ಸೋದರ ಮಾವನಿಂದಲೆ ಅಳಿಯನ ಕೊಲೆಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ಉತ್ತರ ತಾಲೂಕಿನ ಕಾರ್ಲಾಪುರದಲ್ಲಿ ನಿನ್ನೆ ಸಂಜೆ ನಡೆದಿದೆ.
ಗಂಗರಾಜ್(30) ಕೊಲೆಯಾದ ದುರ್ದೈವಿ. ಶ್ರೀನಿವಾಸ್ (35) ಕೊಲೆ ಮಾಡಿರುವ ಆರೋಪಿ.
ಮೃತ ದುರ್ದೈವಿ ಗಂಗರಾಜ್ ತಾಯಿಯ ತಮ್ಮನಾದ ಶ್ರೀನಿವಾಸ್ ಎಂಬಾತ ಗಂಗರಾಜ್ ತಲೆಗೆ ರಾಡ್ ನಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಬಾವ-ಬಾಮೈದ ನಡುವೆ ಹುಡುಗಿಯ ವಿಚಾರಕ್ಕೆ ಒಂದು ವರ್ಷದಿಂದ ಜಿದ್ದು ಇತ್ತು. ಇವರಿಬ್ಬರು ಈ ಹಿಂದೆ ಕೂಡ ಗಲಾಟೆ ಮಾಡಿಕೊಂಡಿದ್ದರು. ತಾಯಿಯ ತಮ್ಮ ಆಗಿದ್ದ ಕಾರಣ ಪೊಲೀಸ್ ದೂರು ನೀಡಿರಲಿಲ್ಲ. ಅದೇರೀತಿ ಆರ್ಥಿಕವಾಗಿ ಬೆಳೆದರು ಎಂದು ಯಾವಾಗಲೂ ಗಲಾಟೆ ನಡೆಯುತ್ತಿತ್ತು. ನಿನ್ನೆ ಸಂಜೆ ನಾಲ್ಕೈದು ಸ್ನೇಹಿತರ ಜೊತೆ ಸೇರಿ ಊರಿನ ಮಧ್ಯೆ ಇರುವ ಸರ್ಕಲ್ ನಲ್ಲಿ ಕೊಲೆ ಮಾಡಲಾಗಿದೆ ಎಂದು ಮೃತ ದುರ್ದೈವಿ ತಂದೆ ರಾಜಣ್ಣ ತಿಳಿಸಿದ್ದಾರೆ.
ಮೃತನನ್ನು ಯಲಹಂಕ ಸರಕಾರಿ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ರಾಜಾನುಗುಂಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಲೆ ಮರಿಸಿಕೊಂಡಿರುವ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಖಾಸಗಿ ಹೋಟೆಲ್ನಲ್ಲಿ ಇಬ್ಬರು ಬಾಲಕಿಯರು ಶಂಕಾಸ್ಪದವಾಗಿ ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ…
ದೊಡ್ಡಬಳ್ಳಾಪುರ: ಯುವ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಅರ್ಜುನ್ ವಿರಾಟ್ ಅವರ ಜನ್ಮದಿನದ ಹಿನ್ನೆಲೆ, ಅವರ ಸ್ನೇಹಿತರು ಹಾಗೂ ಒಡನಾಡಿಗಳು…
ದೊಡ್ಡಬಳ್ಳಾಪುರ: ನಗರದ ಸೈಕಲ್ ಗೋಡೌನ್ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಗೋಡೌನ್ನಲ್ಲಿದ್ದ ಅಪಾರ ಪ್ರಮಾಣದ ಬೆಲೆಬಾಳುವ ಸೈಕಲ್ಗಳು ಸುಟ್ಟು ಕರಕಲಾದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಮಧುರೆ ಹೋಬಳಿಯ ಚೆನ್ನದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಬಳಿ ಲಾರಿ ಹಾಗೂ ಕಾರು ನಡುವೆ…
ತಿಂಗಳುಗಳ ಕಾಲ ಮಳೆಗಾಗಿ ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ರೈತರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಇಷ್ಟು ದಿನ ಸಮರ್ಪಕ…
ಬೆಂಗಳೂರು: ಸ್ವಚ್ಚ, ಸುರಕ್ಷಿತ ಬೆಂಗಳೂರಿಗಾಗಿ ಜಿಬಿಎ ಜತೆ ಕೈಜೋಡಿಸಿರುವ ಬೆಸ್ಕಾಂ,ನಗರದ ಜನರಿಗೆ ಸುರಕ್ಷಿತ ನಡಿಗೆಯ ಗ್ಯಾರಂಟಿ ನೀಡುವ ಉದ್ದೇಶದಿಂದ ನಿಗಮದ…