ಹಿರಿಯ ವಿದ್ಯಾರ್ಥಿಗಳಿಂದ‌ ಕಿರಿಯ ವಿದ್ಯಾರ್ಥಿಗಳಿಗೆ ಅಮಾನವೀಯ ರ‍್ಯಾಗಿಂಗ್‌: ಸುಮಾರು ಮೂರು ತಿಂಗಳ ಕಾಲ ಭಯಾನಕ ರ‍್ಯಾಗಿಂಗ್‌ಗೆ ಒಳಗಾಗಿದ್ದ ವಿದ್ಯಾರ್ಥಿಗಳು: ಖಾಸಗಿ ಅಂಗಕ್ಕೆ ಡಂಬಲ್ಸ್ ನೇತು ಹಾಕಿ ಹಿಂಸೆ!: ತಪ್ಪಿತಸ್ಥ ವಿದ್ಯಾರ್ಥಿಗಳ ಬಂಧನ

ಕೇರಳಾದ ಕೊಟ್ಟಾಯಂ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಅಮಾನುಷವಾಗಿ ಸುಮಾರು ಮೂರು ತಿಂಗಳ ಕಾಲ ರ‍್ಯಾಗಿಂಗ್‌ಗೆ ಒಳಗಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಕೊಟ್ಟಾಯಂ ಸರ್ಕಾರಿ ನರ್ಸಿಂಗ್ ಕಾಲೇಜಿನ ಮೂರನೇ ವರ್ಷದ ಐವರು ವಿದ್ಯಾರ್ಥಿಗಳು ರ‍್ಯಾಗಿಂಗ್‌ ನೆಪದಲ್ಲಿ ಪ್ರಥಮ ವರ್ಷದ ಮೂವರು ವಿದ್ಯಾರ್ಥಿಗಳನ್ನು ಅತ್ಯಂತ  ಭೀಕರವಾಗಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಿಂಸಿಸಿದ್ದಾರೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿದ ಆರೋಪದ ಮೇಲೆ ತಪ್ಪಿತಸ್ಥ ವಿದ್ಯಾರ್ಥಿಗಳ ಬಂಧನವಾಗಿದೆ.

ಕಳೆದ ವರ್ಷ ನವೆಂಬರ್‌ನಿಂದ ನಿರಂತರವಾಗಿ ರ‍್ಯಾಗಿಂಗ್‌ಗೆ ಒಳಗಾಗಿರುವುದಾಗಿ ತಿರುವನಂತಪುರಂ ಮೂಲದ ಜೂನಿಯರ್ ವಿದ್ಯಾರ್ಥಿಗಳು ದೂರಿನಲ್ಲಿ ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ ಆರೋಪಿ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿ, 2011ರ ಅಂಟಿ-ರ‍್ಯಾಗಿಂಗ್‌ ಕಾಯ್ದೆಯಡಿ ಬಂಧಿಸಲಾಗಿದೆ.

ಎರಡನೇ ವರ್ಷದ ಸಾಮಾನ್ಯ ನರ್ಸಿಂಗ್ ವಿದ್ಯಾರ್ಥಿಗಳಾದ ಸ್ಯಾಮ್ಯುಯೆಲ್ ಜಾನ್ಸನ್ (20), ಎನ್‌.ಎನ್.ಜೀವಾ (19) ಮತ್ತು ಮೂರನೇ ವರ್ಷದ ವಿದ್ಯಾರ್ಥಿಗಳಾದ ರಾಹುಲ್ ರಾಜ್ ಕೆ.ಪಿ (22), ಸಿ.ರಿಜಿಲ್ಟಿತ್ (21), ವಿವೇಕ್ ಎನ್ವಿ (21) ಬಂಧಿತ ವಿದ್ಯಾರ್ಥಿಗಳು.

‘ಜೂನಿಯರ್ ವಿದ್ಯಾರ್ಥಿಗಳಿಗೆ ಬೆತ್ತಲೆಯಾಗಿ ನಿಲ್ಲುವಂತೆ ಒತ್ತಾಯಿಸಿ, ಅವರ ಖಾಸಗಿ ಅಂಗಗಳಿಗೆ ಡಂಬಲ್ಸ್‌ಗಳನ್ನು ನೇತು ಹಾಕಲಾಗುತ್ತಿತ್ತು’ ಎಂದು ಗಾಂಧಿ ನಗರ ಪೊಲೀಸರು ತಿಳಿಸಿದ್ದಾರೆ.

ಜೊತೆಗೆ ‘ಜ್ಯಾಮಿಟ್ರಿ ಬಾಕ್ಸ್ ಕಂಪಾಸ್‌ನಲ್ಲಿದ್ದ ಚೂಪಾದ ವಸ್ತುಗಳಿಂದ ಗಾಯಗೊಳಿಸಲಾಗುತ್ತಿತ್ತು. ಬಳಿಕ ಗಾಯಗಳಿಗೆ ಲೋಷನ್ ಹಚ್ಚಿ ನೋವುಂಟು ಮಾಡುತ್ತಿದ್ದರು. ಜೂನಿಯರ್ ವಿದ್ಯಾರ್ಥಿಗಳು ನೋವಿನಿಂದ ಕಿರುಚಾಡಿದಾಗ ಬಲವಂತವಾಗಿ ಲೋಷನ್ ಅನ್ನು ಬಾಯಿಗೆ ತುಂಬಿಸುತ್ತಿದ್ದರು. ಈ ಕೃತ್ಯಗಳನ್ನು ವಿಡಿಯೋ ಮಾಡಿಕೊಂಡು, ಯಾರಿಗಾದರೂ ಹೇಳಿದರೆ ಶಿಕ್ಷಣಕ್ಕೆ ತೊಂದರೆ ಕೊಡುವುದಾಗಿ ಬೆದರಿಕೆ ಹಾಕುತ್ತಿದ್ದರು’ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಭಾನುವಾರ ಹಿರಿಯ ವಿದ್ಯಾರ್ಥಿಗಳು ಜೂನಿಯರ್ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡುತ್ತಿದ್ದರು. ಹಣ ನೀಡಲು ನಿರಾಕರಿಸಿದವರು ಥಳಿತಕ್ಕೊಳಗಾಗುತ್ತಿದ್ದರು. ಕೊನೆಗೆ ಚಿತ್ರ ಹಿಂಸೆಯನ್ನು ತಾಳಲಾರದೆ ಓರ್ವ ವಿದ್ಯಾರ್ಥಿ ತನ್ನ ತಂದೆಗೆ ವಿಷಯ ತಿಳಿಸಿದ್ದಾನೆ. ಬಳಿಕ ವಿದ್ಯಾರ್ಥಿ ತಂದೆಯೇ ಪೊಲೀಸರಿಗೆ ದೂರು ನೀಡಲು ತಿಳಿಸಿದ್ದಾರೆ. ಹೀಗಾಗಿ ಪ್ರಥಮ ವರ್ಷದ ಮೂವರು ಸಂತ್ರಸ್ತ ವಿದ್ಯಾರ್ಥಿಗಳು ದೂರು ನೀಡಿದ್ದಾರೆ.

ಕಳೆದ ಕೆಲವು ವಾರಗಳ ಹಿಂದೆ ಕೊಚ್ಚಿಯಲ್ಲಿ ನಡೆದ ರ‍್ಯಾಗಿಂಗ್‌ನಿಂದಾಗಿ 15 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇದರ ಬೆನ್ನಲ್ಲೆ ಈ ಭೀಕರ ರ‍್ಯಾಗಿಂಗ್‌​ ಪ್ರಕರಣ ಈಗ ಬೆಳಕಿಗೆ ಬಂದಿದೆ.

Ramesh Babu

Journalist

Recent Posts

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

3 hours ago

ಅಕ್ರಮ ಸಂಬಂಧ.. ಪ್ರಿಯತಮೆಯನ್ನ ಬ*ರ್ಬರವಾಗಿ ಕೊಂ*ದು ನೇ*ಣಿಗೆ ಶರಣಾದ ಪ್ರಿಯಕರ.!

ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…

3 hours ago

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ವೈದ್ಯ, ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

23 hours ago

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರು ಸೇರಿದಂತೆ ಇತರೆ ಸಾಧಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

1 day ago

ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ₹400 ಕೋಟಿ ದರೋಡೆ ಪ್ರಕರಣ: ದಟ್ಟಾರಣ್ಯದ ಮೌನದಲ್ಲಿ ಅಡಗಿದ್ದ ಭೀಕರ ರಹಸ್ಯ..ಬೆಚ್ಚಿಬೀಳಿಸುವ ಪ್ರಮುಖ ಅಂಶಗಳು…ಇಲ್ಲಿವೆ ಓದಿ…

ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್‌ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…

1 day ago

2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ: ಕರ್ನಾಟಕದ 8 ಮಂದಿಯು ಈ ನಾಗರಿಕ ಗೌರವಕ್ಕೆ ಭಾಜನ

2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…

2 days ago