ಹಿರಿಯ ವಿದ್ಯಾರ್ಥಿಗಳಿಂದ‌ ಕಿರಿಯ ವಿದ್ಯಾರ್ಥಿಗಳಿಗೆ ಅಮಾನವೀಯ ರ‍್ಯಾಗಿಂಗ್‌: ಸುಮಾರು ಮೂರು ತಿಂಗಳ ಕಾಲ ಭಯಾನಕ ರ‍್ಯಾಗಿಂಗ್‌ಗೆ ಒಳಗಾಗಿದ್ದ ವಿದ್ಯಾರ್ಥಿಗಳು: ಖಾಸಗಿ ಅಂಗಕ್ಕೆ ಡಂಬಲ್ಸ್ ನೇತು ಹಾಕಿ ಹಿಂಸೆ!: ತಪ್ಪಿತಸ್ಥ ವಿದ್ಯಾರ್ಥಿಗಳ ಬಂಧನ

ಕೇರಳಾದ ಕೊಟ್ಟಾಯಂ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಅಮಾನುಷವಾಗಿ ಸುಮಾರು ಮೂರು ತಿಂಗಳ ಕಾಲ ರ‍್ಯಾಗಿಂಗ್‌ಗೆ ಒಳಗಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಕೊಟ್ಟಾಯಂ ಸರ್ಕಾರಿ ನರ್ಸಿಂಗ್ ಕಾಲೇಜಿನ ಮೂರನೇ ವರ್ಷದ ಐವರು ವಿದ್ಯಾರ್ಥಿಗಳು ರ‍್ಯಾಗಿಂಗ್‌ ನೆಪದಲ್ಲಿ ಪ್ರಥಮ ವರ್ಷದ ಮೂವರು ವಿದ್ಯಾರ್ಥಿಗಳನ್ನು ಅತ್ಯಂತ  ಭೀಕರವಾಗಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಿಂಸಿಸಿದ್ದಾರೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿದ ಆರೋಪದ ಮೇಲೆ ತಪ್ಪಿತಸ್ಥ ವಿದ್ಯಾರ್ಥಿಗಳ ಬಂಧನವಾಗಿದೆ.

ಕಳೆದ ವರ್ಷ ನವೆಂಬರ್‌ನಿಂದ ನಿರಂತರವಾಗಿ ರ‍್ಯಾಗಿಂಗ್‌ಗೆ ಒಳಗಾಗಿರುವುದಾಗಿ ತಿರುವನಂತಪುರಂ ಮೂಲದ ಜೂನಿಯರ್ ವಿದ್ಯಾರ್ಥಿಗಳು ದೂರಿನಲ್ಲಿ ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ ಆರೋಪಿ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿ, 2011ರ ಅಂಟಿ-ರ‍್ಯಾಗಿಂಗ್‌ ಕಾಯ್ದೆಯಡಿ ಬಂಧಿಸಲಾಗಿದೆ.

ಎರಡನೇ ವರ್ಷದ ಸಾಮಾನ್ಯ ನರ್ಸಿಂಗ್ ವಿದ್ಯಾರ್ಥಿಗಳಾದ ಸ್ಯಾಮ್ಯುಯೆಲ್ ಜಾನ್ಸನ್ (20), ಎನ್‌.ಎನ್.ಜೀವಾ (19) ಮತ್ತು ಮೂರನೇ ವರ್ಷದ ವಿದ್ಯಾರ್ಥಿಗಳಾದ ರಾಹುಲ್ ರಾಜ್ ಕೆ.ಪಿ (22), ಸಿ.ರಿಜಿಲ್ಟಿತ್ (21), ವಿವೇಕ್ ಎನ್ವಿ (21) ಬಂಧಿತ ವಿದ್ಯಾರ್ಥಿಗಳು.

