ಸೋದರ ಮಾವನಿಂದಲೆ ಅಳಿಯನ ಕೊಲೆಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ಉತ್ತರ ತಾಲೂಕಿನ ಕಾರ್ಲಾಪುರದಲ್ಲಿ ನಿನ್ನೆ ಸಂಜೆ ನಡೆದಿದೆ.
ಗಂಗರಾಜ್(30) ಕೊಲೆಯಾದ ದುರ್ದೈವಿ. ಶ್ರೀನಿವಾಸ್ (35) ಕೊಲೆ ಮಾಡಿರುವ ಆರೋಪಿ.
ಮೃತ ದುರ್ದೈವಿ ಗಂಗರಾಜ್ ತಾಯಿಯ ತಮ್ಮನಾದ ಶ್ರೀನಿವಾಸ್ ಎಂಬಾತ ಗಂಗರಾಜ್ ತಲೆಗೆ ರಾಡ್ ನಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಬಾವ-ಬಾಮೈದ ನಡುವೆ ಹುಡುಗಿಯ ವಿಚಾರಕ್ಕೆ ಒಂದು ವರ್ಷದಿಂದ ಜಿದ್ದು ಇತ್ತು. ಇವರಿಬ್ಬರು ಈ ಹಿಂದೆ ಕೂಡ ಗಲಾಟೆ ಮಾಡಿಕೊಂಡಿದ್ದರು. ತಾಯಿಯ ತಮ್ಮ ಆಗಿದ್ದ ಕಾರಣ ಪೊಲೀಸ್ ದೂರು ನೀಡಿರಲಿಲ್ಲ. ಅದೇರೀತಿ ಆರ್ಥಿಕವಾಗಿ ಬೆಳೆದರು ಎಂದು ಯಾವಾಗಲೂ ಗಲಾಟೆ ನಡೆಯುತ್ತಿತ್ತು. ನಿನ್ನೆ ಸಂಜೆ ನಾಲ್ಕೈದು ಸ್ನೇಹಿತರ ಜೊತೆ ಸೇರಿ ಊರಿನ ಮಧ್ಯೆ ಇರುವ ಸರ್ಕಲ್ ನಲ್ಲಿ ಕೊಲೆ ಮಾಡಲಾಗಿದೆ ಎಂದು ಮೃತ ದುರ್ದೈವಿ ತಂದೆ ರಾಜಣ್ಣ ತಿಳಿಸಿದ್ದಾರೆ.
ಮೃತನನ್ನು ಯಲಹಂಕ ಸರಕಾರಿ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ರಾಜಾನುಗುಂಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಲೆ ಮರಿಸಿಕೊಂಡಿರುವ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರು ನೇಮಕಗೊಂಡಿದ್ದಾರೆ... ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ…
ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…
ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…