ಕೇರಳಾದ ಕೊಟ್ಟಾಯಂ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಅಮಾನುಷವಾಗಿ ಸುಮಾರು ಮೂರು ತಿಂಗಳ ಕಾಲ ರ್ಯಾಗಿಂಗ್ಗೆ ಒಳಗಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ಕೊಟ್ಟಾಯಂ ಸರ್ಕಾರಿ ನರ್ಸಿಂಗ್ ಕಾಲೇಜಿನ ಮೂರನೇ ವರ್ಷದ ಐವರು ವಿದ್ಯಾರ್ಥಿಗಳು ರ್ಯಾಗಿಂಗ್ ನೆಪದಲ್ಲಿ ಪ್ರಥಮ ವರ್ಷದ ಮೂವರು ವಿದ್ಯಾರ್ಥಿಗಳನ್ನು ಅತ್ಯಂತ ಭೀಕರವಾಗಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಿಂಸಿಸಿದ್ದಾರೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿದ ಆರೋಪದ ಮೇಲೆ ತಪ್ಪಿತಸ್ಥ ವಿದ್ಯಾರ್ಥಿಗಳ ಬಂಧನವಾಗಿದೆ.
ಕಳೆದ ವರ್ಷ ನವೆಂಬರ್ನಿಂದ ನಿರಂತರವಾಗಿ ರ್ಯಾಗಿಂಗ್ಗೆ ಒಳಗಾಗಿರುವುದಾಗಿ ತಿರುವನಂತಪುರಂ ಮೂಲದ ಜೂನಿಯರ್ ವಿದ್ಯಾರ್ಥಿಗಳು ದೂರಿನಲ್ಲಿ ತಿಳಿಸಿದ್ದಾರೆ.
ದೂರಿನ ಆಧಾರದ ಮೇಲೆ ಆರೋಪಿ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿ, 2011ರ ಅಂಟಿ-ರ್ಯಾಗಿಂಗ್ ಕಾಯ್ದೆಯಡಿ ಬಂಧಿಸಲಾಗಿದೆ.
ಎರಡನೇ ವರ್ಷದ ಸಾಮಾನ್ಯ ನರ್ಸಿಂಗ್ ವಿದ್ಯಾರ್ಥಿಗಳಾದ ಸ್ಯಾಮ್ಯುಯೆಲ್ ಜಾನ್ಸನ್ (20), ಎನ್.ಎನ್.ಜೀವಾ (19) ಮತ್ತು ಮೂರನೇ ವರ್ಷದ ವಿದ್ಯಾರ್ಥಿಗಳಾದ ರಾಹುಲ್ ರಾಜ್ ಕೆ.ಪಿ (22), ಸಿ.ರಿಜಿಲ್ಟಿತ್ (21), ವಿವೇಕ್ ಎನ್ವಿ (21) ಬಂಧಿತ ವಿದ್ಯಾರ್ಥಿಗಳು.
‘ಜೂನಿಯರ್ ವಿದ್ಯಾರ್ಥಿಗಳಿಗೆ ಬೆತ್ತಲೆಯಾಗಿ ನಿಲ್ಲುವಂತೆ ಒತ್ತಾಯಿಸಿ, ಅವರ ಖಾಸಗಿ ಅಂಗಗಳಿಗೆ ಡಂಬಲ್ಸ್ಗಳನ್ನು ನೇತು ಹಾಕಲಾಗುತ್ತಿತ್ತು’ ಎಂದು ಗಾಂಧಿ ನಗರ ಪೊಲೀಸರು ತಿಳಿಸಿದ್ದಾರೆ.
ಜೊತೆಗೆ ‘ಜ್ಯಾಮಿಟ್ರಿ ಬಾಕ್ಸ್ ಕಂಪಾಸ್ನಲ್ಲಿದ್ದ ಚೂಪಾದ ವಸ್ತುಗಳಿಂದ ಗಾಯಗೊಳಿಸಲಾಗುತ್ತಿತ್ತು. ಬಳಿಕ ಗಾಯಗಳಿಗೆ ಲೋಷನ್ ಹಚ್ಚಿ ನೋವುಂಟು ಮಾಡುತ್ತಿದ್ದರು. ಜೂನಿಯರ್ ವಿದ್ಯಾರ್ಥಿಗಳು ನೋವಿನಿಂದ ಕಿರುಚಾಡಿದಾಗ ಬಲವಂತವಾಗಿ ಲೋಷನ್ ಅನ್ನು ಬಾಯಿಗೆ ತುಂಬಿಸುತ್ತಿದ್ದರು. ಈ ಕೃತ್ಯಗಳನ್ನು ವಿಡಿಯೋ ಮಾಡಿಕೊಂಡು, ಯಾರಿಗಾದರೂ ಹೇಳಿದರೆ ಶಿಕ್ಷಣಕ್ಕೆ ತೊಂದರೆ ಕೊಡುವುದಾಗಿ ಬೆದರಿಕೆ ಹಾಕುತ್ತಿದ್ದರು’ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಭಾನುವಾರ ಹಿರಿಯ ವಿದ್ಯಾರ್ಥಿಗಳು ಜೂನಿಯರ್ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡುತ್ತಿದ್ದರು. ಹಣ ನೀಡಲು ನಿರಾಕರಿಸಿದವರು ಥಳಿತಕ್ಕೊಳಗಾಗುತ್ತಿದ್ದರು. ಕೊನೆಗೆ ಚಿತ್ರ ಹಿಂಸೆಯನ್ನು ತಾಳಲಾರದೆ ಓರ್ವ ವಿದ್ಯಾರ್ಥಿ ತನ್ನ ತಂದೆಗೆ ವಿಷಯ ತಿಳಿಸಿದ್ದಾನೆ. ಬಳಿಕ ವಿದ್ಯಾರ್ಥಿ ತಂದೆಯೇ ಪೊಲೀಸರಿಗೆ ದೂರು ನೀಡಲು ತಿಳಿಸಿದ್ದಾರೆ. ಹೀಗಾಗಿ ಪ್ರಥಮ ವರ್ಷದ ಮೂವರು ಸಂತ್ರಸ್ತ ವಿದ್ಯಾರ್ಥಿಗಳು ದೂರು ನೀಡಿದ್ದಾರೆ.
ಕಳೆದ ಕೆಲವು ವಾರಗಳ ಹಿಂದೆ ಕೊಚ್ಚಿಯಲ್ಲಿ ನಡೆದ ರ್ಯಾಗಿಂಗ್ನಿಂದಾಗಿ 15 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇದರ ಬೆನ್ನಲ್ಲೆ ಈ ಭೀಕರ ರ್ಯಾಗಿಂಗ್ ಪ್ರಕರಣ ಈಗ ಬೆಳಕಿಗೆ ಬಂದಿದೆ.
ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…
ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…
ಭಾವ ಬಯಲಿನ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…
DRI (Directorate of Revenue Intelligence) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, 5 ಜನ ಆರೋಪಿಗಳ ಬಂಧನ ಮಾಡಿ ಬಂಧಿತರಿಂದ…
ಬಳ್ಳಾರಿಯಲ್ಲಿ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಶಿವಣ್ಣ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕಾರಣಕ್ಕೆ ಸಂಬಂಧಿಸಿದಂತೆ ಬಗೆದೊಷ್ಟು ಬಯಲಾಗುತ್ತಿದೆ ಭ್ರಷ್ಟ…
ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು. ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ…