Categories: ಲೇಖನ

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು.

ಬ್ರಾಹ್ಮಣರ ಎಲ್ಲಾ ಅಗ್ರಹಾರಗಳನ್ನು ನಾಶಪಡಿಸಬೇಕು. ಊರ ಒಳಗಿನ ಎಲ್ಲರ ಜೊತೆ ಸಹಜವಾಗಿ ಬದುಕುವಂತೆ ಮಾಡಬೇಕು.

ಹಾಗೆಯೇ,
ಜಾತಿಗಳ ಆಧಾರದ ಮೇಲೆ ಅಸ್ತಿತ್ವದಲ್ಲಿರುವ ಎಲ್ಲಾ ಕೇರಿ, ಹಟ್ಟಿ, ಬೀದಿ, ಓಣಿ ಮುಂತಾದ ಹೆಸರುಗಳಿಂದ ಕರೆಯಲ್ಪಡುವ ಪ್ರದೇಶಗಳನ್ನು ನಾಶಪಡಿಸಿ ಅದರ ನೆನಪೂ ಉಳಿಯದಂತೆ ಮಾಡಬೇಕು.

ಅದೇರೀತಿ ,
ಒಂದು ಪ್ರತ್ಯೇಕ ಸ್ಥಳಗಳಲ್ಲಿ ಒಟ್ಟಾಗಿ ಗುಂಪು ಗುಂಪಾಗಿ ವಾಸಿಸುತ್ತಿರುವ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಭೌದ್ದರು, ಸಿಖ್ಖರು, ಪಾರ್ಸಿಗಳು ಮುಂತಾದವರನ್ನು ಅಲ್ಲಿಂದ ಬೇರ್ಪಡಿಸಿ ಊರ ಒಳಗೆ ಚದುರಿದಂತೆ ವಾಸಿಸಲು ಅವಕಾಶ ಕಲ್ಪಿಸಿಕೊಡಬೇಕು‌.

ಜಾತಿ ಹೆಸರೇಳುವುದು ಅವಮಾನ ಅನಾಗರಿಕತೆ,
” ಭಾರತೀಯತೆ ” ಒಂದು ಹೆಮ್ಮೆ ಎಂದು ಹೇಳಲು ಯುವ ಜನಾಂಗವನ್ನು ಪ್ರೇರೇಪಿಸಬೇಕು.

ಜಾತಿ, ಧರ್ಮ, ನಂಬಿಕೆ, ಸಂಪ್ರದಾಯಗಳಿಗಿಂತ ನಾಗರಿಕ ಪ್ರಜ್ಞೆ ಆಧುನಿಕ ಸಮಾಜದ ಮುಖ್ಯ ಗುಣಲಕ್ಷಣಗಳು ಎಂದು ಭಾವಿಸುವಂತಾಗಬೇಕು.

ಯಾರಾದರೂ ಸ್ವಯಂ ಇಚ್ಛೆಯಿಂದ ಅಧೀಕೃತ ಜಾತಿಯ ಕಾಲಂನಲ್ಲಿ ಜಾತಿಯ ಹೆಸರು ನಮೂದಿಸದೆ
” ಭಾರತೀಯ ” ಎಂದು ಬರೆಯಲು ಅವಕಾಶ ಕಲ್ಪಿಸಬೇಕು ಮತ್ತು ಅವರಿಗೆ ಏನಾದರೂ ಒಂದಷ್ಟು ಪ್ರೋತ್ಸಾಹಕ ಕೊಡುಗೆ ನೀಡಬೇಕು.

ಅಂತರಜಾತೀಯ ವಿವಾಹವಾಗಿ 15 ವರ್ಷ ಪೂರೈಸಿದ ಕುಟುಂಬಕ್ಕೆ, ಕೌಟುಂಬಿಕ ನ್ಯಾಯಾಲಯ ಇದನ್ನು ದೃಢಪಡಿಸಿದಲ್ಲಿ ,
ಅವರ ಕುಟುಂಬಕ್ಕೆ ಜೀವನ ಪರ್ಯಂತ ಯಾವುದೇ ಆಸ್ಪತ್ರೆಗಳಲ್ಲಿ ಉಚಿತ ಆರೋಗ್ಯ ಸೇವೆ ಸರ್ಕಾರ ಒದಗಿಸಬೇಕು.

