ಸೋದರ ಮಾವನಿಂದಲೆ ಅಳಿಯನ ಕೊಲೆಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ಉತ್ತರ ತಾಲೂಕಿನ ಕಾರ್ಲಾಪುರದಲ್ಲಿ ನಿನ್ನೆ ಸಂಜೆ ನಡೆದಿದೆ.
ಗಂಗರಾಜ್(30) ಕೊಲೆಯಾದ ದುರ್ದೈವಿ. ಶ್ರೀನಿವಾಸ್ (35) ಕೊಲೆ ಮಾಡಿರುವ ಆರೋಪಿ.
ಮೃತ ದುರ್ದೈವಿ ಗಂಗರಾಜ್ ತಾಯಿಯ ತಮ್ಮನಾದ ಶ್ರೀನಿವಾಸ್ ಎಂಬಾತ ಗಂಗರಾಜ್ ತಲೆಗೆ ರಾಡ್ ನಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಬಾವ-ಬಾಮೈದ ನಡುವೆ ಹುಡುಗಿಯ ವಿಚಾರಕ್ಕೆ ಒಂದು ವರ್ಷದಿಂದ ಜಿದ್ದು ಇತ್ತು. ಇವರಿಬ್ಬರು ಈ ಹಿಂದೆ ಕೂಡ ಗಲಾಟೆ ಮಾಡಿಕೊಂಡಿದ್ದರು. ತಾಯಿಯ ತಮ್ಮ ಆಗಿದ್ದ ಕಾರಣ ಪೊಲೀಸ್ ದೂರು ನೀಡಿರಲಿಲ್ಲ. ಅದೇರೀತಿ ಆರ್ಥಿಕವಾಗಿ ಬೆಳೆದರು ಎಂದು ಯಾವಾಗಲೂ ಗಲಾಟೆ ನಡೆಯುತ್ತಿತ್ತು. ನಿನ್ನೆ ಸಂಜೆ ನಾಲ್ಕೈದು ಸ್ನೇಹಿತರ ಜೊತೆ ಸೇರಿ ಊರಿನ ಮಧ್ಯೆ ಇರುವ ಸರ್ಕಲ್ ನಲ್ಲಿ ಕೊಲೆ ಮಾಡಲಾಗಿದೆ ಎಂದು ಮೃತ ದುರ್ದೈವಿ ತಂದೆ ರಾಜಣ್ಣ ತಿಳಿಸಿದ್ದಾರೆ.
ಮೃತನನ್ನು ಯಲಹಂಕ ಸರಕಾರಿ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ರಾಜಾನುಗುಂಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಲೆ ಮರಿಸಿಕೊಂಡಿರುವ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ದೊಡ್ಡಬಳ್ಳಾಪುರ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟವನ್ನು ವಿರೋಧಿಸಿ ಮೇ 20 ರಂದು ದೇಶವ್ಯಾಪಿ ಕರೆ ನೀಡಿರುವ…
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ…
ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ…
ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…
ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…
ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…