ಕೇರಳಾದ ಕೊಟ್ಟಾಯಂ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಅಮಾನುಷವಾಗಿ ಸುಮಾರು ಮೂರು ತಿಂಗಳ ಕಾಲ ರ್ಯಾಗಿಂಗ್ಗೆ ಒಳಗಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ಕೊಟ್ಟಾಯಂ ಸರ್ಕಾರಿ ನರ್ಸಿಂಗ್ ಕಾಲೇಜಿನ ಮೂರನೇ ವರ್ಷದ ಐವರು ವಿದ್ಯಾರ್ಥಿಗಳು ರ್ಯಾಗಿಂಗ್ ನೆಪದಲ್ಲಿ ಪ್ರಥಮ ವರ್ಷದ ಮೂವರು ವಿದ್ಯಾರ್ಥಿಗಳನ್ನು ಅತ್ಯಂತ ಭೀಕರವಾಗಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಿಂಸಿಸಿದ್ದಾರೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿದ ಆರೋಪದ ಮೇಲೆ ತಪ್ಪಿತಸ್ಥ ವಿದ್ಯಾರ್ಥಿಗಳ ಬಂಧನವಾಗಿದೆ.
ಕಳೆದ ವರ್ಷ ನವೆಂಬರ್ನಿಂದ ನಿರಂತರವಾಗಿ ರ್ಯಾಗಿಂಗ್ಗೆ ಒಳಗಾಗಿರುವುದಾಗಿ ತಿರುವನಂತಪುರಂ ಮೂಲದ ಜೂನಿಯರ್ ವಿದ್ಯಾರ್ಥಿಗಳು ದೂರಿನಲ್ಲಿ ತಿಳಿಸಿದ್ದಾರೆ.
ದೂರಿನ ಆಧಾರದ ಮೇಲೆ ಆರೋಪಿ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿ, 2011ರ ಅಂಟಿ-ರ್ಯಾಗಿಂಗ್ ಕಾಯ್ದೆಯಡಿ ಬಂಧಿಸಲಾಗಿದೆ.
ಎರಡನೇ ವರ್ಷದ ಸಾಮಾನ್ಯ ನರ್ಸಿಂಗ್ ವಿದ್ಯಾರ್ಥಿಗಳಾದ ಸ್ಯಾಮ್ಯುಯೆಲ್ ಜಾನ್ಸನ್ (20), ಎನ್.ಎನ್.ಜೀವಾ (19) ಮತ್ತು ಮೂರನೇ ವರ್ಷದ ವಿದ್ಯಾರ್ಥಿಗಳಾದ ರಾಹುಲ್ ರಾಜ್ ಕೆ.ಪಿ (22), ಸಿ.ರಿಜಿಲ್ಟಿತ್ (21), ವಿವೇಕ್ ಎನ್ವಿ (21) ಬಂಧಿತ ವಿದ್ಯಾರ್ಥಿಗಳು.
‘ಜೂನಿಯರ್ ವಿದ್ಯಾರ್ಥಿಗಳಿಗೆ ಬೆತ್ತಲೆಯಾಗಿ ನಿಲ್ಲುವಂತೆ ಒತ್ತಾಯಿಸಿ, ಅವರ ಖಾಸಗಿ ಅಂಗಗಳಿಗೆ ಡಂಬಲ್ಸ್ಗಳನ್ನು ನೇತು ಹಾಕಲಾಗುತ್ತಿತ್ತು’ ಎಂದು ಗಾಂಧಿ ನಗರ ಪೊಲೀಸರು ತಿಳಿಸಿದ್ದಾರೆ.
ಜೊತೆಗೆ ‘ಜ್ಯಾಮಿಟ್ರಿ ಬಾಕ್ಸ್ ಕಂಪಾಸ್ನಲ್ಲಿದ್ದ ಚೂಪಾದ ವಸ್ತುಗಳಿಂದ ಗಾಯಗೊಳಿಸಲಾಗುತ್ತಿತ್ತು. ಬಳಿಕ ಗಾಯಗಳಿಗೆ ಲೋಷನ್ ಹಚ್ಚಿ ನೋವುಂಟು ಮಾಡುತ್ತಿದ್ದರು. ಜೂನಿಯರ್ ವಿದ್ಯಾರ್ಥಿಗಳು ನೋವಿನಿಂದ ಕಿರುಚಾಡಿದಾಗ ಬಲವಂತವಾಗಿ ಲೋಷನ್ ಅನ್ನು ಬಾಯಿಗೆ ತುಂಬಿಸುತ್ತಿದ್ದರು. ಈ ಕೃತ್ಯಗಳನ್ನು ವಿಡಿಯೋ ಮಾಡಿಕೊಂಡು, ಯಾರಿಗಾದರೂ ಹೇಳಿದರೆ ಶಿಕ್ಷಣಕ್ಕೆ ತೊಂದರೆ ಕೊಡುವುದಾಗಿ ಬೆದರಿಕೆ ಹಾಕುತ್ತಿದ್ದರು’ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಭಾನುವಾರ ಹಿರಿಯ ವಿದ್ಯಾರ್ಥಿಗಳು ಜೂನಿಯರ್ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡುತ್ತಿದ್ದರು. ಹಣ ನೀಡಲು ನಿರಾಕರಿಸಿದವರು ಥಳಿತಕ್ಕೊಳಗಾಗುತ್ತಿದ್ದರು. ಕೊನೆಗೆ ಚಿತ್ರ ಹಿಂಸೆಯನ್ನು ತಾಳಲಾರದೆ ಓರ್ವ ವಿದ್ಯಾರ್ಥಿ ತನ್ನ ತಂದೆಗೆ ವಿಷಯ ತಿಳಿಸಿದ್ದಾನೆ. ಬಳಿಕ ವಿದ್ಯಾರ್ಥಿ ತಂದೆಯೇ ಪೊಲೀಸರಿಗೆ ದೂರು ನೀಡಲು ತಿಳಿಸಿದ್ದಾರೆ. ಹೀಗಾಗಿ ಪ್ರಥಮ ವರ್ಷದ ಮೂವರು ಸಂತ್ರಸ್ತ ವಿದ್ಯಾರ್ಥಿಗಳು ದೂರು ನೀಡಿದ್ದಾರೆ.
ಕಳೆದ ಕೆಲವು ವಾರಗಳ ಹಿಂದೆ ಕೊಚ್ಚಿಯಲ್ಲಿ ನಡೆದ ರ್ಯಾಗಿಂಗ್ನಿಂದಾಗಿ 15 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇದರ ಬೆನ್ನಲ್ಲೆ ಈ ಭೀಕರ ರ್ಯಾಗಿಂಗ್ ಪ್ರಕರಣ ಈಗ ಬೆಳಕಿಗೆ ಬಂದಿದೆ.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…