ಅಸ್ಪೃಶ್ಯತೆ ಆಚರಣೆ ದೇಶ ದ್ರೋಹಕ್ಕೆ ಸಮಾನ ಎಂದು ಘೋಷಿಸಬೇಕು.
ಪಂಕ್ತಿಬೇದ, ಜಾತಿಯ ಆಧಾರದ ಪಕ್ಷಪಾತ, ಪ್ರವೇಶ ನಿಷೇಧ, ವ್ಯಕ್ತಿಯ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಆಚರಣೆ ಇರುವ ಎಲ್ಲಾ ದೇವ ಮಂದಿರಗಳನ್ನು ಸರ್ಕಾರ ವಶಕ್ಕೆ ಪಡೆಯಬೇಕು.

ಎಲ್ಲಾ ಮಂದಿರ, ಮಸೀದಿ, ಚರ್ಚು, ಗುರುದ್ವಾರ, ಭೌದ್ದ, ಜೈನ, ಪಾರ್ಸಿ ಮಂದಿರಗಳನ್ನು ಎಲ್ಲರಿಗೂ ಮುಕ್ತ ಪ್ರವೇಶ ಕಲ್ಪಿಸಬೇಕು.
ಅಲ್ಲಿ ನಂಬಿಕೆಯ ಆಚರಣೆಗಳಿಗಿಂತ ಧ್ಯಾನ ಕೇಂದ್ರಗಳಂತೆ ಕಾರ್ಯನಿರ್ವಾಹಿಸಲು ಹೆಚ್ಚಿನ ಆಧ್ಯತೆ ಕೊಡಬೇಕು.

ಹೆಸರುಗಳ ಮುಂದೆ ಜಾತಿ ಸೂಚಕ ಪದವನ್ನು ನಿಷೇಧಿಸಬೇಕು.

ಹೊಟ್ಟೆಯಲ್ಲಿರುವ ಮಗುವಿನ ಲಿಂಗ ಪರೀಕ್ಷೆ ನಿಷೇಧಿಸಿದಂತೆ ಜಾತಿಯನ್ನು ಮದುವೆ, ಚುನಾವಣೆ ಮುಂತಾದ ಸಾರ್ವಜನಿಕ ಕಾರ್ಯಗಳಲ್ಲಿ ಬಹಿರಂಗಪಡಿಸದಂತೆ ನಿಷೇಧವಿರಬೇಕು.

ಜಾತಿ ಹೆಸರಿನ ಮತ್ತು ಜಾತಿ ಆಧಾರಿತ ಸಂಘಟನೆಗಳನ್ನು ನಿಷೇಧಿಸಬೇಕು. ಅದಕ್ಕೆ ಬದಲಾಗಿ ಕ್ರೀಡಾ, ಸಾಂಸ್ಕೃತಿಕ, ಸಾಹಿತ್ಯಕ, ಸಾಹಸ ಸಂಘಟನೆಗಳನ್ನು ಪ್ರೋತ್ಸಾಹಿಸಬೇಕು.

ಇಷ್ಟಾದರೂ ದಲಿತರು ಮತ್ತು ‌ಹಿಂದುಳಿದ ವರ್ಗದವರಿಗೆ ಸಾಮಾಜಿಕ ನ್ಯಾಯ ಸಿಗುವುದಿಲ್ಲ. ಏಕೆಂದರೆ ಈಗಲೂ ತಳ ಜಾತಿಗಳು ಮುಖ್ಯವಾಹಿನಿಯಿಂದ ದೂರವಿದ್ದು ಅಸಮಾನತೆಯಿಂದ ಬಳಲುತ್ತಿವೆ.

