ಸೋದರ ಮಾವನಿಂದಲೆ ಅಳಿಯನ ಕೊಲೆಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ಉತ್ತರ ತಾಲೂಕಿನ ಕಾರ್ಲಾಪುರದಲ್ಲಿ ನಿನ್ನೆ ಸಂಜೆ ನಡೆದಿದೆ.
ಗಂಗರಾಜ್(30) ಕೊಲೆಯಾದ ದುರ್ದೈವಿ. ಶ್ರೀನಿವಾಸ್ (35) ಕೊಲೆ ಮಾಡಿರುವ ಆರೋಪಿ.
ಮೃತ ದುರ್ದೈವಿ ಗಂಗರಾಜ್ ತಾಯಿಯ ತಮ್ಮನಾದ ಶ್ರೀನಿವಾಸ್ ಎಂಬಾತ ಗಂಗರಾಜ್ ತಲೆಗೆ ರಾಡ್ ನಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಬಾವ-ಬಾಮೈದ ನಡುವೆ ಹುಡುಗಿಯ ವಿಚಾರಕ್ಕೆ ಒಂದು ವರ್ಷದಿಂದ ಜಿದ್ದು ಇತ್ತು. ಇವರಿಬ್ಬರು ಈ ಹಿಂದೆ ಕೂಡ ಗಲಾಟೆ ಮಾಡಿಕೊಂಡಿದ್ದರು. ತಾಯಿಯ ತಮ್ಮ ಆಗಿದ್ದ ಕಾರಣ ಪೊಲೀಸ್ ದೂರು ನೀಡಿರಲಿಲ್ಲ. ಅದೇರೀತಿ ಆರ್ಥಿಕವಾಗಿ ಬೆಳೆದರು ಎಂದು ಯಾವಾಗಲೂ ಗಲಾಟೆ ನಡೆಯುತ್ತಿತ್ತು. ನಿನ್ನೆ ಸಂಜೆ ನಾಲ್ಕೈದು ಸ್ನೇಹಿತರ ಜೊತೆ ಸೇರಿ ಊರಿನ ಮಧ್ಯೆ ಇರುವ ಸರ್ಕಲ್ ನಲ್ಲಿ ಕೊಲೆ ಮಾಡಲಾಗಿದೆ ಎಂದು ಮೃತ ದುರ್ದೈವಿ ತಂದೆ ರಾಜಣ್ಣ ತಿಳಿಸಿದ್ದಾರೆ.
ಮೃತನನ್ನು ಯಲಹಂಕ ಸರಕಾರಿ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ರಾಜಾನುಗುಂಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಲೆ ಮರಿಸಿಕೊಂಡಿರುವ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ರಾತ್ರಿ ದೊಡ್ಡಬಳ್ಳಾಪುರ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆ ಮಾಡಲು ಕೃಷಿ ಇಲಾಖೆ…
ಹೊಸಕೋಟೆ: ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ KSRTC ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ಹೊಸಕೋಟೆ ಸಮೀಪದ…
ಬೆಂಗಳೂರು: 2026ರ ರಾಜ್ಯಸಭೆ ಹಾಗೂ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಎನ್ಡಿಎ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದ್ದು, ಕರ್ನಾಟಕದಿಂದ ರಾಜ್ಯಸಭೆಗೆ…
ನಾನು ವಿದ್ಯಾವಂತನಾಗಿರಲಿಲ್ಲ, ಅದರಿಂದಾಗಿ ಯಶಸ್ವಿಯಾಗಲಿಲ್ಲ. ನಾನು ಬುದ್ದಿವಂತನಾಗಿರಲಿಲ್ಲ, ಅದರಿಂದಾಗಿ ಜನಪ್ರಿಯನಾಗಲಿಲ್ಲ. ನಾನು ಪ್ರತಿಭಾವಂತನಾಗಿರಲಿಲ್ಲ, ಅದರಿಂದಾಗಿ ಪ್ರಖ್ಯಾತನಾಗಲಿಲ್ಲ. ನಾನು ಶ್ರೀಮಂತನಾಗಿರಲಿಲ್ಲ, ಅದರಿಂದಾಗಿ…
ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…