ಹುಟ್ಟಿನಿಂದಲೇ 3 ಕಿಡ್ನಿ ಹೊಂದಿದ್ದ ವ್ಯಕ್ತಿಗೆ ಮೆಡಿಕವರ್‌ನಲ್ಲಿ ಶಸ್ತ್ರಚಿಕಿತ್ಸೆ

ಬೆಂಗಳೂರು , ವೈಟ್‌ ಫೀಲ್ದ್‌ : ಹುಟ್ಟಿನಿಂದಲೇ 3 ಕಿಡ್ನಿ ಹೊಂದಿರುವುದನ್ನು ತಿಳಿಯದೇ ಇದ್ದ ವ್ಯಕ್ತಿ, ಕಳೆದ ಎರಡು ವರ್ಷಗಳಿಂದ ಹೊಟ್ಟೆಯ ಎಡಭಾಗದ ನೋವು ಹಾಗೂ ಪದೇಪದೇ ಮೂತ್ರ ಸೋಂಕಿನಿಂದ ಬಳಲುತ್ತಿದ್ದರು. ವೈಟ್‌ಫೀಲ್ಡ್‌ನ ಮೆಡಿಕವರ್ ಆಸ್ಪತ್ರೆಯಲ್ಲಿ ನಡೆದ ಶಸ್ತ್ರಚಿಕಿತ್ಸೆಯಲ್ಲಿ 3ನೇ ಕಿಡ್ನಿಯನ್ನು ಯಶಸ್ವಿಯಾಗಿ ತೆಗೆದುಹಾಕಲಾಗಿದೆ.

ನೋವಿನ ಮೂಲ ತಿಳಿಯಲು ಸ್ಕ್ಯಾನಿಂಗ್‌ ಮಾಡಿದಾಗ ಎಡಭಾಗದಲ್ಲಿ ಎರಡು ಕಿಡ್ನಿಗಳು ಇರುವ ಅಪರೂಪದ ಸ್ಥಿತಿ ಪತ್ತೆಯಾಯಿತು. ಎಡ ಕಿಡ್ನಿಯು ಎರಡು ಭಾಗಗಳಾಗಿ ವಿಭಜನೆಯಾಗಿದ್ದು, ಮೇಲಿನ ಭಾಗವು ಮೂತ್ರನಾಳದಿಂದ ಮುಚ್ಚಿಕೊಂಡಿದ್ದರಿಂದ ಸಂಪೂರ್ಣ ಹಾಳಾಗಿ 10 ಸೆಂ.ಮೀ ಗಾತ್ರಕ್ಕೆ ಉಬ್ಬಿ ಬಲೂನಿನಂತೆ ಬದಲಾಗಿತ್ತು. ಇದರಿಂದ ತೀವ್ರ ನೋವು ಹಾಗೂ ಮೂತ್ರ ಸೋಂಕುಗಳು ಉಂಟಾಗುತ್ತಿದವು.

ಡಾ. ಪ್ರಮೋದ್ ಎಸ್, ರೋಬೊಟಿಕ್ ಯೂರಾಲಜಿಸ್ಟ್ ಅವರ ನೇತೃತ್ವದಲ್ಲಿ ವೈದ್ಯರ ತಂಡವು ರೋಬೋಟಿಕ್ ಶಸ್ತ್ರಚಿಕಿತ್ಸೆ ಮೂಲಕ (Nephrectomy) ಹಾಳಾದ ಮೇಲಿನ ಭಾಗವನ್ನು ತೆಗೆದುಹಾಕಿದರು. ಶಸ್ತ್ರಚಿಕಿತ್ಸೆಯ ವೇಳೆ ಕೆಳಗಿನ ಆರೋಗ್ಯಕರ ಕಿಡ್ನಿಯ ರಕ್ತನಾಳಗಳನ್ನು ಸುರಕ್ಷಿತಗೊಳಿಸಿ, ಮೇಲಿನ ಭಾಗವನ್ನು ಯಶಸ್ವಿಯಾಗಿ ತೆಗೆಯಲಾಯಿತು.

ರೋಗಿ ಶಸ್ತ್ರಚಿಕಿತ್ಸೆಯನ್ನು ಸುಗಮವಾಗಿ ಸಹಿಸಿಕೊಂಡಿದ್ದು, ಶಸ್ತ್ರೋತ್ತರ ಚೇತರಿಕೆಯೂ ಉತ್ತಮವಾಗಿದೆ. ಪ್ರಸ್ತುತ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ.
ಡಾ. ಪ್ರಮೋದ್ ಎಸ್ ಹೇಳಿದರು: “ಇದು ಅಪರೂಪ ಹಾಗೂ ಸವಾಲಿನ ಪ್ರಕರಣವಾಗಿತ್ತು. ರೋಬೋಟಿಕ್ ತಂತ್ರಜ್ಞಾನದಿಂದ ನಾವು ನಿಖರವಾಗಿ ಶಸ್ತ್ರಚಿಕಿತ್ಸೆ ಮಾಡಿ ಆರೋಗ್ಯಕರ ಕಿಡ್ನಿಯನ್ನು ಕಾಪಾಡುವಲ್ಲಿ ಯಶಸ್ವಿಯಾದೆವು. ಇದೀಗ ರೋಗಿಗೆ ಪದೇಪದೇ ಮೂತ್ರ ಸೋಂಕು ಹಾಗೂ ತೀವ್ರ ನೋವು ಇರುವುದಿಲ್ಲ.”

Ramesh Babu

Journalist

Recent Posts

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

35 minutes ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

5 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

6 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

6 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

9 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

21 hours ago