ತಾಲ್ಲೂಕಿನ ಕೆಸ್ತೂರು ಗೇಟ್ ಬಳಿ ಡಿ.11ರಂದು ಹುಣಸೆ ವ್ಯಾಪಾರಿಗಳ ಸೋಗಲ್ಲಿ ಬಂದ ವೃದ್ಧೆಯ ಮಾಂಗಲ್ಯ ಸರ ಎಗರಸಿ ಪರಾರಿಯಾಗಿದ್ದ ಖದೀಮರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ ಖದೀಮರನ್ನು ಪತ್ತೆಹಚ್ಚುವಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಘಟನೆ ವಿವರ
ಡಿ.11ರಂದು ನಾನು ಎಂದಿನಂತೆ ಮಧ್ಯಾಹ್ನ 12ರ ಸುಮಾರಿನಲ್ಲಿ, ಹಸುವನ್ನು ತೋಟಕ್ಕೆ ಬಿಡಲು ಹೋದಾಗ ಇಬ್ಬರು ಬೈಕ್ ನಲ್ಲಿ ಬಂದು, ಒಬ್ಬ ವ್ಯಕ್ತಿ ಬೈಕ್ ಮೇಲೆಯೇ ಕುಳಿತುಕೊಂಡು ಇನ್ನೊಬ್ಬ ವ್ಯಕ್ತಿ ಬೈಕಿನಿಂದ ಇಳಿದು ಬಂದು ಹುಣಸೆ ಮರವನ್ನು ಕೊಡುತ್ತೀರಾ ಎಂದು ಕೇಳಿಕೊಂಡು ನಾನು ಇದ್ದ ಜಾಗಕ್ಕೆ ಬಂದ. ಆಗ ನಾನು ಆಯ್ತು ಮೂರು ಮರಗಳಿವೆ ಕೊಡುತ್ತೇವೆಂದು ಹೇಳುತ್ತಾ ಮುಂದೆ ಹೋಗುತ್ತಿದ್ದೆ, ಆಗ ಆತನು ನನ್ನನ್ನೇ ಹಿಂಬಾಲಿಸಿಕೊಂಡು ಬಂದು ನನ್ನ ಕೊರಳಿನಲ್ಲಿದ್ದ ಮಾಂಗಲ್ಯದ ಚಿನ್ನದ ಸರಕ್ಕೆ ಕೈ ಹಾಕಿ ಮಾಂಗಲ್ಯವನ್ನು ಕಿತ್ತುಕೊಂಡು ಓಡಿ ಹೋಗಿ ಬೈಕ್ ಹತ್ತಿಕೊಂಡು ದೊಡ್ಡಬಳ್ಳಾಪುರ ಕಡೆಗೆ ಪರಾರಿಯಾದರು.
ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…