ಅದಕ್ಕಾಗಿ ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ಮಾಡಿ,
ಅ – ಅಗಸ, ಈ – ಈಶ, A – Apple, D – Dog ಎಂಬ ಕ್ರಮವನ್ನು ಕೇವಲ Supplement ಆಗಿ ಕಲಿಸಿ ಮುಖ್ಯ ಶಿಕ್ಚಣ ಇಲ್ಲಿನ ಬದುಕಿನ ಅವಶ್ಯಕತೆ, ಕ್ರಿಯಾತ್ಮಕತೆ, ಸಹಜತೆ ಮತ್ತು ಜೀವಪರ ನಿಲುವಿನ ಕ್ರಮವನ್ನು ರೂಪಿಸಬೇಕು.

SSLC ನಂತರದ ಒಂದು ವರ್ಷದ ಶಿಕ್ಷಣವನ್ನು ಕಡ್ಡಾಯವಾಗಿ ದೈಹಿಕ ಮತ್ತು ಮಾನಸಿಕ ತರಬೇತಿಯ ಕ್ರಮವಾಗಿ ( Military training ) ರೂಪಿಸಬೇಕು.

ಶಿಕ್ಷಣದ ಗುಣಮಟ್ಟವನ್ನು ಅತ್ಯಂತ ಮೇಲ್ದರ್ಜೆಗೆ ಏರಿಸಿ ಅದರ ಖರ್ಚನ್ನು ಕಡಿಮೆಗೊಳಿಸಿ, ಕೃಷಿ ಮತ್ತು ಅದಕ್ಕೆ ಪೂರಕ ಉದ್ಯೋಗ ಸೃಷ್ಟಿಸಿ, ಭಾರತ ಹೊರತುಪಡಿಸಿ ಇಡೀ ವಿಶ್ವದ ಆಹಾರದ ಅವಶ್ಯಕತೆ ಗಮನಿಸಿ ಆ ವಸ್ತುಗಳನ್ನು ರಪ್ತು ಮಾಡಲು ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು.

ನಿರುದ್ಯೋಗಿಗಳಿಗೆ ಕೆಲಸ ಸಿಗುವವರೆಗೂ ಒಂದಷ್ಟು ತೃಪ್ತಿದಾಯಕ ಭತ್ಯೆ ನೀಡಿದರೆ, ಹೆಚ್ಚು ಹೆಚ್ಚು ಉದ್ಯೋಗ ಕಲ್ಪಿಸಿದರೆ ಮೀಸಲಾತಿಯ ಪ್ರಭಾವ ಕಡಿಮೆಯಾಗಬಹುದು.

ಜಾತಿಯತೆಯನ್ನೇ ನಾಶ ಮಾಡಿದರೆ ಜಾತಿಯ ಮೀಸಲಾತಿ ಪ್ರಶ್ನೆಯೇ ಉದ್ಭವಾಗುವುದಿಲ್ಲ.

ಪರೋಕ್ಷವಾಗಿ ಭ್ರಷ್ಟಾಚಾರವೂ ಸ್ವಲ್ಪ ಕಡಿಮೆಯಾಗುತ್ತದೆ..

ಹೀಗೆ ಹಲವಾರು ವಿಚಾರಗಳು ಮನದಲ್ಲಿ ಮೂಡುತ್ತದೆ. ಇದೂ ಸಂಪೂರ್ಣ ಪರಿಪೂರ್ಣ ಅಲ್ಲ. ವಾಸ್ತವವಾಗಿ ಕಾರ್ಯರೂಪಕ್ಕೆ ಬರುವಾಗ ಪ್ರಾಯೋಗಿಕ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಒಂದಷ್ಟು ಬದಲಾವಣೆಗಳೂ ಅವಶ್ಯ.

ಇದು ಈಗಿನ ಜನರ ಮನೋಭಾವದಲ್ಲಿ‌ ಕಷ್ಟ ಎನಿಸಿದರೂ ಒಳ್ಳೆಯ ವಾತಾವರಣ ಮತ್ತು ನಂಬಿಕೆ ಸೃಷ್ಟಿಯಾದರೆ ಸಾಧ್ಯವಾಗಲೂ ಬಹುದು. ಸಾಮಾಜಿಕ ನ್ಯಾಯವನ್ನು ಗಮನದಲ್ಲಿಟ್ಟುಕೊಂಡು,
ಹಾಗಾಗಲಿ ಎಂದು ಆಶಿಸುತ್ತಾ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

5 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

5 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

20 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago