ಸೋದರ ಮಾವನಿಂದಲೆ ಅಳಿಯನ ಕೊಲೆಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ಉತ್ತರ ತಾಲೂಕಿನ ಕಾರ್ಲಾಪುರದಲ್ಲಿ ನಿನ್ನೆ ಸಂಜೆ ನಡೆದಿದೆ.
ಗಂಗರಾಜ್(30) ಕೊಲೆಯಾದ ದುರ್ದೈವಿ. ಶ್ರೀನಿವಾಸ್ (35) ಕೊಲೆ ಮಾಡಿರುವ ಆರೋಪಿ.
ಮೃತ ದುರ್ದೈವಿ ಗಂಗರಾಜ್ ತಾಯಿಯ ತಮ್ಮನಾದ ಶ್ರೀನಿವಾಸ್ ಎಂಬಾತ ಗಂಗರಾಜ್ ತಲೆಗೆ ರಾಡ್ ನಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಬಾವ-ಬಾಮೈದ ನಡುವೆ ಹುಡುಗಿಯ ವಿಚಾರಕ್ಕೆ ಒಂದು ವರ್ಷದಿಂದ ಜಿದ್ದು ಇತ್ತು. ಇವರಿಬ್ಬರು ಈ ಹಿಂದೆ ಕೂಡ ಗಲಾಟೆ ಮಾಡಿಕೊಂಡಿದ್ದರು. ತಾಯಿಯ ತಮ್ಮ ಆಗಿದ್ದ ಕಾರಣ ಪೊಲೀಸ್ ದೂರು ನೀಡಿರಲಿಲ್ಲ. ಅದೇರೀತಿ ಆರ್ಥಿಕವಾಗಿ ಬೆಳೆದರು ಎಂದು ಯಾವಾಗಲೂ ಗಲಾಟೆ ನಡೆಯುತ್ತಿತ್ತು. ನಿನ್ನೆ ಸಂಜೆ ನಾಲ್ಕೈದು ಸ್ನೇಹಿತರ ಜೊತೆ ಸೇರಿ ಊರಿನ ಮಧ್ಯೆ ಇರುವ ಸರ್ಕಲ್ ನಲ್ಲಿ ಕೊಲೆ ಮಾಡಲಾಗಿದೆ ಎಂದು ಮೃತ ದುರ್ದೈವಿ ತಂದೆ ರಾಜಣ್ಣ ತಿಳಿಸಿದ್ದಾರೆ.
ಮೃತನನ್ನು ಯಲಹಂಕ ಸರಕಾರಿ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ರಾಜಾನುಗುಂಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಲೆ ಮರಿಸಿಕೊಂಡಿರುವ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…
ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…