ಹಿರಿಯ ನಾಗರಿಕರ ಕಲ್ಯಾಣಕ್ಕೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಿ – ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್

ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿವಾರು ಹಾಗೂ ಗ್ರಾಮವಾರು ಹಿರಿಯ ನಾಗರಿಕರಿಗೆ ಅವಶ್ಯಕವಾದ ಆರೋಗ್ಯ ತಪಾಸಣೆಯನ್ನು ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಮೂಲಕ ಜಾರಿ ಮಾಡಲು ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸುವುದಾಗಿ ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ್ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ  ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ  ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ಊರುಗೋಲುಗಳ ಮೂಲಕ ನಡೆದಾಡುವಂತಹ ಹಿರಿಯ ನಾಗರಿಕರಿಗೆ 5000 ಊರುಗೋಲುಗಳನ್ನು ಶೀಘ್ರವಾಗಿಯೇ ವಿತರಿಸುವುದಾಗಿ ಕಾರ್ಯಕ್ರಮದಲ್ಲಿ  ಘೋಷಿಸುವುದರ ಜೊತೆಗೆ 10 ಜನ ಹಿರಿಯ ನಾಗರಿಕರಿಗೆ ಸಾಂಕೇತಿಕವಾಗಿ ಹಿರಿಯ ನಾಗರಿಕರ ಊರುಗೋಲುಗಳನ್ನು ವಿತರಿಸಿದರು. ಪ್ರತಿ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರ ಕಾನೂನು ಅರಿವಿಗಾಗಿ ಪಾಲಕರ ಪೋಷಣೆ ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣಾ ಕಾಯ್ದೆಯ ಕಾರ್ಯಾಗಾರಗಳನ್ನು ಏರ್ಪಡಿಸಲು ಯೋಜನೆ ರೂಪಿಸುವುದಾಗಿ ತಿಳಿಸಿದರು.

ನಿರಾಶ್ರಿತ ಹಿರಿಯ ನಾಗರಿಕರ ರಕ್ಷಣೆ, ಇಲಾಖೆಯ ಸಂಗಮ ಯೋಜನೆ ಹಾಗೂ ಪ್ರತಿ ಶುಕ್ರವಾರ ಹಿರಿಯ ನಾಗರಿಕರ ಮನರಂಜನಾ ಕಾರ್ಯಕ್ರಮಗಳನ್ನು ರೂಪಿಸಿ ನಾವೀನ್ಯ ಕಾರ್ಯಕ್ರಮಗಳನ್ನು ಜಿಲ್ಲಾಡಳಿತದ ಗಮನಕ್ಕೆ ತಂದು ಅನುಷ್ಟಾನಗೊಳಿಸಿದ್ದಕ್ಕಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯನ್ನು ಶ್ಲಾಘಿಸಿದರು.

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ ಎನ್ ಅನುರಾಧ ಅವರು ಮಾತನಾಡಿ,  ಜಿಲ್ಲಾ ಪಂಚಾಯತ್‌ನಲ್ಲಿಯೂ ಸಹ ಹಿರಿಯ ನಾಗರಿಕರಿಗೆ ವಿಶೇಷ ಆದ್ಯತೆಯ ಮೇರೆಗೆ ಸೌಲಭ್ಯಗಳನ್ನು ದೊರಕಿಸಿ ಕೊಡುವುದಾಗಿ ಹಾಗೂ ಪ್ರತಿಯೊಬ್ಬರು ಹಿರಿಯ ನಾಗರಿಕರನ್ನು ಗೌರವಯುತವಾಗಿ ನಡೆಸಿಕೊಂಡು ಸಂತೋಷದ ಜೀವನ ನಡೆಸಲು ಅನುವು ಮಾಡಿಕೊಡಲು ತಿಳಿಸಿದರು.  ಜಿಲ್ಲಾ ಪಂಚಾಯತ್ ಅನುದಾನದಲ್ಲಿ ಸ್ವೀಕೃತವಾಗಿದ್ದಂತಹ ಹಿರಿಯ ನಾಗರಿಕರ ಶ್ರವಣ ಸಾಧನೆಗಳನ್ನು ಹಾಗೂ ಇಲಾಖಾ ಅನುದಾನಿತ ಸಂಸ್ಥೆ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ವತಿಯಿಂದ ಹಿರಿಯ ನಾಗರಿಕ ವಿಕಲಚೇತನ ವ್ಯಕ್ತಿಗೆ ಕೃತಕ ಕಾಲನ್ನು ಅಳವಡಿಸಲಾಯಿತು.

ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಜಗದೀಶ ಎನ್ ಎಂ ರವರು ಮಾತನಾಡಿ, ಪ್ರತಿ ಮನೆಯಲ್ಲಿಯೂ ಹಿರಿಯ ನಾಗರಿಕರನ್ನು ಗೌರವಿಸುವ ಪ್ರವೃತ್ತಿ ಹೆಚ್ಚಾಗಬೇಕು ಹಾಗೂ ಹಿರಿಯರ ಮತ್ತು ಹಿರಿಯರ ನಡುವೆ ಬಾಂಧವ್ಯ ಹೆಚ್ಚಿಸಿಕೊಳ್ಳುವ ಕೌಟುಂಬಿಕ ವಾತಾವರಣ ನಿರ್ಮಾಣವಾಗಬೇಕು.

ಇದಕ್ಕಾಗಿಯೇ ಇಲಾಖೆಯಿಂದ ಜಿಲ್ಲಾ ಮಟ್ಟದ ಸಂಗಮ ಹಿರಿಯರು ಮತ್ತು ಕಿರಿಯರ ವಾತ್ಸಲ್ಯದ ವೇದಿಕೆ ಹಾಗೂ ಪ್ರತಿ ಶುಕ್ರವಾರ ಹಿರಿಯ ನಾಗರಿಕರ ಮನರಂಜನ ಚಟುವಟಿಕೆಗಳನ್ನು ಪ್ರತಿ ಮನೆಯಲ್ಲಿಯೂ ಕೈಗೊಂಡು ಹಿರಿಯ ನಾಗರೀಕರ ಮನರಂಜನೆ ಆರೋಗ್ಯ ಮತ್ತು ಇತರೆ ಕಾಳಜಿಗಳನ್ನು ವಹಿಸಲು ವಿಶೇಷ ದಿನವನ್ನಾಗಿ ಆಚರಿಸಲು ತಿಳಿಸಿದರು.

ಪ್ರತಿಯೊಬ್ಬ ಹಿರಿಯ ನಾಗರಿಕರು ತಮ್ಮ ಬಳಿ ಒಂದು ಊರುಗೋಲನ್ನ ಇಟ್ಟುಕೊಳ್ಳಲು ಒಂದು ಊರುಗೋಲು ಒಬ್ಬ ವ್ಯಕ್ತಿ ಜೊತೆಗಿದ್ದಷ್ಟು ಸಮಾನವಾದದ್ದು ಎಂಬುದನ್ನು ಹಿರಿಯರಿಗೆ ತಿಳಿಸಿದರು.

ಇದೇ ವೇಳೆ ಕ್ರೀಡಾ & ಸಾಂಸ್ಕೃತಿಕ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 09 ಹಿರಿಯ ನಾಗರಿಕರನ್ನು ಮತ್ತು ಒಂದು ಸಂಸ್ಥೆಯನ್ನು ಸನ್ಮಾನಿಸಿ ಆಭಿನಂದಿಸಲಾಯಿತು.

100 ವರ್ಷ ಮೇಲ್ಪಟ್ಟ ಇಬ್ಬರು ಹಿರಿಯ ನಾಗರಿಕರಾದ ಶ್ರೀಮತಿ ಮುನಿಯಮ್ಮ ಆದಿನಾರಾಯಣ ಹೊಸಹಳ್ಳಿ ಹಾಗೂ ಶ್ರೀ.ಕೆಂಪಣ್ಣ ಆದಿನಾರಾಯಣ ಹೊಸಹಳ್ಳಿ ಇವರನ್ನು ಮಾನ್ಯ ಚುನಾವಣೆ ಆಯೋಗದ ನಿರ್ದೇಶನದಂತೆ ಹಿರಿಯ ಮತದಾರರೆಂದು ಸನ್ಮಾನಿಸಲಾಯಿತು.

ಸಭೆಯಲ್ಲಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು, ಸಿಬ್ಬಂದಿಗಳು, ಜಿಲ್ಲಾ, ತಾಲ್ಲೂಕು ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪಧಾದಿಕಾರಿಗಳು, ಗ್ರಾಮೀಣ, ನಗರ, ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

4 hours ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

7 hours ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

20 hours ago

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

1 day ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

1 day ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

2 days ago