ಹಿರಿಯ ವಿದ್ಯಾರ್ಥಿಗಳಿಂದ‌ ಕಿರಿಯ ವಿದ್ಯಾರ್ಥಿಗಳಿಗೆ ಅಮಾನವೀಯ ರ‍್ಯಾಗಿಂಗ್‌: ಸುಮಾರು ಮೂರು ತಿಂಗಳ ಕಾಲ ಭಯಾನಕ ರ‍್ಯಾಗಿಂಗ್‌ಗೆ ಒಳಗಾಗಿದ್ದ ವಿದ್ಯಾರ್ಥಿಗಳು: ಖಾಸಗಿ ಅಂಗಕ್ಕೆ ಡಂಬಲ್ಸ್ ನೇತು ಹಾಕಿ ಹಿಂಸೆ!: ತಪ್ಪಿತಸ್ಥ ವಿದ್ಯಾರ್ಥಿಗಳ ಬಂಧನ

ಕೇರಳಾದ ಕೊಟ್ಟಾಯಂ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಅಮಾನುಷವಾಗಿ ಸುಮಾರು ಮೂರು ತಿಂಗಳ ಕಾಲ ರ‍್ಯಾಗಿಂಗ್‌ಗೆ ಒಳಗಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಕೊಟ್ಟಾಯಂ ಸರ್ಕಾರಿ ನರ್ಸಿಂಗ್ ಕಾಲೇಜಿನ ಮೂರನೇ ವರ್ಷದ ಐವರು ವಿದ್ಯಾರ್ಥಿಗಳು ರ‍್ಯಾಗಿಂಗ್‌ ನೆಪದಲ್ಲಿ ಪ್ರಥಮ ವರ್ಷದ ಮೂವರು ವಿದ್ಯಾರ್ಥಿಗಳನ್ನು ಅತ್ಯಂತ  ಭೀಕರವಾಗಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಿಂಸಿಸಿದ್ದಾರೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿದ ಆರೋಪದ ಮೇಲೆ ತಪ್ಪಿತಸ್ಥ ವಿದ್ಯಾರ್ಥಿಗಳ ಬಂಧನವಾಗಿದೆ.

ಕಳೆದ ವರ್ಷ ನವೆಂಬರ್‌ನಿಂದ ನಿರಂತರವಾಗಿ ರ‍್ಯಾಗಿಂಗ್‌ಗೆ ಒಳಗಾಗಿರುವುದಾಗಿ ತಿರುವನಂತಪುರಂ ಮೂಲದ ಜೂನಿಯರ್ ವಿದ್ಯಾರ್ಥಿಗಳು ದೂರಿನಲ್ಲಿ ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ ಆರೋಪಿ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿ, 2011ರ ಅಂಟಿ-ರ‍್ಯಾಗಿಂಗ್‌ ಕಾಯ್ದೆಯಡಿ ಬಂಧಿಸಲಾಗಿದೆ.

ಎರಡನೇ ವರ್ಷದ ಸಾಮಾನ್ಯ ನರ್ಸಿಂಗ್ ವಿದ್ಯಾರ್ಥಿಗಳಾದ ಸ್ಯಾಮ್ಯುಯೆಲ್ ಜಾನ್ಸನ್ (20), ಎನ್‌.ಎನ್.ಜೀವಾ (19) ಮತ್ತು ಮೂರನೇ ವರ್ಷದ ವಿದ್ಯಾರ್ಥಿಗಳಾದ ರಾಹುಲ್ ರಾಜ್ ಕೆ.ಪಿ (22), ಸಿ.ರಿಜಿಲ್ಟಿತ್ (21), ವಿವೇಕ್ ಎನ್ವಿ (21) ಬಂಧಿತ ವಿದ್ಯಾರ್ಥಿಗಳು.

‘ಜೂನಿಯರ್ ವಿದ್ಯಾರ್ಥಿಗಳಿಗೆ ಬೆತ್ತಲೆಯಾಗಿ ನಿಲ್ಲುವಂತೆ ಒತ್ತಾಯಿಸಿ, ಅವರ ಖಾಸಗಿ ಅಂಗಗಳಿಗೆ ಡಂಬಲ್ಸ್‌ಗಳನ್ನು ನೇತು ಹಾಕಲಾಗುತ್ತಿತ್ತು’ ಎಂದು ಗಾಂಧಿ ನಗರ ಪೊಲೀಸರು ತಿಳಿಸಿದ್ದಾರೆ.

