ಬೆಂಗಳೂರು , ವೈಟ್ ಫೀಲ್ದ್ : ಹುಟ್ಟಿನಿಂದಲೇ 3 ಕಿಡ್ನಿ ಹೊಂದಿರುವುದನ್ನು ತಿಳಿಯದೇ ಇದ್ದ ವ್ಯಕ್ತಿ, ಕಳೆದ ಎರಡು ವರ್ಷಗಳಿಂದ ಹೊಟ್ಟೆಯ ಎಡಭಾಗದ ನೋವು ಹಾಗೂ ಪದೇಪದೇ ಮೂತ್ರ ಸೋಂಕಿನಿಂದ ಬಳಲುತ್ತಿದ್ದರು. ವೈಟ್ಫೀಲ್ಡ್ನ ಮೆಡಿಕವರ್ ಆಸ್ಪತ್ರೆಯಲ್ಲಿ ನಡೆದ ಶಸ್ತ್ರಚಿಕಿತ್ಸೆಯಲ್ಲಿ 3ನೇ ಕಿಡ್ನಿಯನ್ನು ಯಶಸ್ವಿಯಾಗಿ ತೆಗೆದುಹಾಕಲಾಗಿದೆ.
ನೋವಿನ ಮೂಲ ತಿಳಿಯಲು ಸ್ಕ್ಯಾನಿಂಗ್ ಮಾಡಿದಾಗ ಎಡಭಾಗದಲ್ಲಿ ಎರಡು ಕಿಡ್ನಿಗಳು ಇರುವ ಅಪರೂಪದ ಸ್ಥಿತಿ ಪತ್ತೆಯಾಯಿತು. ಎಡ ಕಿಡ್ನಿಯು ಎರಡು ಭಾಗಗಳಾಗಿ ವಿಭಜನೆಯಾಗಿದ್ದು, ಮೇಲಿನ ಭಾಗವು ಮೂತ್ರನಾಳದಿಂದ ಮುಚ್ಚಿಕೊಂಡಿದ್ದರಿಂದ ಸಂಪೂರ್ಣ ಹಾಳಾಗಿ 10 ಸೆಂ.ಮೀ ಗಾತ್ರಕ್ಕೆ ಉಬ್ಬಿ ಬಲೂನಿನಂತೆ ಬದಲಾಗಿತ್ತು. ಇದರಿಂದ ತೀವ್ರ ನೋವು ಹಾಗೂ ಮೂತ್ರ ಸೋಂಕುಗಳು ಉಂಟಾಗುತ್ತಿದವು.
ಡಾ. ಪ್ರಮೋದ್ ಎಸ್, ರೋಬೊಟಿಕ್ ಯೂರಾಲಜಿಸ್ಟ್ ಅವರ ನೇತೃತ್ವದಲ್ಲಿ ವೈದ್ಯರ ತಂಡವು ರೋಬೋಟಿಕ್ ಶಸ್ತ್ರಚಿಕಿತ್ಸೆ ಮೂಲಕ (Nephrectomy) ಹಾಳಾದ ಮೇಲಿನ ಭಾಗವನ್ನು ತೆಗೆದುಹಾಕಿದರು. ಶಸ್ತ್ರಚಿಕಿತ್ಸೆಯ ವೇಳೆ ಕೆಳಗಿನ ಆರೋಗ್ಯಕರ ಕಿಡ್ನಿಯ ರಕ್ತನಾಳಗಳನ್ನು ಸುರಕ್ಷಿತಗೊಳಿಸಿ, ಮೇಲಿನ ಭಾಗವನ್ನು ಯಶಸ್ವಿಯಾಗಿ ತೆಗೆಯಲಾಯಿತು.
ರೋಗಿ ಶಸ್ತ್ರಚಿಕಿತ್ಸೆಯನ್ನು ಸುಗಮವಾಗಿ ಸಹಿಸಿಕೊಂಡಿದ್ದು, ಶಸ್ತ್ರೋತ್ತರ ಚೇತರಿಕೆಯೂ ಉತ್ತಮವಾಗಿದೆ. ಪ್ರಸ್ತುತ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ.
ಡಾ. ಪ್ರಮೋದ್ ಎಸ್ ಹೇಳಿದರು: “ಇದು ಅಪರೂಪ ಹಾಗೂ ಸವಾಲಿನ ಪ್ರಕರಣವಾಗಿತ್ತು. ರೋಬೋಟಿಕ್ ತಂತ್ರಜ್ಞಾನದಿಂದ ನಾವು ನಿಖರವಾಗಿ ಶಸ್ತ್ರಚಿಕಿತ್ಸೆ ಮಾಡಿ ಆರೋಗ್ಯಕರ ಕಿಡ್ನಿಯನ್ನು ಕಾಪಾಡುವಲ್ಲಿ ಯಶಸ್ವಿಯಾದೆವು. ಇದೀಗ ರೋಗಿಗೆ ಪದೇಪದೇ ಮೂತ್ರ ಸೋಂಕು ಹಾಗೂ ತೀವ್ರ ನೋವು ಇರುವುದಿಲ್ಲ.”
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…