ಯವಾಗಿರುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನೈಟಿಂಗೇಲ್ ಸಂಸ್ಥೆಯ ಸುರೇಶ್, ಸೋಫಿಯಾ ಭಾಗವಹಿಸಿ, ಡಿಮೆನ್ಶಿಯಾ ಬಗ್ಗೆ ಕಾರ್ಯಕ್ರಮದಲ್ಲಿ ಹಾಜರಿದ್ದ ಅಂಗನವಾಡಿ ಕಾರ್ಯಕರ್ತೆಯರು, ಶೂಷ್ರೂಷಕಿಯರು, ಸ್ವಯಂಸೇವಾ ಕಾರ್ಯಕರ್ತೆಯರಿಗೆ ವಿವರವಾಗಿ ತಿಳಿಸಿಕೊಟ್ಟರು.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…