ಜೊತೆಗೆ ‘ಜ್ಯಾಮಿಟ್ರಿ ಬಾಕ್ಸ್ ಕಂಪಾಸ್‌ನಲ್ಲಿದ್ದ ಚೂಪಾದ ವಸ್ತುಗಳಿಂದ ಗಾಯಗೊಳಿಸಲಾಗುತ್ತಿತ್ತು. ಬಳಿಕ ಗಾಯಗಳಿಗೆ ಲೋಷನ್ ಹಚ್ಚಿ ನೋವುಂಟು ಮಾಡುತ್ತಿದ್ದರು. ಜೂನಿಯರ್ ವಿದ್ಯಾರ್ಥಿಗಳು ನೋವಿನಿಂದ ಕಿರುಚಾಡಿದಾಗ ಬಲವಂತವಾಗಿ ಲೋಷನ್ ಅನ್ನು ಬಾಯಿಗೆ ತುಂಬಿಸುತ್ತಿದ್ದರು. ಈ ಕೃತ್ಯಗಳನ್ನು ವಿಡಿಯೋ ಮಾಡಿಕೊಂಡು, ಯಾರಿಗಾದರೂ ಹೇಳಿದರೆ ಶಿಕ್ಷಣಕ್ಕೆ ತೊಂದರೆ ಕೊಡುವುದಾಗಿ ಬೆದರಿಕೆ ಹಾಕುತ್ತಿದ್ದರು’ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಭಾನುವಾರ ಹಿರಿಯ ವಿದ್ಯಾರ್ಥಿಗಳು ಜೂನಿಯರ್ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡುತ್ತಿದ್ದರು. ಹಣ ನೀಡಲು ನಿರಾಕರಿಸಿದವರು ಥಳಿತಕ್ಕೊಳಗಾಗುತ್ತಿದ್ದರು. ಕೊನೆಗೆ ಚಿತ್ರ ಹಿಂಸೆಯನ್ನು ತಾಳಲಾರದೆ ಓರ್ವ ವಿದ್ಯಾರ್ಥಿ ತನ್ನ ತಂದೆಗೆ ವಿಷಯ ತಿಳಿಸಿದ್ದಾನೆ. ಬಳಿಕ ವಿದ್ಯಾರ್ಥಿ ತಂದೆಯೇ ಪೊಲೀಸರಿಗೆ ದೂರು ನೀಡಲು ತಿಳಿಸಿದ್ದಾರೆ. ಹೀಗಾಗಿ ಪ್ರಥಮ ವರ್ಷದ ಮೂವರು ಸಂತ್ರಸ್ತ ವಿದ್ಯಾರ್ಥಿಗಳು ದೂರು ನೀಡಿದ್ದಾರೆ.

ಕಳೆದ ಕೆಲವು ವಾರಗಳ ಹಿಂದೆ ಕೊಚ್ಚಿಯಲ್ಲಿ ನಡೆದ ರ‍್ಯಾಗಿಂಗ್‌ನಿಂದಾಗಿ 15 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇದರ ಬೆನ್ನಲ್ಲೆ ಈ ಭೀಕರ ರ‍್ಯಾಗಿಂಗ್‌​ ಪ್ರಕರಣ ಈಗ ಬೆಳಕಿಗೆ ಬಂದಿದೆ.

Ramesh Babu

Journalist

Recent Posts

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು: ವಾರಸುದಾರರ ಪತ್ತೆಗೆ ರೈಲ್ವೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…

43 minutes ago

ಪತ್ನಿಯ ಶೀಲ ಶಂಕಿಸಿ ಗೃಹಿಣಿಯ ಕೊಲೆ: ಪತಿ ಬಂಧನಕ್ಕೆ ಬಲೆ

ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…

53 minutes ago

ಕೌಟುಂಬಿಕ ಕಲಹ ಡಬಲ್ ಮರ್ಡರ್: ಅಕ್ಕ-ತಂಗಿಯ ಹತ್ಯೆ, ಆರೋಪಿ ಪೊಲೀಸರಿಗೆ ಶರಣು

ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…

60 minutes ago

ಪ್ರತಿ ಲೀಟರ್ ಹಾಲಿಗೆ 10‌ ರೂ. ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ: ಜು.9ರಂದು ಸಿಎಂಗೆ ಮನವಿ ಸಲ್ಲಿಕೆ

ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…

6 hours ago

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

12 hours ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

12 hours ago