ಸೋದರ ಮಾವನಿಂದಲೆ ಅಳಿಯನ ಕೊಲೆಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ಉತ್ತರ ತಾಲೂಕಿನ ಕಾರ್ಲಾಪುರದಲ್ಲಿ ನಿನ್ನೆ ಸಂಜೆ ನಡೆದಿದೆ.
ಗಂಗರಾಜ್(30) ಕೊಲೆಯಾದ ದುರ್ದೈವಿ. ಶ್ರೀನಿವಾಸ್ (35) ಕೊಲೆ ಮಾಡಿರುವ ಆರೋಪಿ.
ಮೃತ ದುರ್ದೈವಿ ಗಂಗರಾಜ್ ತಾಯಿಯ ತಮ್ಮನಾದ ಶ್ರೀನಿವಾಸ್ ಎಂಬಾತ ಗಂಗರಾಜ್ ತಲೆಗೆ ರಾಡ್ ನಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಬಾವ-ಬಾಮೈದ ನಡುವೆ ಹುಡುಗಿಯ ವಿಚಾರಕ್ಕೆ ಒಂದು ವರ್ಷದಿಂದ ಜಿದ್ದು ಇತ್ತು. ಇವರಿಬ್ಬರು ಈ ಹಿಂದೆ ಕೂಡ ಗಲಾಟೆ ಮಾಡಿಕೊಂಡಿದ್ದರು. ತಾಯಿಯ ತಮ್ಮ ಆಗಿದ್ದ ಕಾರಣ ಪೊಲೀಸ್ ದೂರು ನೀಡಿರಲಿಲ್ಲ. ಅದೇರೀತಿ ಆರ್ಥಿಕವಾಗಿ ಬೆಳೆದರು ಎಂದು ಯಾವಾಗಲೂ ಗಲಾಟೆ ನಡೆಯುತ್ತಿತ್ತು. ನಿನ್ನೆ ಸಂಜೆ ನಾಲ್ಕೈದು ಸ್ನೇಹಿತರ ಜೊತೆ ಸೇರಿ ಊರಿನ ಮಧ್ಯೆ ಇರುವ ಸರ್ಕಲ್ ನಲ್ಲಿ ಕೊಲೆ ಮಾಡಲಾಗಿದೆ ಎಂದು ಮೃತ ದುರ್ದೈವಿ ತಂದೆ ರಾಜಣ್ಣ ತಿಳಿಸಿದ್ದಾರೆ.
ಮೃತನನ್ನು ಯಲಹಂಕ ಸರಕಾರಿ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ರಾಜಾನುಗುಂಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಲೆ ಮರಿಸಿಕೊಂಡಿರುವ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ದೊಡ್ಡಬಳ್ಳಾಪುರ: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…
ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…
ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…