‘ಜೂನಿಯರ್ ವಿದ್ಯಾರ್ಥಿಗಳಿಗೆ ಬೆತ್ತಲೆಯಾಗಿ ನಿಲ್ಲುವಂತೆ ಒತ್ತಾಯಿಸಿ, ಅವರ ಖಾಸಗಿ ಅಂಗಗಳಿಗೆ ಡಂಬಲ್ಸ್‌ಗಳನ್ನು ನೇತು ಹಾಕಲಾಗುತ್ತಿತ್ತು’ ಎಂದು ಗಾಂಧಿ ನಗರ ಪೊಲೀಸರು ತಿಳಿಸಿದ್ದಾರೆ.

ಜೊತೆಗೆ ‘ಜ್ಯಾಮಿಟ್ರಿ ಬಾಕ್ಸ್ ಕಂಪಾಸ್‌ನಲ್ಲಿದ್ದ ಚೂಪಾದ ವಸ್ತುಗಳಿಂದ ಗಾಯಗೊಳಿಸಲಾಗುತ್ತಿತ್ತು. ಬಳಿಕ ಗಾಯಗಳಿಗೆ ಲೋಷನ್ ಹಚ್ಚಿ ನೋವುಂಟು ಮಾಡುತ್ತಿದ್ದರು. ಜೂನಿಯರ್ ವಿದ್ಯಾರ್ಥಿಗಳು ನೋವಿನಿಂದ ಕಿರುಚಾಡಿದಾಗ ಬಲವಂತವಾಗಿ ಲೋಷನ್ ಅನ್ನು ಬಾಯಿಗೆ ತುಂಬಿಸುತ್ತಿದ್ದರು. ಈ ಕೃತ್ಯಗಳನ್ನು ವಿಡಿಯೋ ಮಾಡಿಕೊಂಡು, ಯಾರಿಗಾದರೂ ಹೇಳಿದರೆ ಶಿಕ್ಷಣಕ್ಕೆ ತೊಂದರೆ ಕೊಡುವುದಾಗಿ ಬೆದರಿಕೆ ಹಾಕುತ್ತಿದ್ದರು’ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಭಾನುವಾರ ಹಿರಿಯ ವಿದ್ಯಾರ್ಥಿಗಳು ಜೂನಿಯರ್ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡುತ್ತಿದ್ದರು. ಹಣ ನೀಡಲು ನಿರಾಕರಿಸಿದವರು ಥಳಿತಕ್ಕೊಳಗಾಗುತ್ತಿದ್ದರು. ಕೊನೆಗೆ ಚಿತ್ರ ಹಿಂಸೆಯನ್ನು ತಾಳಲಾರದೆ ಓರ್ವ ವಿದ್ಯಾರ್ಥಿ ತನ್ನ ತಂದೆಗೆ ವಿಷಯ ತಿಳಿಸಿದ್ದಾನೆ. ಬಳಿಕ ವಿದ್ಯಾರ್ಥಿ ತಂದೆಯೇ ಪೊಲೀಸರಿಗೆ ದೂರು ನೀಡಲು ತಿಳಿಸಿದ್ದಾರೆ. ಹೀಗಾಗಿ ಪ್ರಥಮ ವರ್ಷದ ಮೂವರು ಸಂತ್ರಸ್ತ ವಿದ್ಯಾರ್ಥಿಗಳು ದೂರು ನೀಡಿದ್ದಾರೆ.

ಕಳೆದ ಕೆಲವು ವಾರಗಳ ಹಿಂದೆ ಕೊಚ್ಚಿಯಲ್ಲಿ ನಡೆದ ರ‍್ಯಾಗಿಂಗ್‌ನಿಂದಾಗಿ 15 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇದರ ಬೆನ್ನಲ್ಲೆ ಈ ಭೀಕರ ರ‍್ಯಾಗಿಂಗ್‌​ ಪ್ರಕರಣ ಈಗ ಬೆಳಕಿಗೆ ಬಂದಿದೆ.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

3 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

15 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

15 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

16 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

19 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago