ಹಿರಿಯ ನಾಗರಿಕರ ಕಲ್ಯಾಣಕ್ಕೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಿ – ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್

ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿವಾರು ಹಾಗೂ ಗ್ರಾಮವಾರು ಹಿರಿಯ ನಾಗರಿಕರಿಗೆ ಅವಶ್ಯಕವಾದ ಆರೋಗ್ಯ ತಪಾಸಣೆಯನ್ನು ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಮೂಲಕ ಜಾರಿ ಮಾಡಲು ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸುವುದಾಗಿ ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ್ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ  ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ  ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ಊರುಗೋಲುಗಳ ಮೂಲಕ ನಡೆದಾಡುವಂತಹ ಹಿರಿಯ ನಾಗರಿಕರಿಗೆ 5000 ಊರುಗೋಲುಗಳನ್ನು ಶೀಘ್ರವಾಗಿಯೇ ವಿತರಿಸುವುದಾಗಿ ಕಾರ್ಯಕ್ರಮದಲ್ಲಿ  ಘೋಷಿಸುವುದರ ಜೊತೆಗೆ 10 ಜನ ಹಿರಿಯ ನಾಗರಿಕರಿಗೆ ಸಾಂಕೇತಿಕವಾಗಿ ಹಿರಿಯ ನಾಗರಿಕರ ಊರುಗೋಲುಗಳನ್ನು ವಿತರಿಸಿದರು. ಪ್ರತಿ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರ ಕಾನೂನು ಅರಿವಿಗಾಗಿ ಪಾಲಕರ ಪೋಷಣೆ ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣಾ ಕಾಯ್ದೆಯ ಕಾರ್ಯಾಗಾರಗಳನ್ನು ಏರ್ಪಡಿಸಲು ಯೋಜನೆ ರೂಪಿಸುವುದಾಗಿ ತಿಳಿಸಿದರು.

ನಿರಾಶ್ರಿತ ಹಿರಿಯ ನಾಗರಿಕರ ರಕ್ಷಣೆ, ಇಲಾಖೆಯ ಸಂಗಮ ಯೋಜನೆ ಹಾಗೂ ಪ್ರತಿ ಶುಕ್ರವಾರ ಹಿರಿಯ ನಾಗರಿಕರ ಮನರಂಜನಾ ಕಾರ್ಯಕ್ರಮಗಳನ್ನು ರೂಪಿಸಿ ನಾವೀನ್ಯ ಕಾರ್ಯಕ್ರಮಗಳನ್ನು ಜಿಲ್ಲಾಡಳಿತದ ಗಮನಕ್ಕೆ ತಂದು ಅನುಷ್ಟಾನಗೊಳಿಸಿದ್ದಕ್ಕಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯನ್ನು ಶ್ಲಾಘಿಸಿದರು.

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ ಎನ್ ಅನುರಾಧ ಅವರು ಮಾತನಾಡಿ,  ಜಿಲ್ಲಾ ಪಂಚಾಯತ್‌ನಲ್ಲಿಯೂ ಸಹ ಹಿರಿಯ ನಾಗರಿಕರಿಗೆ ವಿಶೇಷ ಆದ್ಯತೆಯ ಮೇರೆಗೆ ಸೌಲಭ್ಯಗಳನ್ನು ದೊರಕಿಸಿ ಕೊಡುವುದಾಗಿ ಹಾಗೂ ಪ್ರತಿಯೊಬ್ಬರು ಹಿರಿಯ ನಾಗರಿಕರನ್ನು ಗೌರವಯುತವಾಗಿ ನಡೆಸಿಕೊಂಡು ಸಂತೋಷದ ಜೀವನ ನಡೆಸಲು ಅನುವು ಮಾಡಿಕೊಡಲು ತಿಳಿಸಿದರು.  ಜಿಲ್ಲಾ ಪಂಚಾಯತ್ ಅನುದಾನದಲ್ಲಿ ಸ್ವೀಕೃತವಾಗಿದ್ದಂತಹ ಹಿರಿಯ ನಾಗರಿಕರ ಶ್ರವಣ ಸಾಧನೆಗಳನ್ನು ಹಾಗೂ ಇಲಾಖಾ ಅನುದಾನಿತ ಸಂಸ್ಥೆ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ವತಿಯಿಂದ ಹಿರಿಯ ನಾಗರಿಕ ವಿಕಲಚೇತನ ವ್ಯಕ್ತಿಗೆ ಕೃತಕ ಕಾಲನ್ನು ಅಳವಡಿಸಲಾಯಿತು.

ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಜಗದೀಶ ಎನ್ ಎಂ ರವರು ಮಾತನಾಡಿ, ಪ್ರತಿ ಮನೆಯಲ್ಲಿಯೂ ಹಿರಿಯ ನಾಗರಿಕರನ್ನು ಗೌರವಿಸುವ ಪ್ರವೃತ್ತಿ ಹೆಚ್ಚಾಗಬೇಕು ಹಾಗೂ ಹಿರಿಯರ ಮತ್ತು ಹಿರಿಯರ ನಡುವೆ ಬಾಂಧವ್ಯ ಹೆಚ್ಚಿಸಿಕೊಳ್ಳುವ ಕೌಟುಂಬಿಕ ವಾತಾವರಣ ನಿರ್ಮಾಣವಾಗಬೇಕು.

ಇದಕ್ಕಾಗಿಯೇ ಇಲಾಖೆಯಿಂದ ಜಿಲ್ಲಾ ಮಟ್ಟದ ಸಂಗಮ ಹಿರಿಯರು ಮತ್ತು ಕಿರಿಯರ ವಾತ್ಸಲ್ಯದ ವೇದಿಕೆ ಹಾಗೂ ಪ್ರತಿ ಶುಕ್ರವಾರ ಹಿರಿಯ ನಾಗರಿಕರ ಮನರಂಜನ ಚಟುವಟಿಕೆಗಳನ್ನು ಪ್ರತಿ ಮನೆಯಲ್ಲಿಯೂ ಕೈಗೊಂಡು ಹಿರಿಯ ನಾಗರೀಕರ ಮನರಂಜನೆ ಆರೋಗ್ಯ ಮತ್ತು ಇತರೆ ಕಾಳಜಿಗಳನ್ನು ವಹಿಸಲು ವಿಶೇಷ ದಿನವನ್ನಾಗಿ ಆಚರಿಸಲು ತಿಳಿಸಿದರು.

ಪ್ರತಿಯೊಬ್ಬ ಹಿರಿಯ ನಾಗರಿಕರು ತಮ್ಮ ಬಳಿ ಒಂದು ಊರುಗೋಲನ್ನ ಇಟ್ಟುಕೊಳ್ಳಲು ಒಂದು ಊರುಗೋಲು ಒಬ್ಬ ವ್ಯಕ್ತಿ ಜೊತೆಗಿದ್ದಷ್ಟು ಸಮಾನವಾದದ್ದು ಎಂಬುದನ್ನು ಹಿರಿಯರಿಗೆ ತಿಳಿಸಿದರು.

ಇದೇ ವೇಳೆ ಕ್ರೀಡಾ & ಸಾಂಸ್ಕೃತಿಕ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 09 ಹಿರಿಯ ನಾಗರಿಕರನ್ನು ಮತ್ತು ಒಂದು ಸಂಸ್ಥೆಯನ್ನು ಸನ್ಮಾನಿಸಿ ಆಭಿನಂದಿಸಲಾಯಿತು.

100 ವರ್ಷ ಮೇಲ್ಪಟ್ಟ ಇಬ್ಬರು ಹಿರಿಯ ನಾಗರಿಕರಾದ ಶ್ರೀಮತಿ ಮುನಿಯಮ್ಮ ಆದಿನಾರಾಯಣ ಹೊಸಹಳ್ಳಿ ಹಾಗೂ ಶ್ರೀ.ಕೆಂಪಣ್ಣ ಆದಿನಾರಾಯಣ ಹೊಸಹಳ್ಳಿ ಇವರನ್ನು ಮಾನ್ಯ ಚುನಾವಣೆ ಆಯೋಗದ ನಿರ್ದೇಶನದಂತೆ ಹಿರಿಯ ಮತದಾರರೆಂದು ಸನ್ಮಾನಿಸಲಾಯಿತು.

ಸಭೆಯಲ್ಲಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು, ಸಿಬ್ಬಂದಿಗಳು, ಜಿಲ್ಲಾ, ತಾಲ್ಲೂಕು ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪಧಾದಿಕಾರಿಗಳು, ಗ್ರಾಮೀಣ, ನಗರ, ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

19 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

5 days ago