ಕೇರಳಾದ ಕೊಟ್ಟಾಯಂ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಅಮಾನುಷವಾಗಿ ಸುಮಾರು ಮೂರು ತಿಂಗಳ ಕಾಲ ರ್ಯಾಗಿಂಗ್ಗೆ ಒಳಗಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ಕೊಟ್ಟಾಯಂ ಸರ್ಕಾರಿ ನರ್ಸಿಂಗ್ ಕಾಲೇಜಿನ ಮೂರನೇ ವರ್ಷದ ಐವರು ವಿದ್ಯಾರ್ಥಿಗಳು ರ್ಯಾಗಿಂಗ್ ನೆಪದಲ್ಲಿ ಪ್ರಥಮ ವರ್ಷದ ಮೂವರು ವಿದ್ಯಾರ್ಥಿಗಳನ್ನು ಅತ್ಯಂತ ಭೀಕರವಾಗಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಿಂಸಿಸಿದ್ದಾರೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿದ ಆರೋಪದ ಮೇಲೆ ತಪ್ಪಿತಸ್ಥ ವಿದ್ಯಾರ್ಥಿಗಳ ಬಂಧನವಾಗಿದೆ.
ಕಳೆದ ವರ್ಷ ನವೆಂಬರ್ನಿಂದ ನಿರಂತರವಾಗಿ ರ್ಯಾಗಿಂಗ್ಗೆ ಒಳಗಾಗಿರುವುದಾಗಿ ತಿರುವನಂತಪುರಂ ಮೂಲದ ಜೂನಿಯರ್ ವಿದ್ಯಾರ್ಥಿಗಳು ದೂರಿನಲ್ಲಿ ತಿಳಿಸಿದ್ದಾರೆ.
ದೂರಿನ ಆಧಾರದ ಮೇಲೆ ಆರೋಪಿ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿ, 2011ರ ಅಂಟಿ-ರ್ಯಾಗಿಂಗ್ ಕಾಯ್ದೆಯಡಿ ಬಂಧಿಸಲಾಗಿದೆ.
ಎರಡನೇ ವರ್ಷದ ಸಾಮಾನ್ಯ ನರ್ಸಿಂಗ್ ವಿದ್ಯಾರ್ಥಿಗಳಾದ ಸ್ಯಾಮ್ಯುಯೆಲ್ ಜಾನ್ಸನ್ (20), ಎನ್.ಎನ್.ಜೀವಾ (19) ಮತ್ತು ಮೂರನೇ ವರ್ಷದ ವಿದ್ಯಾರ್ಥಿಗಳಾದ ರಾಹುಲ್ ರಾಜ್ ಕೆ.ಪಿ (22), ಸಿ.ರಿಜಿಲ್ಟಿತ್ (21), ವಿವೇಕ್ ಎನ್ವಿ (21) ಬಂಧಿತ ವಿದ್ಯಾರ್ಥಿಗಳು.
‘ಜೂನಿಯರ್ ವಿದ್ಯಾರ್ಥಿಗಳಿಗೆ ಬೆತ್ತಲೆಯಾಗಿ ನಿಲ್ಲುವಂತೆ ಒತ್ತಾಯಿಸಿ, ಅವರ ಖಾಸಗಿ ಅಂಗಗಳಿಗೆ ಡಂಬಲ್ಸ್ಗಳನ್ನು ನೇತು ಹಾಕಲಾಗುತ್ತಿತ್ತು’ ಎಂದು ಗಾಂಧಿ ನಗರ ಪೊಲೀಸರು ತಿಳಿಸಿದ್ದಾರೆ.
ಜೊತೆಗೆ ‘ಜ್ಯಾಮಿಟ್ರಿ ಬಾಕ್ಸ್ ಕಂಪಾಸ್ನಲ್ಲಿದ್ದ ಚೂಪಾದ ವಸ್ತುಗಳಿಂದ ಗಾಯಗೊಳಿಸಲಾಗುತ್ತಿತ್ತು. ಬಳಿಕ ಗಾಯಗಳಿಗೆ ಲೋಷನ್ ಹಚ್ಚಿ ನೋವುಂಟು ಮಾಡುತ್ತಿದ್ದರು. ಜೂನಿಯರ್ ವಿದ್ಯಾರ್ಥಿಗಳು ನೋವಿನಿಂದ ಕಿರುಚಾಡಿದಾಗ ಬಲವಂತವಾಗಿ ಲೋಷನ್ ಅನ್ನು ಬಾಯಿಗೆ ತುಂಬಿಸುತ್ತಿದ್ದರು. ಈ ಕೃತ್ಯಗಳನ್ನು ವಿಡಿಯೋ ಮಾಡಿಕೊಂಡು, ಯಾರಿಗಾದರೂ ಹೇಳಿದರೆ ಶಿಕ್ಷಣಕ್ಕೆ ತೊಂದರೆ ಕೊಡುವುದಾಗಿ ಬೆದರಿಕೆ ಹಾಕುತ್ತಿದ್ದರು’ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಭಾನುವಾರ ಹಿರಿಯ ವಿದ್ಯಾರ್ಥಿಗಳು ಜೂನಿಯರ್ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡುತ್ತಿದ್ದರು. ಹಣ ನೀಡಲು ನಿರಾಕರಿಸಿದವರು ಥಳಿತಕ್ಕೊಳಗಾಗುತ್ತಿದ್ದರು. ಕೊನೆಗೆ ಚಿತ್ರ ಹಿಂಸೆಯನ್ನು ತಾಳಲಾರದೆ ಓರ್ವ ವಿದ್ಯಾರ್ಥಿ ತನ್ನ ತಂದೆಗೆ ವಿಷಯ ತಿಳಿಸಿದ್ದಾನೆ. ಬಳಿಕ ವಿದ್ಯಾರ್ಥಿ ತಂದೆಯೇ ಪೊಲೀಸರಿಗೆ ದೂರು ನೀಡಲು ತಿಳಿಸಿದ್ದಾರೆ. ಹೀಗಾಗಿ ಪ್ರಥಮ ವರ್ಷದ ಮೂವರು ಸಂತ್ರಸ್ತ ವಿದ್ಯಾರ್ಥಿಗಳು ದೂರು ನೀಡಿದ್ದಾರೆ.
ಕಳೆದ ಕೆಲವು ವಾರಗಳ ಹಿಂದೆ ಕೊಚ್ಚಿಯಲ್ಲಿ ನಡೆದ ರ್ಯಾಗಿಂಗ್ನಿಂದಾಗಿ 15 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇದರ ಬೆನ್ನಲ್ಲೆ ಈ ಭೀಕರ ರ್ಯಾಗಿಂಗ್ ಪ್ರಕರಣ ಈಗ ಬೆಳಕಿಗೆ ಬಂದಿದೆ.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…