ಹಿರಿಯ ವಿದ್ಯಾರ್ಥಿಗಳಿಂದ‌ ಕಿರಿಯ ವಿದ್ಯಾರ್ಥಿಗಳಿಗೆ ಅಮಾನವೀಯ ರ‍್ಯಾಗಿಂಗ್‌: ಸುಮಾರು ಮೂರು ತಿಂಗಳ ಕಾಲ ಭಯಾನಕ ರ‍್ಯಾಗಿಂಗ್‌ಗೆ ಒಳಗಾಗಿದ್ದ ವಿದ್ಯಾರ್ಥಿಗಳು: ಖಾಸಗಿ ಅಂಗಕ್ಕೆ ಡಂಬಲ್ಸ್ ನೇತು ಹಾಕಿ ಹಿಂಸೆ!: ತಪ್ಪಿತಸ್ಥ ವಿದ್ಯಾರ್ಥಿಗಳ ಬಂಧನ

ಕೇರಳಾದ ಕೊಟ್ಟಾಯಂ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಅಮಾನುಷವಾಗಿ ಸುಮಾರು ಮೂರು ತಿಂಗಳ ಕಾಲ ರ‍್ಯಾಗಿಂಗ್‌ಗೆ ಒಳಗಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಕೊಟ್ಟಾಯಂ ಸರ್ಕಾರಿ ನರ್ಸಿಂಗ್ ಕಾಲೇಜಿನ ಮೂರನೇ ವರ್ಷದ ಐವರು ವಿದ್ಯಾರ್ಥಿಗಳು ರ‍್ಯಾಗಿಂಗ್‌ ನೆಪದಲ್ಲಿ ಪ್ರಥಮ ವರ್ಷದ ಮೂವರು ವಿದ್ಯಾರ್ಥಿಗಳನ್ನು ಅತ್ಯಂತ  ಭೀಕರವಾಗಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಿಂಸಿಸಿದ್ದಾರೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿದ ಆರೋಪದ ಮೇಲೆ ತಪ್ಪಿತಸ್ಥ ವಿದ್ಯಾರ್ಥಿಗಳ ಬಂಧನವಾಗಿದೆ.

ಕಳೆದ ವರ್ಷ ನವೆಂಬರ್‌ನಿಂದ ನಿರಂತರವಾಗಿ ರ‍್ಯಾಗಿಂಗ್‌ಗೆ ಒಳಗಾಗಿರುವುದಾಗಿ ತಿರುವನಂತಪುರಂ ಮೂಲದ ಜೂನಿಯರ್ ವಿದ್ಯಾರ್ಥಿಗಳು ದೂರಿನಲ್ಲಿ ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ ಆರೋಪಿ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿ, 2011ರ ಅಂಟಿ-ರ‍್ಯಾಗಿಂಗ್‌ ಕಾಯ್ದೆಯಡಿ ಬಂಧಿಸಲಾಗಿದೆ.

ಎರಡನೇ ವರ್ಷದ ಸಾಮಾನ್ಯ ನರ್ಸಿಂಗ್ ವಿದ್ಯಾರ್ಥಿಗಳಾದ ಸ್ಯಾಮ್ಯುಯೆಲ್ ಜಾನ್ಸನ್ (20), ಎನ್‌.ಎನ್.ಜೀವಾ (19) ಮತ್ತು ಮೂರನೇ ವರ್ಷದ ವಿದ್ಯಾರ್ಥಿಗಳಾದ ರಾಹುಲ್ ರಾಜ್ ಕೆ.ಪಿ (22), ಸಿ.ರಿಜಿಲ್ಟಿತ್ (21), ವಿವೇಕ್ ಎನ್ವಿ (21) ಬಂಧಿತ ವಿದ್ಯಾರ್ಥಿಗಳು.

‘ಜೂನಿಯರ್ ವಿದ್ಯಾರ್ಥಿಗಳಿಗೆ ಬೆತ್ತಲೆಯಾಗಿ ನಿಲ್ಲುವಂತೆ ಒತ್ತಾಯಿಸಿ, ಅವರ ಖಾಸಗಿ ಅಂಗಗಳಿಗೆ ಡಂಬಲ್ಸ್‌ಗಳನ್ನು ನೇತು ಹಾಕಲಾಗುತ್ತಿತ್ತು’ ಎಂದು ಗಾಂಧಿ ನಗರ ಪೊಲೀಸರು ತಿಳಿಸಿದ್ದಾರೆ.

ಜೊತೆಗೆ ‘ಜ್ಯಾಮಿಟ್ರಿ ಬಾಕ್ಸ್ ಕಂಪಾಸ್‌ನಲ್ಲಿದ್ದ ಚೂಪಾದ ವಸ್ತುಗಳಿಂದ ಗಾಯಗೊಳಿಸಲಾಗುತ್ತಿತ್ತು. ಬಳಿಕ ಗಾಯಗಳಿಗೆ ಲೋಷನ್ ಹಚ್ಚಿ ನೋವುಂಟು ಮಾಡುತ್ತಿದ್ದರು. ಜೂನಿಯರ್ ವಿದ್ಯಾರ್ಥಿಗಳು ನೋವಿನಿಂದ ಕಿರುಚಾಡಿದಾಗ ಬಲವಂತವಾಗಿ ಲೋಷನ್ ಅನ್ನು ಬಾಯಿಗೆ ತುಂಬಿಸುತ್ತಿದ್ದರು. ಈ ಕೃತ್ಯಗಳನ್ನು ವಿಡಿಯೋ ಮಾಡಿಕೊಂಡು, ಯಾರಿಗಾದರೂ ಹೇಳಿದರೆ ಶಿಕ್ಷಣಕ್ಕೆ ತೊಂದರೆ ಕೊಡುವುದಾಗಿ ಬೆದರಿಕೆ ಹಾಕುತ್ತಿದ್ದರು’ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಭಾನುವಾರ ಹಿರಿಯ ವಿದ್ಯಾರ್ಥಿಗಳು ಜೂನಿಯರ್ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡುತ್ತಿದ್ದರು. ಹಣ ನೀಡಲು ನಿರಾಕರಿಸಿದವರು ಥಳಿತಕ್ಕೊಳಗಾಗುತ್ತಿದ್ದರು. ಕೊನೆಗೆ ಚಿತ್ರ ಹಿಂಸೆಯನ್ನು ತಾಳಲಾರದೆ ಓರ್ವ ವಿದ್ಯಾರ್ಥಿ ತನ್ನ ತಂದೆಗೆ ವಿಷಯ ತಿಳಿಸಿದ್ದಾನೆ. ಬಳಿಕ ವಿದ್ಯಾರ್ಥಿ ತಂದೆಯೇ ಪೊಲೀಸರಿಗೆ ದೂರು ನೀಡಲು ತಿಳಿಸಿದ್ದಾರೆ. ಹೀಗಾಗಿ ಪ್ರಥಮ ವರ್ಷದ ಮೂವರು ಸಂತ್ರಸ್ತ ವಿದ್ಯಾರ್ಥಿಗಳು ದೂರು ನೀಡಿದ್ದಾರೆ.

ಕಳೆದ ಕೆಲವು ವಾರಗಳ ಹಿಂದೆ ಕೊಚ್ಚಿಯಲ್ಲಿ ನಡೆದ ರ‍್ಯಾಗಿಂಗ್‌ನಿಂದಾಗಿ 15 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇದರ ಬೆನ್ನಲ್ಲೆ ಈ ಭೀಕರ ರ‍್ಯಾಗಿಂಗ್‌​ ಪ್ರಕರಣ ಈಗ ಬೆಳಕಿಗೆ ಬಂದಿದೆ.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

5 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

22 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago