ಹೀಲ್ ಗೂ – ಹೀಲಿನ್ ಗೂ ವ್ಯತ್ಯಾಸ ಗೊತ್ತಾಗದೆ ನನ್ನ ರೋಗಿಗಳು ಪರದಾಟ: ನನ್ನ ರೋಗಿಗಳಿಗೆ ತೊಂದರೆ ಆಗಬಾರದೆಂಬ ಉದ್ದೇಶದಿಂದ ಆ ಪೋಸ್ಟ್ ಹಾಕಿದ್ದೆ – ಡಾ. ಅರ್ಜುನ್ ಎಂ ಬಿ ಸ್ಪಷ್ಟನೆ

ದೊಡ್ಡಬಳ್ಳಾಪುರ : ನನ್ನ ಒಡೆತನದಲ್ಲಿರುವ ಹೀಲ್ ಸ್ಪೆಷಾಲಿಟಿ ಕ್ಲಿನಿಕ್ ಸುಮಾರು 4 ವರ್ಷದಿಂದ ದೊಡ್ಡಬಳ್ಳಾಪುರದಲ್ಲಿ ಸೇವೆ ಸಲ್ಲಿಸುತ್ತಿದೆ. ನನ್ನ ಹೀಲ್ ಆಸ್ಪತ್ರೆಗೂ ಹಾಗೂ ಹೀಲಿನ್ ಹಾಸ್ಪಿಟಲ್ ಗೂ ಕೇವಲ ಒಂದು ಕಿಲೋಮೀಟರ್ ಅಂತರದಲ್ಲಿ ಇರುವುದರಿಂದ ನನ್ನ ರೋಗಿಗಳಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಎಂಬ ಕಾರಣಕ್ಕಾಗಿ ನಾನು ನನ್ನ ವಾಟ್ಸಾಪ್ ಗ್ರೂಪಿನಲ್ಲಿ ಒಂದು ಪೋಸ್ಟನ್ನು ಹಾಕಿದ್ದೇನೆ ಅಷ್ಟೇ. ಇದ್ದರಿಂದ ನನ್ನ ರೋಗಿಗಳಿಗೆ ಯಾವುದೇ ರೀತಿಯ ತೊಂದರೆಗಳ ಆಗಬಾರದು ಎಂಬ ಉದ್ದೇಶದಿಂದ ಹಾಗೂ ನನ್ನ ಹಾಸ್ಪಿಟಲ್ ಹಾಗೂ ನನ್ನ ಹೆಸರು ದುರ್ಬಳಕೆ ಆಗಬಾರದೆಂಬ ಕಾರಣದಿಂದ ನಾನು ಆ ರೀತಿ ಪೋಸ್ಟ್ ಹಾಕಿದ್ದೇನೆ ಎಂದು ಹೀಲ್ ಸ್ಪೆಷಾಲಿಟಿ ಕ್ಲಿನಿಕ್ ನ ವೈದ್ಯರಾದ ಡಾಕ್ಟರ್ ಅರ್ಜುನ್ ಅವರು ಹೇಳಿದರು.

ದೊಡ್ಡಬಳ್ಳಾಪುರದ ಮಗನಾಗಿ ದೊಡ್ಡಬಳ್ಳಾಪುರದ ಜನತೆಗೆ ವೈದ್ಯಕೀಯ ಸೇವೆ ಸಲ್ಲಿಸಲು ಬಂದಿದ್ದೇನೆ. ನಾನು ಹುಟ್ಟಿ ಬೆಳೆದು ಓದಿದ್ದೆಲ್ಲ ಇದೇ ದೊಡ್ಡಬಳ್ಳಾಪುರದಲ್ಲಿ, ನನಗೆ ಬೇರೆ ದೇಶಗಳಿಂದ ಸೇವೆ ಸಲ್ಲಿಸಲು ಆಹ್ವಾನಗಳು ಬಂದಿದ್ದರು ಸಹ ನನ್ನ ಹುಟ್ಟೂರು ದೊಡ್ಡಬಳ್ಳಾಪುರದ ಜನತೆಗೆ ನನ್ನ ಸೇವೆ ಇರಲಿ ಎಂದು ಸುಮಾರು ನಾಲ್ಕು ವರ್ಷಗಳಿಂದ ಹೀಲ್ ಸ್ಪೆಷಾಲಿಟಿ ಕ್ಲಿನಿಕ್ ಎಂಬ ಆಸ್ಪತ್ರೆಯನ್ನು ತೆರೆದು ಜನರಿಗೆ ಕಡಿಮೆ ಬೆಲೆಯಲ್ಲಿ ನಾನು ವೈದ್ಯಕೀಯ ಸೇವೆಯನ್ನು ಸಲ್ಲಿಸುತ್ತಾ ಬಂದಿದ್ದೇನೆ. ಆದರೆ ಇತ್ತೀಚೆಗೆ ನನಗೆ ನನ್ನ ಪೇಷಂಟ್ ಅವರ ಮೊಮ್ಮಗ ಕಡೆಯಿಂದ ಒಂದು ಫೋನ್ ಕಾಲ್ ಬಂತು, ಆತ ಹೇಳಿದ ನನ್ನ ಅಜ್ಜಿಗೆ ಎದೆ ನೋವು ಕಾಣಿಸಿಕೊಂಡಿದೆ ಆದರೆ ನಾನು ಈಗ ಎಲ್ಲಿಗೆ ಬರಬೇಕೆಂಬ ಗೊಂದಲದಲ್ಲಿ ಇದ್ದೀನಿ ಇತ್ತೀಚೆಗೆ ನೀವು ಹೊಸ ಹಾಸ್ಪಿಟಲ್ ಪ್ರಾರಂಭಿಸಿದ್ದೀರಾ ಎಂಬ ವಿಷಯ ತಿಳಿಯಿತು. ನಮಗೆ ಕಂಗ್ರಾಟ್ಸ್ ಹೇಳುತ್ತಾ ದಯಮಾಡಿ ಈಗ ನಾನು ಎಲ್ಲಿಗೆ ಬರಬೇಕು ಎಂದು ಗೊತ್ತಾಗುತ್ತಿಲ್ಲ ದಯವಿಟ್ಟು ನನಗೆ ತಿಳಿಸಿ ಅಂದಾಗ ಆ ವಿಷಯವನ್ನು ಕೇಳಿದ ನನಗೆ ಆಶ್ಚರ್ಯವಾಯಿತು. ತಕ್ಷಣವೇ ಆತನಿಗೆ ನಿಮ್ಮ ಅಜ್ಜಿಯನ್ನು ಮೊದಲು ನಮ್ಮ ಆಸ್ಪತ್ರೆಗೆ ಕರೆತನ್ನಿ ಎಂದು ಹೇಳಿದೆ. ತಕ್ಷಣ ಅವರು ಬಂದರು ಆಗ ನಾನು ಅವರಿಗೆ ಇಸಿಜಿ ಮಾಡಿಸಿ ಅವರಿಗೆ ಒಂದು ವೈದ್ಯಕೀಯ ಚಿಕಿತ್ಸೆಯನ್ನು ಕೊಟ್ಟ ನಂತರ ಅವರು ಹೇಳಿದ ಹಾಸ್ಪಿಟಲ್ ಮುಂದೆ ಹೋಗಿ ನಿಂತೆ. ಅಲ್ಲಿ ಯಾವುದೇ ನಾಮಫಲಕವಾಗಲಿ, ಡಾಕ್ಟರ್ ಹೆಸರಾಗಲಿ ಇರಲಿಲ್ಲ ಆಗ ನಾನು ಯೋಚನೆ ಮಾಡಿ ಈ ಹಿಂದೆಯೂ ಸಹ ನನ್ನ ಹೆಸರು ದುರ್ಬಳಕೆ ಆಗಿತ್ತು ಆದ್ದರಿಂದ ನನ್ನ ವಾಟ್ಸಾಪ್ ಗ್ರೂಪಿನಲ್ಲಿ ನನ್ನ ಪೇಷಂಟ್ಗಳು ಮತ್ತು ನನಗೆ ಗೊತ್ತಿರುವ ಡಾಕ್ಟರ್ ಗಳಿಗೆ ಈ ರೀತಿಯ ಒಂದು ಮೆಸೇಜನ್ನು ಹಾಕಿದ್ದೇನೆ. ಅದರ ಉದ್ದೇಶ ಯಾರಿಗೂ ಅವಮಾನ ಮಾಡಲು ಅಲ್ಲ ಎಂದರು.

ನನ್ನ ರೋಗಿಗಳಿಗೆ ಒಂದು ಕ್ಲಾರಿಫಿಕೇಶನ್ ಕೊಡುವ ಉದ್ದೇಶದಿಂದ ಆ ಒಂದು ಪೋಸ್ಟ್ ಹಾಕಿದೆ, ನಂತರ ಸಂಜೆಗೆ ನನಗೆ ಗೊತ್ತಾಯ್ತು ಅದು ನಮ್ಮ ಡಾಕ್ಟರ್ ವೆಂಕಟೇಶ್ ಪ್ರಸಾದ್ ಅವರ ಹಾಸ್ಪಿಟಲ್ ಎಂದು, ಅಷ್ಟರಲ್ಲಿ ಹಾಕಿದ್ದ ಪೋಸ್ಟ್ ವೈರಲ್ ಆಗಿ ಹೋಗಿತ್ತು, ನಾನು ಏನು ಮಾಡುವ ಸ್ಥಿತಿಯಲ್ಲಿ ಇರಲಿಲ್ಲ ಕೊನೆಗೆ ನನ್ನ ಮೇಲೆ ಪೊಲೀಸ್ ಸ್ಟೇಷನ್ ನಲ್ಲಿ ಒಂದು ಕಂಪ್ಲೇಂಟ್ ಆಗಿತ್ತು ಅದಕ್ಕಾಗಿ ನಾನು ಸ್ಟೇಷನ್ ಗೆ ಹೋಗಿ ನನ್ನ ಸ್ಟೇಟೆಂಟನ್ನು ಸಹ ಕೊಟ್ಟು ಬಂದೆ. ನಾನು ಯಾವುದೇ ವ್ಯಕ್ತಿಗಾಗಲಿ ಒಂದು ಸಂಸ್ಥೆಗಾಗಲಿ ಅವಮಾನ ಮಾಡುವ ಉದ್ದೇಶ ನನ್ನಲ್ಲಿ ಇಲ್ಲ, ನನಗೂ ಸಹ ತಿಳಿದಿದೆ ಒಂದು ಸಂಸ್ಥೆಯನ್ನು ಕಟ್ಟಬೇಕಾದರೆ ಅದರ ಶ್ರಮ ಎಷ್ಟು ಎಂದು ನಾವು ಎಲ್ಲಾ ವೈದ್ಯರು ಒಂದೇ ಎಲ್ಲರೂ ಒಟ್ಟಾಗಿ ಬೆಳೆಯೋಣ ಎಂದು ಈ ಮೂಲಕ ಹೇಳಲು ಇಷ್ಟಪಡುತ್ತೇನೆ ಎಂದರು.

Ramesh Babu

Journalist

Recent Posts

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

16 hours ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

16 hours ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

16 hours ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

19 hours ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

1 day ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

1 day ago