ಹಿರಿಯ ನಾಗರಿಕರ ಆರೈಕೆ ಹಾಗೂ ಡಿಮೆನ್ಶಿಯಾ (ಮರೆವು ಖಾಯಿಲೆ) ಬಗ್ಗೆ ಅರಿವು

ನೈಟಿಂಗೇಲ್ ಮೆಡಿಕಲ್ ಟ್ರಸ್ಟ್, ಸೌಭಾಗ್ಯ ಸೇವಾ ಟ್ರಸ್ಟ್, ಗ್ರಾಮೀಣ ಅಭ್ಯುದಯ ಸೇವಾ ಸಂಸ್ಥೆ, ದೊಡ್ಡಬಳ್ಳಾಪುರ ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಹಿರಿಯ ನಾಗರಿಕರ ಆರೈಕೆ ಹಾಗೂ ಡಿಮೆನ್ಶಿಯಾ (ಮರೆವು ಖಾಯಿಲೆ) ಬಗ್ಗೆ ಅರಿವು ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರದ ಗ್ರಾಮೀಣ ಅಬ್ಯುದಯ ಸೇವಾ ಸಂಸ್ಥೆಯ ಕಚೇರಿಯಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಕಂಟನಕುಂಟೆ ಗ್ರಾಮ ಪಂಚಾಯತ್ ಅಧ್ಯೆಕ್ಷೆ ಶೋಭಾ ರಾಜಗೋಪಾಲ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿರಿಯ ನಾಗರಿಕರಿಗೆ ಮನೆಗಳಲ್ಲಿ ಹಾಗೂ ವಿವಿಧ ಸೇವಾ ಕ್ಷೇತ್ರಗಳಲ್ಲಿ ಗೌರವಯುತವಾದ ಸೇವೆ, ಆರೈಕೆಯನ್ನು ನೀಡಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅಂಗನವಾಡಿ ಅಸೋಸಿಯೇಷನ್ ನ ಅದ್ಯಕ್ಷರಾದ ನಳಿನಾಕ್ಷಿ ಮಾತನಾಡಿ, ನೈಟಿಂಗೇಲ್ ಟ್ರಸ್ಟ್‌ ರವರು ತಾಲ್ಲೂಕಿನ ತಿರುಮಗೊಂಡನಹಳ್ಳಿಯಲ್ಲಿ 100 ಹಾಸಿಗೆಗಳ ಡಿಮೆನ್ಶಿಯಾ ಆರೈಕೆ ಕೇಂದ್ರ ನಿರ್ಮಿಸುತ್ತಿರುವುದು ಶ್ಲಾಘನೀಯವಾಗಿರುತ್ತದೆ. ಇದರಿಂದ ತಾಲ್ಲೂಕಿನ ಜನತೆಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಧರ್ಮಸ್ಥಳ ಗ್ರಾಮೀಣ ಅಭಿವೃದ್ದಿ ಸಂಸ್ಥೆಯ ಲಕ್ಷ್ಮೀಯವರು ಭಾಗವಹಿಸಿ ಹಿರಿಯ ನಾಗರೀಕರ ಸೇವೆಯಲ್ಲಿ ಸರ್ಕಾರದ ಹಾಗೂ ಸಂಘ ಸಂಸ್ಥೆಗಳ ಪಾತ್ರ ಬಹಳ ಮುಖ್ಯವಾಗಿರುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನೈಟಿಂಗೇಲ್ ಸಂಸ್ಥೆಯ ಸುರೇಶ್, ಸೋಫಿಯಾ ಭಾಗವಹಿಸಿ, ಡಿಮೆನ್ಶಿಯಾ ಬಗ್ಗೆ ಕಾರ್ಯಕ್ರಮದಲ್ಲಿ ಹಾಜರಿದ್ದ ಅಂಗನವಾಡಿ ಕಾರ್ಯಕರ್ತೆಯರು, ಶೂಷ್ರೂಷಕಿಯರು, ಸ್ವಯಂಸೇವಾ ಕಾರ್ಯಕರ್ತೆಯರಿಗೆ ವಿವರವಾಗಿ ತಿಳಿಸಿಕೊಟ್ಟರು.

Ramesh Babu

Journalist

Recent Posts

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

15 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

1 day ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

1 day ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

2 days ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 days ago