ಹುಟ್ಟಿನಿಂದಲೇ 3 ಕಿಡ್ನಿ ಹೊಂದಿದ್ದ ವ್ಯಕ್ತಿಗೆ ಮೆಡಿಕವರ್‌ನಲ್ಲಿ ಶಸ್ತ್ರಚಿಕಿತ್ಸೆ

ಬೆಂಗಳೂರು , ವೈಟ್‌ ಫೀಲ್ದ್‌ : ಹುಟ್ಟಿನಿಂದಲೇ 3 ಕಿಡ್ನಿ ಹೊಂದಿರುವುದನ್ನು ತಿಳಿಯದೇ ಇದ್ದ ವ್ಯಕ್ತಿ, ಕಳೆದ ಎರಡು ವರ್ಷಗಳಿಂದ ಹೊಟ್ಟೆಯ ಎಡಭಾಗದ ನೋವು ಹಾಗೂ ಪದೇಪದೇ ಮೂತ್ರ ಸೋಂಕಿನಿಂದ ಬಳಲುತ್ತಿದ್ದರು. ವೈಟ್‌ಫೀಲ್ಡ್‌ನ ಮೆಡಿಕವರ್ ಆಸ್ಪತ್ರೆಯಲ್ಲಿ ನಡೆದ ಶಸ್ತ್ರಚಿಕಿತ್ಸೆಯಲ್ಲಿ 3ನೇ ಕಿಡ್ನಿಯನ್ನು ಯಶಸ್ವಿಯಾಗಿ ತೆಗೆದುಹಾಕಲಾಗಿದೆ.

ನೋವಿನ ಮೂಲ ತಿಳಿಯಲು ಸ್ಕ್ಯಾನಿಂಗ್‌ ಮಾಡಿದಾಗ ಎಡಭಾಗದಲ್ಲಿ ಎರಡು ಕಿಡ್ನಿಗಳು ಇರುವ ಅಪರೂಪದ ಸ್ಥಿತಿ ಪತ್ತೆಯಾಯಿತು. ಎಡ ಕಿಡ್ನಿಯು ಎರಡು ಭಾಗಗಳಾಗಿ ವಿಭಜನೆಯಾಗಿದ್ದು, ಮೇಲಿನ ಭಾಗವು ಮೂತ್ರನಾಳದಿಂದ ಮುಚ್ಚಿಕೊಂಡಿದ್ದರಿಂದ ಸಂಪೂರ್ಣ ಹಾಳಾಗಿ 10 ಸೆಂ.ಮೀ ಗಾತ್ರಕ್ಕೆ ಉಬ್ಬಿ ಬಲೂನಿನಂತೆ ಬದಲಾಗಿತ್ತು. ಇದರಿಂದ ತೀವ್ರ ನೋವು ಹಾಗೂ ಮೂತ್ರ ಸೋಂಕುಗಳು ಉಂಟಾಗುತ್ತಿದವು.

ಡಾ. ಪ್ರಮೋದ್ ಎಸ್, ರೋಬೊಟಿಕ್ ಯೂರಾಲಜಿಸ್ಟ್ ಅವರ ನೇತೃತ್ವದಲ್ಲಿ ವೈದ್ಯರ ತಂಡವು ರೋಬೋಟಿಕ್ ಶಸ್ತ್ರಚಿಕಿತ್ಸೆ ಮೂಲಕ (Nephrectomy) ಹಾಳಾದ ಮೇಲಿನ ಭಾಗವನ್ನು ತೆಗೆದುಹಾಕಿದರು. ಶಸ್ತ್ರಚಿಕಿತ್ಸೆಯ ವೇಳೆ ಕೆಳಗಿನ ಆರೋಗ್ಯಕರ ಕಿಡ್ನಿಯ ರಕ್ತನಾಳಗಳನ್ನು ಸುರಕ್ಷಿತಗೊಳಿಸಿ, ಮೇಲಿನ ಭಾಗವನ್ನು ಯಶಸ್ವಿಯಾಗಿ ತೆಗೆಯಲಾಯಿತು.

ರೋಗಿ ಶಸ್ತ್ರಚಿಕಿತ್ಸೆಯನ್ನು ಸುಗಮವಾಗಿ ಸಹಿಸಿಕೊಂಡಿದ್ದು, ಶಸ್ತ್ರೋತ್ತರ ಚೇತರಿಕೆಯೂ ಉತ್ತಮವಾಗಿದೆ. ಪ್ರಸ್ತುತ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ.
ಡಾ. ಪ್ರಮೋದ್ ಎಸ್ ಹೇಳಿದರು: “ಇದು ಅಪರೂಪ ಹಾಗೂ ಸವಾಲಿನ ಪ್ರಕರಣವಾಗಿತ್ತು. ರೋಬೋಟಿಕ್ ತಂತ್ರಜ್ಞಾನದಿಂದ ನಾವು ನಿಖರವಾಗಿ ಶಸ್ತ್ರಚಿಕಿತ್ಸೆ ಮಾಡಿ ಆರೋಗ್ಯಕರ ಕಿಡ್ನಿಯನ್ನು ಕಾಪಾಡುವಲ್ಲಿ ಯಶಸ್ವಿಯಾದೆವು. ಇದೀಗ ರೋಗಿಗೆ ಪದೇಪದೇ ಮೂತ್ರ ಸೋಂಕು ಹಾಗೂ ತೀವ್ರ ನೋವು ಇರುವುದಿಲ್ಲ.”

Ramesh Babu

Journalist

Recent Posts

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

11 minutes ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

21 minutes ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

19 hours ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

19 hours ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

20 hours ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

23 hours ago