ಹುಟ್ಟಿನಿಂದಲೇ 3 ಕಿಡ್ನಿ ಹೊಂದಿದ್ದ ವ್ಯಕ್ತಿಗೆ ಮೆಡಿಕವರ್‌ನಲ್ಲಿ ಶಸ್ತ್ರಚಿಕಿತ್ಸೆ

ಬೆಂಗಳೂರು , ವೈಟ್‌ ಫೀಲ್ದ್‌ : ಹುಟ್ಟಿನಿಂದಲೇ 3 ಕಿಡ್ನಿ ಹೊಂದಿರುವುದನ್ನು ತಿಳಿಯದೇ ಇದ್ದ ವ್ಯಕ್ತಿ, ಕಳೆದ ಎರಡು ವರ್ಷಗಳಿಂದ ಹೊಟ್ಟೆಯ ಎಡಭಾಗದ ನೋವು ಹಾಗೂ ಪದೇಪದೇ ಮೂತ್ರ ಸೋಂಕಿನಿಂದ ಬಳಲುತ್ತಿದ್ದರು. ವೈಟ್‌ಫೀಲ್ಡ್‌ನ ಮೆಡಿಕವರ್ ಆಸ್ಪತ್ರೆಯಲ್ಲಿ ನಡೆದ ಶಸ್ತ್ರಚಿಕಿತ್ಸೆಯಲ್ಲಿ 3ನೇ ಕಿಡ್ನಿಯನ್ನು ಯಶಸ್ವಿಯಾಗಿ ತೆಗೆದುಹಾಕಲಾಗಿದೆ.

ನೋವಿನ ಮೂಲ ತಿಳಿಯಲು ಸ್ಕ್ಯಾನಿಂಗ್‌ ಮಾಡಿದಾಗ ಎಡಭಾಗದಲ್ಲಿ ಎರಡು ಕಿಡ್ನಿಗಳು ಇರುವ ಅಪರೂಪದ ಸ್ಥಿತಿ ಪತ್ತೆಯಾಯಿತು. ಎಡ ಕಿಡ್ನಿಯು ಎರಡು ಭಾಗಗಳಾಗಿ ವಿಭಜನೆಯಾಗಿದ್ದು, ಮೇಲಿನ ಭಾಗವು ಮೂತ್ರನಾಳದಿಂದ ಮುಚ್ಚಿಕೊಂಡಿದ್ದರಿಂದ ಸಂಪೂರ್ಣ ಹಾಳಾಗಿ 10 ಸೆಂ.ಮೀ ಗಾತ್ರಕ್ಕೆ ಉಬ್ಬಿ ಬಲೂನಿನಂತೆ ಬದಲಾಗಿತ್ತು. ಇದರಿಂದ ತೀವ್ರ ನೋವು ಹಾಗೂ ಮೂತ್ರ ಸೋಂಕುಗಳು ಉಂಟಾಗುತ್ತಿದವು.

ಡಾ. ಪ್ರಮೋದ್ ಎಸ್, ರೋಬೊಟಿಕ್ ಯೂರಾಲಜಿಸ್ಟ್ ಅವರ ನೇತೃತ್ವದಲ್ಲಿ ವೈದ್ಯರ ತಂಡವು ರೋಬೋಟಿಕ್ ಶಸ್ತ್ರಚಿಕಿತ್ಸೆ ಮೂಲಕ (Nephrectomy) ಹಾಳಾದ ಮೇಲಿನ ಭಾಗವನ್ನು ತೆಗೆದುಹಾಕಿದರು. ಶಸ್ತ್ರಚಿಕಿತ್ಸೆಯ ವೇಳೆ ಕೆಳಗಿನ ಆರೋಗ್ಯಕರ ಕಿಡ್ನಿಯ ರಕ್ತನಾಳಗಳನ್ನು ಸುರಕ್ಷಿತಗೊಳಿಸಿ, ಮೇಲಿನ ಭಾಗವನ್ನು ಯಶಸ್ವಿಯಾಗಿ ತೆಗೆಯಲಾಯಿತು.

ರೋಗಿ ಶಸ್ತ್ರಚಿಕಿತ್ಸೆಯನ್ನು ಸುಗಮವಾಗಿ ಸಹಿಸಿಕೊಂಡಿದ್ದು, ಶಸ್ತ್ರೋತ್ತರ ಚೇತರಿಕೆಯೂ ಉತ್ತಮವಾಗಿದೆ. ಪ್ರಸ್ತುತ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ.
ಡಾ. ಪ್ರಮೋದ್ ಎಸ್ ಹೇಳಿದರು: “ಇದು ಅಪರೂಪ ಹಾಗೂ ಸವಾಲಿನ ಪ್ರಕರಣವಾಗಿತ್ತು. ರೋಬೋಟಿಕ್ ತಂತ್ರಜ್ಞಾನದಿಂದ ನಾವು ನಿಖರವಾಗಿ ಶಸ್ತ್ರಚಿಕಿತ್ಸೆ ಮಾಡಿ ಆರೋಗ್ಯಕರ ಕಿಡ್ನಿಯನ್ನು ಕಾಪಾಡುವಲ್ಲಿ ಯಶಸ್ವಿಯಾದೆವು. ಇದೀಗ ರೋಗಿಗೆ ಪದೇಪದೇ ಮೂತ್ರ ಸೋಂಕು ಹಾಗೂ ತೀವ್ರ ನೋವು ಇರುವುದಿಲ್ಲ.”

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

19 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

2 days ago