Categories: ಲೇಖನ

ಹೀಗೊಂದು ಒಳ ಮನಸ್ಸು…..

ನೀನೊಬ್ಬ ಹುಚ್ಚ ಎಂದು ಯಾರೋ ಹೇಳಿದರು…..

ಅದಕ್ಕೆ ನನ್ನ ಉತ್ತರ,
” ಹೌದು, ಆ ಬಗ್ಗೆ ನನಗೆ ಅನುಮಾನವಿತ್ತು. ಅದನ್ನು ದೃಢಪಡಿಸಿದ್ದಕ್ಕೆ ನಿಮಗೆ ಧನ್ಯವಾದಗಳು. ಹೊಸ ದಾರಿಯ ಹುಡುಕಾಟವೇ ಒಂದು ಹುಚ್ಚುತನ. ಈ ಹದಗೆಟ್ಟ ವ್ಯವಸ್ಥೆಯ ಬದಲಾವಣೆಗೆ ಮನಸ್ಸುಗಳ ಅಂತರಂಗದ ಚಳವಳಿ ರೂಪಿಸಲು ಹುಚ್ಚನ ಪಾತ್ರದ ಅವಶ್ಯಕತೆ ಇದೆ.”

ನೀನೊಬ್ಬ ಸೂ*** ಮಗ ಎಂದು ಇನ್ನೊಬ್ಬರು ಹೇಳಿದರು..

” ಹೌದು, ನನ್ನ ತಾಯಿಯ ಸ್ವಾತಂತ್ರ್ಯವನ್ನು, ಅನಿವಾರ್ಯತೆಯನ್ನು, ಅಸಹಾಯಕತೆಯನ್ನು, ಶೋಷಣೆಯನ್ನು ಅರ್ಥಮಾಡಿಕೊಂಡು ಆ ಮಾತನ್ನು ಅಭಿಮಾನದಿಂದ ಒಪ್ಪಿಕೊಳ್ಳುತ್ತೇನೆ ” ಎಂದೆ.

ಮತ್ತೊಬ್ಬರು ಹೇಳಿದರು,
ನೀನೊಬ್ಬ ದ್ವಂದ್ವ ನಿಲುವಿನ ಎಡಬಿಡಂಗಿ…..

” ಹೌದು, ಅದೇ ನನ್ನ ಸಾಮರ್ಥ್ಯ. ಏಕೆಂದರೆ ಒಮ್ಮೆ ಅಂಕಿ ಸಂಖ್ಯೆಗಳ ಗಣಿತ ಹೊರತುಪಡಿಸಿ ಇತರ ವಿಷಯಗಳಲ್ಲಿ ಸ್ಪಷ್ಟತೆ ಮೂಡಿದರೆ ಅಲ್ಲಿಗೆ ನಿಮ್ಮ ಜ್ಞಾನದ ಬೆಳವಣಿಗೆ ನಿಲ್ಲುತ್ತದೆ. ನನ್ನಲ್ಲಿ ಅದು ನಿಲ್ಲಬಾರದು. ಬದುಕಿನ ಕೊನೆಯವರೆಗೂ ಜ್ಞಾನದ ಹಸಿವು ನಿರಂತರವಾಗಿ ಮತ್ತು ಅದರ ಎಲ್ಲಾ ಮಗ್ಗುಲುಗಳನ್ನು ನೋಡಲು ಪ್ರಯತ್ನಿಸುತ್ತಿರಬೇಕು. ಅದಕ್ಕಾಗಿ ನಾನು ಎಡಬಿಡಂಗಿಯಾಗಿರಲು ಇಷ್ಟಪಡುತ್ತೇನೆ.”

ಯಾರೋ ಹೇಳಿದರು,
” ನೀವು ಅಧ್ಯಯನ ಮಾಡಿ, ಚಿಂತಿಸಿ, ಓದಿ, ದಾಖಲೆ ಸಾಕ್ಷಿಗಳ ಸಮೇತ ಬರೆಯಿರಿ ಎಂದು. ”

ಅದಕ್ಕೆ ನಾನು ಹೇಳಿದೆ,
” ನಾನು ವಾಸಿಸುತ್ತಿರುವುದು ಭಾರತೀಯ ಸಮಾಜದಲ್ಲಿ. ಇಲ್ಲಿನ ಬಹುತೇಕ ಜನರಿಗೆ ಇನ್ನೂ ಸರಿಯಾಗಿ ಅಕ್ಷರ ಜ್ಞಾನವೇ ತಿಳಿದಿಲ್ಲ. ಕೆಲವರಿಗೆ ಅಕ್ಷರ ತಿಳಿದಿದ್ದರೂ ಓದುವಷ್ಟು ಸಮಯ ಮತ್ತು ಆಸಕ್ತಿ ಇಲ್ಲ. ಅದು ಇದ್ದರೂ ಅದನ್ನು ಸಂಪೂರ್ಣ ಅರ್ಥಮಾಡಿಕೊಳ್ಳಲು ಅವರ ದಿನನಿತ್ಯದ ಅನಿವಾರ್ಯತೆಗಳು ಬಿಡುವುದಿಲ್ಲ. ಆದ್ದರಿಂದ ಅಧ್ಯಯನ, ಚಿಂತನೆ, ದಾಖಲೆ, ಸಾಕ್ಷಿಗಳಿಗಿಂತ ನನ್ನ ಅನುಭವಗಳನ್ನು ಹಂಚಿಕೊಳ್ಳುತ್ತೇನೆ. ಆಸಕ್ತರು ಒಪ್ಪಬಹುದು ಅಥವಾ ತಿರಸ್ಕರಿಸಬಹುದು. ನೋವಿನಲ್ಲಿರುವ, ಸಂಕಷ್ಟದಲ್ಲಿರುವ, ಅಸಹಾಯಕರು ನನಗೆ ಮುಖ್ಯವೇ ಹೊರತು ಪ್ರಕಾಂಡ ಪಾಂಡಿತ್ಯದ, ಅಪಾರ ಓದಿನ, ಸಿದ್ಧಾಂತಗಳನ್ನು ಅರೆದು ಕುಡಿದವರಲ್ಲ.
ಸಾಮಾನ್ಯ ಜನರ ಭಾವನೆಗಳೇ ನನ್ನ ಭಾಷೆ. ”

ಕೆಲವರು ಹೇಳಿದರು.
” ನೀವು ಪ್ರಚಾರಕ್ಕಾಗಿ, ಸನ್ಮಾನಕ್ಕಾಗಿ, ಪ್ರಶಸ್ತಿಗಾಗಿ, ಮೆಚ್ಚುಗೆಗಾಗಿ ಬರೆಯುವಿರಿ ಎಂದು ”

ನಾನು ಹೇಳಿದೆ,
” ನಾನು ಬರೆಯುವುದರಿಂದ ಓದುಗರು ನೀಡುವ ಪ್ರತಿಕ್ರಿಯೆಯ ಪ್ರಚಾರ ಬಿಟ್ಟರೆ ನೀವು ಪ್ರಶಸ್ತಿಯೋ, ಸನ್ಮಾನವೋ ಮಾಡಲು ಕರೆದರೂ ಅದನ್ನು ಒಪ್ಪಿಕೊಳ್ಳುವ ಮತ್ತು ಸ್ವೀಕರಿಸುವ ಸ್ಥಿತಿಯಲ್ಲಿಯೇ ನಾನು ಇಲ್ಲ. ಇನ್ನು ಅದಕ್ಕಾಗಿ ಪ್ರಯತ್ನಿಸುವ ಪ್ರಶ್ನೆಯೇ ಉದ್ಬವವಾಗುವುದಿಲ್ಲ. ನಾನು ಕೇವಲ ನನ್ನ ಅಭಿಪ್ರಾಯ ಹಂಚಿಕೊಳ್ಳಲು ಮಾತ್ರ ಕಾರ್ಯಕ್ರಮಗಳಿಗೆ ಹೋಗುತ್ತೇನೆ”…

ಮಾತುಗಳಿಗಿಂತ, ಅಕ್ಷರಗಳಿಗಿಂತ, ನಮ್ಮ ವ್ಯಕ್ತಿತ್ವ ಮತ್ತು ನಡವಳಿಕೆಗಳೇ
ಬಹುಮುಖ್ಯ ಮತ್ತು ಅಮೂಲ್ಯ….

ಕೆಲವರು ಬರೆಯುತ್ತಾರೆ, ಅತ್ಯುತ್ತಮ ಭಾಷೆ, ಭಾವ, ವಾಕ್ಯ, ಛಂದಸ್ಸುಗಳ ಸಮಾಗಮದಂತೆ. ಆದರೆ ಅವರ ನಿಜ ಜೀವನದ ವರ್ತನೆ ತುಂಬಾ ಬಾಲಿಶವಾಗಿ, ಅಪಾಯಕಾರಿಯಾಗಿ ಮತ್ತು ಆತ್ಮಸಾಕ್ಷಿ ಮರೆಮಾಚಿ ಮುಖವಾಡವನ್ನು ಹೊಂದಿರುತ್ತದೆ….

ಓದುಗರ ಸಂಖ್ಯೆ ಮುಖ್ಯವಲ್ಲ. ಅವರ ವ್ಯಕ್ತಿತ್ವ, ಪ್ರಬುದ್ಧ ಮನಸ್ಸುಗಳ ಗುಣಮಟ್ಟ ಮುಖ್ಯ. …

ಎಲ್ಲರ ಅಭಿಪ್ರಾಯಗಳನ್ನು ಗೌರವಿಸುತ್ತಾ ಮತ್ತು ಸ್ವೀಕರಿಸುತ್ತಾ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಯುವಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ…

3 hours ago

ಪೊಲೀಸ್: ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ……

ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ…

5 hours ago

ಕಸ್ತೂರಿ ರಂಗನ್ ವರದಿ; ‘ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ’- ಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ  ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…

16 hours ago

ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ರೈತ ಸಂಘ ಆಗ್ರಹ

ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…

17 hours ago

ಶಿಷ್ಟಾಚಾರ ವಿವಾದಕ್ಕೆ ಮತ್ತಷ್ಟು ಕಾವು: ಶಾಸಕರಿಗೆ ಕಾನೂನು, ಶಿಷ್ಟಾಚಾರದ ಅರಿವಿಲ್ಲ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…

18 hours ago

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

20 hours ago