ಸೋದರ ಮಾವನಿಂದಲೆ ಅಳಿಯನ ಕೊಲೆಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ಉತ್ತರ ತಾಲೂಕಿನ ಕಾರ್ಲಾಪುರದಲ್ಲಿ ನಿನ್ನೆ ಸಂಜೆ ನಡೆದಿದೆ.
ಗಂಗರಾಜ್(30) ಕೊಲೆಯಾದ ದುರ್ದೈವಿ. ಶ್ರೀನಿವಾಸ್ (35) ಕೊಲೆ ಮಾಡಿರುವ ಆರೋಪಿ.
ಮೃತ ದುರ್ದೈವಿ ಗಂಗರಾಜ್ ತಾಯಿಯ ತಮ್ಮನಾದ ಶ್ರೀನಿವಾಸ್ ಎಂಬಾತ ಗಂಗರಾಜ್ ತಲೆಗೆ ರಾಡ್ ನಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಬಾವ-ಬಾಮೈದ ನಡುವೆ ಹುಡುಗಿಯ ವಿಚಾರಕ್ಕೆ ಒಂದು ವರ್ಷದಿಂದ ಜಿದ್ದು ಇತ್ತು. ಇವರಿಬ್ಬರು ಈ ಹಿಂದೆ ಕೂಡ ಗಲಾಟೆ ಮಾಡಿಕೊಂಡಿದ್ದರು. ತಾಯಿಯ ತಮ್ಮ ಆಗಿದ್ದ ಕಾರಣ ಪೊಲೀಸ್ ದೂರು ನೀಡಿರಲಿಲ್ಲ. ಅದೇರೀತಿ ಆರ್ಥಿಕವಾಗಿ ಬೆಳೆದರು ಎಂದು ಯಾವಾಗಲೂ ಗಲಾಟೆ ನಡೆಯುತ್ತಿತ್ತು. ನಿನ್ನೆ ಸಂಜೆ ನಾಲ್ಕೈದು ಸ್ನೇಹಿತರ ಜೊತೆ ಸೇರಿ ಊರಿನ ಮಧ್ಯೆ ಇರುವ ಸರ್ಕಲ್ ನಲ್ಲಿ ಕೊಲೆ ಮಾಡಲಾಗಿದೆ ಎಂದು ಮೃತ ದುರ್ದೈವಿ ತಂದೆ ರಾಜಣ್ಣ ತಿಳಿಸಿದ್ದಾರೆ.
ಮೃತನನ್ನು ಯಲಹಂಕ ಸರಕಾರಿ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ರಾಜಾನುಗುಂಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಲೆ ಮರಿಸಿಕೊಂಡಿರುವ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…