ಹಿರಿಯ ನಾಗರಿಕರ ಕಲ್ಯಾಣಕ್ಕೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಿ – ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್

ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿವಾರು ಹಾಗೂ ಗ್ರಾಮವಾರು ಹಿರಿಯ ನಾಗರಿಕರಿಗೆ ಅವಶ್ಯಕವಾದ ಆರೋಗ್ಯ ತಪಾಸಣೆಯನ್ನು ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಮೂಲಕ ಜಾರಿ ಮಾಡಲು ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸುವುದಾಗಿ ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ್ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ  ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ  ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ಊರುಗೋಲುಗಳ ಮೂಲಕ ನಡೆದಾಡುವಂತಹ ಹಿರಿಯ ನಾಗರಿಕರಿಗೆ 5000 ಊರುಗೋಲುಗಳನ್ನು ಶೀಘ್ರವಾಗಿಯೇ ವಿತರಿಸುವುದಾಗಿ ಕಾರ್ಯಕ್ರಮದಲ್ಲಿ  ಘೋಷಿಸುವುದರ ಜೊತೆಗೆ 10 ಜನ ಹಿರಿಯ ನಾಗರಿಕರಿಗೆ ಸಾಂಕೇತಿಕವಾಗಿ ಹಿರಿಯ ನಾಗರಿಕರ ಊರುಗೋಲುಗಳನ್ನು ವಿತರಿಸಿದರು. ಪ್ರತಿ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರ ಕಾನೂನು ಅರಿವಿಗಾಗಿ ಪಾಲಕರ ಪೋಷಣೆ ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣಾ ಕಾಯ್ದೆಯ ಕಾರ್ಯಾಗಾರಗಳನ್ನು ಏರ್ಪಡಿಸಲು ಯೋಜನೆ ರೂಪಿಸುವುದಾಗಿ ತಿಳಿಸಿದರು.

ನಿರಾಶ್ರಿತ ಹಿರಿಯ ನಾಗರಿಕರ ರಕ್ಷಣೆ, ಇಲಾಖೆಯ ಸಂಗಮ ಯೋಜನೆ ಹಾಗೂ ಪ್ರತಿ ಶುಕ್ರವಾರ ಹಿರಿಯ ನಾಗರಿಕರ ಮನರಂಜನಾ ಕಾರ್ಯಕ್ರಮಗಳನ್ನು ರೂಪಿಸಿ ನಾವೀನ್ಯ ಕಾರ್ಯಕ್ರಮಗಳನ್ನು ಜಿಲ್ಲಾಡಳಿತದ ಗಮನಕ್ಕೆ ತಂದು ಅನುಷ್ಟಾನಗೊಳಿಸಿದ್ದಕ್ಕಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯನ್ನು ಶ್ಲಾಘಿಸಿದರು.

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ ಎನ್ ಅನುರಾಧ ಅವರು ಮಾತನಾಡಿ,  ಜಿಲ್ಲಾ ಪಂಚಾಯತ್‌ನಲ್ಲಿಯೂ ಸಹ ಹಿರಿಯ ನಾಗರಿಕರಿಗೆ ವಿಶೇಷ ಆದ್ಯತೆಯ ಮೇರೆಗೆ ಸೌಲಭ್ಯಗಳನ್ನು ದೊರಕಿಸಿ ಕೊಡುವುದಾಗಿ ಹಾಗೂ ಪ್ರತಿಯೊಬ್ಬರು ಹಿರಿಯ ನಾಗರಿಕರನ್ನು ಗೌರವಯುತವಾಗಿ ನಡೆಸಿಕೊಂಡು ಸಂತೋಷದ ಜೀವನ ನಡೆಸಲು ಅನುವು ಮಾಡಿಕೊಡಲು ತಿಳಿಸಿದರು.  ಜಿಲ್ಲಾ ಪಂಚಾಯತ್ ಅನುದಾನದಲ್ಲಿ ಸ್ವೀಕೃತವಾಗಿದ್ದಂತಹ ಹಿರಿಯ ನಾಗರಿಕರ ಶ್ರವಣ ಸಾಧನೆಗಳನ್ನು ಹಾಗೂ ಇಲಾಖಾ ಅನುದಾನಿತ ಸಂಸ್ಥೆ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ವತಿಯಿಂದ ಹಿರಿಯ ನಾಗರಿಕ ವಿಕಲಚೇತನ ವ್ಯಕ್ತಿಗೆ ಕೃತಕ ಕಾಲನ್ನು ಅಳವಡಿಸಲಾಯಿತು.

ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಜಗದೀಶ ಎನ್ ಎಂ ರವರು ಮಾತನಾಡಿ, ಪ್ರತಿ ಮನೆಯಲ್ಲಿಯೂ ಹಿರಿಯ ನಾಗರಿಕರನ್ನು ಗೌರವಿಸುವ ಪ್ರವೃತ್ತಿ ಹೆಚ್ಚಾಗಬೇಕು ಹಾಗೂ ಹಿರಿಯರ ಮತ್ತು ಹಿರಿಯರ ನಡುವೆ ಬಾಂಧವ್ಯ ಹೆಚ್ಚಿಸಿಕೊಳ್ಳುವ ಕೌಟುಂಬಿಕ ವಾತಾವರಣ ನಿರ್ಮಾಣವಾಗಬೇಕು.

ಇದಕ್ಕಾಗಿಯೇ ಇಲಾಖೆಯಿಂದ ಜಿಲ್ಲಾ ಮಟ್ಟದ ಸಂಗಮ ಹಿರಿಯರು ಮತ್ತು ಕಿರಿಯರ ವಾತ್ಸಲ್ಯದ ವೇದಿಕೆ ಹಾಗೂ ಪ್ರತಿ ಶುಕ್ರವಾರ ಹಿರಿಯ ನಾಗರಿಕರ ಮನರಂಜನ ಚಟುವಟಿಕೆಗಳನ್ನು ಪ್ರತಿ ಮನೆಯಲ್ಲಿಯೂ ಕೈಗೊಂಡು ಹಿರಿಯ ನಾಗರೀಕರ ಮನರಂಜನೆ ಆರೋಗ್ಯ ಮತ್ತು ಇತರೆ ಕಾಳಜಿಗಳನ್ನು ವಹಿಸಲು ವಿಶೇಷ ದಿನವನ್ನಾಗಿ ಆಚರಿಸಲು ತಿಳಿಸಿದರು.

ಪ್ರತಿಯೊಬ್ಬ ಹಿರಿಯ ನಾಗರಿಕರು ತಮ್ಮ ಬಳಿ ಒಂದು ಊರುಗೋಲನ್ನ ಇಟ್ಟುಕೊಳ್ಳಲು ಒಂದು ಊರುಗೋಲು ಒಬ್ಬ ವ್ಯಕ್ತಿ ಜೊತೆಗಿದ್ದಷ್ಟು ಸಮಾನವಾದದ್ದು ಎಂಬುದನ್ನು ಹಿರಿಯರಿಗೆ ತಿಳಿಸಿದರು.

ಇದೇ ವೇಳೆ ಕ್ರೀಡಾ & ಸಾಂಸ್ಕೃತಿಕ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 09 ಹಿರಿಯ ನಾಗರಿಕರನ್ನು ಮತ್ತು ಒಂದು ಸಂಸ್ಥೆಯನ್ನು ಸನ್ಮಾನಿಸಿ ಆಭಿನಂದಿಸಲಾಯಿತು.

100 ವರ್ಷ ಮೇಲ್ಪಟ್ಟ ಇಬ್ಬರು ಹಿರಿಯ ನಾಗರಿಕರಾದ ಶ್ರೀಮತಿ ಮುನಿಯಮ್ಮ ಆದಿನಾರಾಯಣ ಹೊಸಹಳ್ಳಿ ಹಾಗೂ ಶ್ರೀ.ಕೆಂಪಣ್ಣ ಆದಿನಾರಾಯಣ ಹೊಸಹಳ್ಳಿ ಇವರನ್ನು ಮಾನ್ಯ ಚುನಾವಣೆ ಆಯೋಗದ ನಿರ್ದೇಶನದಂತೆ ಹಿರಿಯ ಮತದಾರರೆಂದು ಸನ್ಮಾನಿಸಲಾಯಿತು.

ಸಭೆಯಲ್ಲಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು, ಸಿಬ್ಬಂದಿಗಳು, ಜಿಲ್ಲಾ, ತಾಲ್ಲೂಕು ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪಧಾದಿಕಾರಿಗಳು, ಗ್ರಾಮೀಣ, ನಗರ, ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

3 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

11 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

11 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago