Categories: ಲೇಖನ

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು.

ಬ್ರಾಹ್ಮಣರ ಎಲ್ಲಾ ಅಗ್ರಹಾರಗಳನ್ನು ನಾಶಪಡಿಸಬೇಕು. ಊರ ಒಳಗಿನ ಎಲ್ಲರ ಜೊತೆ ಸಹಜವಾಗಿ ಬದುಕುವಂತೆ ಮಾಡಬೇಕು.

ಹಾಗೆಯೇ,
ಜಾತಿಗಳ ಆಧಾರದ ಮೇಲೆ ಅಸ್ತಿತ್ವದಲ್ಲಿರುವ ಎಲ್ಲಾ ಕೇರಿ, ಹಟ್ಟಿ, ಬೀದಿ, ಓಣಿ ಮುಂತಾದ ಹೆಸರುಗಳಿಂದ ಕರೆಯಲ್ಪಡುವ ಪ್ರದೇಶಗಳನ್ನು ನಾಶಪಡಿಸಿ ಅದರ ನೆನಪೂ ಉಳಿಯದಂತೆ ಮಾಡಬೇಕು.

ಅದೇರೀತಿ ,
ಒಂದು ಪ್ರತ್ಯೇಕ ಸ್ಥಳಗಳಲ್ಲಿ ಒಟ್ಟಾಗಿ ಗುಂಪು ಗುಂಪಾಗಿ ವಾಸಿಸುತ್ತಿರುವ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಭೌದ್ದರು, ಸಿಖ್ಖರು, ಪಾರ್ಸಿಗಳು ಮುಂತಾದವರನ್ನು ಅಲ್ಲಿಂದ ಬೇರ್ಪಡಿಸಿ ಊರ ಒಳಗೆ ಚದುರಿದಂತೆ ವಾಸಿಸಲು ಅವಕಾಶ ಕಲ್ಪಿಸಿಕೊಡಬೇಕು‌.

ಜಾತಿ ಹೆಸರೇಳುವುದು ಅವಮಾನ ಅನಾಗರಿಕತೆ,
” ಭಾರತೀಯತೆ ” ಒಂದು ಹೆಮ್ಮೆ ಎಂದು ಹೇಳಲು ಯುವ ಜನಾಂಗವನ್ನು ಪ್ರೇರೇಪಿಸಬೇಕು.

ಜಾತಿ, ಧರ್ಮ, ನಂಬಿಕೆ, ಸಂಪ್ರದಾಯಗಳಿಗಿಂತ ನಾಗರಿಕ ಪ್ರಜ್ಞೆ ಆಧುನಿಕ ಸಮಾಜದ ಮುಖ್ಯ ಗುಣಲಕ್ಷಣಗಳು ಎಂದು ಭಾವಿಸುವಂತಾಗಬೇಕು.

ಯಾರಾದರೂ ಸ್ವಯಂ ಇಚ್ಛೆಯಿಂದ ಅಧೀಕೃತ ಜಾತಿಯ ಕಾಲಂನಲ್ಲಿ ಜಾತಿಯ ಹೆಸರು ನಮೂದಿಸದೆ
” ಭಾರತೀಯ ” ಎಂದು ಬರೆಯಲು ಅವಕಾಶ ಕಲ್ಪಿಸಬೇಕು ಮತ್ತು ಅವರಿಗೆ ಏನಾದರೂ ಒಂದಷ್ಟು ಪ್ರೋತ್ಸಾಹಕ ಕೊಡುಗೆ ನೀಡಬೇಕು.

ಅಂತರಜಾತೀಯ ವಿವಾಹವಾಗಿ 15 ವರ್ಷ ಪೂರೈಸಿದ ಕುಟುಂಬಕ್ಕೆ, ಕೌಟುಂಬಿಕ ನ್ಯಾಯಾಲಯ ಇದನ್ನು ದೃಢಪಡಿಸಿದಲ್ಲಿ ,
ಅವರ ಕುಟುಂಬಕ್ಕೆ ಜೀವನ ಪರ್ಯಂತ ಯಾವುದೇ ಆಸ್ಪತ್ರೆಗಳಲ್ಲಿ ಉಚಿತ ಆರೋಗ್ಯ ಸೇವೆ ಸರ್ಕಾರ ಒದಗಿಸಬೇಕು.

ಅಸ್ಪೃಶ್ಯತೆ ಆಚರಣೆ ದೇಶ ದ್ರೋಹಕ್ಕೆ ಸಮಾನ ಎಂದು ಘೋಷಿಸಬೇಕು.
ಪಂಕ್ತಿಬೇದ, ಜಾತಿಯ ಆಧಾರದ ಪಕ್ಷಪಾತ, ಪ್ರವೇಶ ನಿಷೇಧ, ವ್ಯಕ್ತಿಯ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಆಚರಣೆ ಇರುವ ಎಲ್ಲಾ ದೇವ ಮಂದಿರಗಳನ್ನು ಸರ್ಕಾರ ವಶಕ್ಕೆ ಪಡೆಯಬೇಕು.

ಎಲ್ಲಾ ಮಂದಿರ, ಮಸೀದಿ, ಚರ್ಚು, ಗುರುದ್ವಾರ, ಭೌದ್ದ, ಜೈನ, ಪಾರ್ಸಿ ಮಂದಿರಗಳನ್ನು ಎಲ್ಲರಿಗೂ ಮುಕ್ತ ಪ್ರವೇಶ ಕಲ್ಪಿಸಬೇಕು.
ಅಲ್ಲಿ ನಂಬಿಕೆಯ ಆಚರಣೆಗಳಿಗಿಂತ ಧ್ಯಾನ ಕೇಂದ್ರಗಳಂತೆ ಕಾರ್ಯನಿರ್ವಾಹಿಸಲು ಹೆಚ್ಚಿನ ಆಧ್ಯತೆ ಕೊಡಬೇಕು.

ಹೆಸರುಗಳ ಮುಂದೆ ಜಾತಿ ಸೂಚಕ ಪದವನ್ನು ನಿಷೇಧಿಸಬೇಕು.

ಹೊಟ್ಟೆಯಲ್ಲಿರುವ ಮಗುವಿನ ಲಿಂಗ ಪರೀಕ್ಷೆ ನಿಷೇಧಿಸಿದಂತೆ ಜಾತಿಯನ್ನು ಮದುವೆ, ಚುನಾವಣೆ ಮುಂತಾದ ಸಾರ್ವಜನಿಕ ಕಾರ್ಯಗಳಲ್ಲಿ ಬಹಿರಂಗಪಡಿಸದಂತೆ ನಿಷೇಧವಿರಬೇಕು.

ಜಾತಿ ಹೆಸರಿನ ಮತ್ತು ಜಾತಿ ಆಧಾರಿತ ಸಂಘಟನೆಗಳನ್ನು ನಿಷೇಧಿಸಬೇಕು. ಅದಕ್ಕೆ ಬದಲಾಗಿ ಕ್ರೀಡಾ, ಸಾಂಸ್ಕೃತಿಕ, ಸಾಹಿತ್ಯಕ, ಸಾಹಸ ಸಂಘಟನೆಗಳನ್ನು ಪ್ರೋತ್ಸಾಹಿಸಬೇಕು.

ಇಷ್ಟಾದರೂ ದಲಿತರು ಮತ್ತು ‌ಹಿಂದುಳಿದ ವರ್ಗದವರಿಗೆ ಸಾಮಾಜಿಕ ನ್ಯಾಯ ಸಿಗುವುದಿಲ್ಲ. ಏಕೆಂದರೆ ಈಗಲೂ ತಳ ಜಾತಿಗಳು ಮುಖ್ಯವಾಹಿನಿಯಿಂದ ದೂರವಿದ್ದು ಅಸಮಾನತೆಯಿಂದ ಬಳಲುತ್ತಿವೆ.

ಅದಕ್ಕಾಗಿ ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ಮಾಡಿ,
ಅ – ಅಗಸ, ಈ – ಈಶ, A – Apple, D – Dog ಎಂಬ ಕ್ರಮವನ್ನು ಕೇವಲ Supplement ಆಗಿ ಕಲಿಸಿ ಮುಖ್ಯ ಶಿಕ್ಚಣ ಇಲ್ಲಿನ ಬದುಕಿನ ಅವಶ್ಯಕತೆ, ಕ್ರಿಯಾತ್ಮಕತೆ, ಸಹಜತೆ ಮತ್ತು ಜೀವಪರ ನಿಲುವಿನ ಕ್ರಮವನ್ನು ರೂಪಿಸಬೇಕು.

SSLC ನಂತರದ ಒಂದು ವರ್ಷದ ಶಿಕ್ಷಣವನ್ನು ಕಡ್ಡಾಯವಾಗಿ ದೈಹಿಕ ಮತ್ತು ಮಾನಸಿಕ ತರಬೇತಿಯ ಕ್ರಮವಾಗಿ ( Military training ) ರೂಪಿಸಬೇಕು.

ಶಿಕ್ಷಣದ ಗುಣಮಟ್ಟವನ್ನು ಅತ್ಯಂತ ಮೇಲ್ದರ್ಜೆಗೆ ಏರಿಸಿ ಅದರ ಖರ್ಚನ್ನು ಕಡಿಮೆಗೊಳಿಸಿ, ಕೃಷಿ ಮತ್ತು ಅದಕ್ಕೆ ಪೂರಕ ಉದ್ಯೋಗ ಸೃಷ್ಟಿಸಿ, ಭಾರತ ಹೊರತುಪಡಿಸಿ ಇಡೀ ವಿಶ್ವದ ಆಹಾರದ ಅವಶ್ಯಕತೆ ಗಮನಿಸಿ ಆ ವಸ್ತುಗಳನ್ನು ರಪ್ತು ಮಾಡಲು ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು.

ನಿರುದ್ಯೋಗಿಗಳಿಗೆ ಕೆಲಸ ಸಿಗುವವರೆಗೂ ಒಂದಷ್ಟು ತೃಪ್ತಿದಾಯಕ ಭತ್ಯೆ ನೀಡಿದರೆ, ಹೆಚ್ಚು ಹೆಚ್ಚು ಉದ್ಯೋಗ ಕಲ್ಪಿಸಿದರೆ ಮೀಸಲಾತಿಯ ಪ್ರಭಾವ ಕಡಿಮೆಯಾಗಬಹುದು.

ಜಾತಿಯತೆಯನ್ನೇ ನಾಶ ಮಾಡಿದರೆ ಜಾತಿಯ ಮೀಸಲಾತಿ ಪ್ರಶ್ನೆಯೇ ಉದ್ಭವಾಗುವುದಿಲ್ಲ.

ಪರೋಕ್ಷವಾಗಿ ಭ್ರಷ್ಟಾಚಾರವೂ ಸ್ವಲ್ಪ ಕಡಿಮೆಯಾಗುತ್ತದೆ..

ಹೀಗೆ ಹಲವಾರು ವಿಚಾರಗಳು ಮನದಲ್ಲಿ ಮೂಡುತ್ತದೆ. ಇದೂ ಸಂಪೂರ್ಣ ಪರಿಪೂರ್ಣ ಅಲ್ಲ. ವಾಸ್ತವವಾಗಿ ಕಾರ್ಯರೂಪಕ್ಕೆ ಬರುವಾಗ ಪ್ರಾಯೋಗಿಕ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಒಂದಷ್ಟು ಬದಲಾವಣೆಗಳೂ ಅವಶ್ಯ.

ಇದು ಈಗಿನ ಜನರ ಮನೋಭಾವದಲ್ಲಿ‌ ಕಷ್ಟ ಎನಿಸಿದರೂ ಒಳ್ಳೆಯ ವಾತಾವರಣ ಮತ್ತು ನಂಬಿಕೆ ಸೃಷ್ಟಿಯಾದರೆ ಸಾಧ್ಯವಾಗಲೂ ಬಹುದು. ಸಾಮಾಜಿಕ ನ್ಯಾಯವನ್ನು ಗಮನದಲ್ಲಿಟ್ಟುಕೊಂಡು,
ಹಾಗಾಗಲಿ ಎಂದು ಆಶಿಸುತ್ತಾ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 hour ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

20 hours ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

22 hours ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

1 day ago

ಫುಟ್ ಪಾತ್…… (ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ….)

Footpath...... ಫುಟ್ ಪಾತ್...... ( ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ....) ಫುಟ್ ಪಾತ್ ಎಂದು ಆಂಗ್ಲ ಭಾಷೆಯಲ್ಲಿ ಕರೆಯಲ್ಪಡುವ…

1 day ago

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿ ವಿಸ್ತರಣೆ

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ದಿನಾಂಕವನ್ನು ವಿಸ್ತರಿಸಲಾಗಿದೆ. ಜೊತೆಗೆ, ಈಗಾಗಲೇ…

2 days ago