ಹುಣಸೆ ವ್ಯಾಪಾರಿಗಳ ಸೋಗಲ್ಲಿ ಬಂದು ವೃದ್ಧೆಯ ಚಿನ್ನದ ಮಾಂಗಲ್ಯ ಸರ ಕದ್ದೊಯ್ದಿದ್ದ ಚೋರರ ಬೇಟೆ

ತಾಲ್ಲೂಕಿನ ಕೆಸ್ತೂರು ಗೇಟ್ ಬಳಿ ಡಿ.11ರಂದು ಹುಣಸೆ ವ್ಯಾಪಾರಿಗಳ ಸೋಗಲ್ಲಿ ಬಂದ ವೃದ್ಧೆಯ ಮಾಂಗಲ್ಯ ಸರ ಎಗರಸಿ ಪರಾರಿಯಾಗಿದ್ದ ಖದೀಮರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ.

ತಾಲೂಕಿನ ಕೆಸ್ತೂರು ಗ್ರಾಮದ 63 ವರ್ಷದ ಸರಸ್ವತಮ್ಮ ಮಾಂಗಲ್ಯ ಸರ ಕಳೆದುಕೊಂಡ ವೃದ್ಧೆ. ಹಸು ಮೇಸಲು ತೆರಳಿದ್ದ ವೇಳೆ ಹುಣಸೆ ಮರ ವ್ಯಾಪಾರಿಗಳು ಎಂಬಂತೆ ಬಂದ ಇಬ್ಬರು ಅಪರಿಚಿತರು ವೃದ್ಧೆಯೊಂದಿಗೆ ಮಾತಿಗಿಳಿದು ಆಕೆಯ ಕುತ್ತಿಗೆಯಲ್ಲಿದ್ದ ಸುಮಾರು 52 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು.

ಈ ಕುರಿತು ಪ್ರಕರಣ ದಾಖಲಿಸಿಕೊಂಡು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ ಖದೀಮರನ್ನು ಪತ್ತೆಹಚ್ಚುವಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಘಟನೆ ವಿವರ

ಡಿ.11ರಂದು ನಾನು ಎಂದಿನಂತೆ ಮಧ್ಯಾಹ್ನ 12ರ ಸುಮಾರಿನಲ್ಲಿ, ಹಸುವನ್ನು ತೋಟಕ್ಕೆ ಬಿಡಲು ಹೋದಾಗ ಇಬ್ಬರು ಬೈಕ್ ನಲ್ಲಿ ಬಂದು, ಒಬ್ಬ ವ್ಯಕ್ತಿ ಬೈಕ್ ಮೇಲೆಯೇ ಕುಳಿತುಕೊಂಡು ಇನ್ನೊಬ್ಬ ವ್ಯಕ್ತಿ ಬೈಕಿನಿಂದ ಇಳಿದು ಬಂದು ಹುಣಸೆ ಮರವನ್ನು ಕೊಡುತ್ತೀರಾ ಎಂದು ಕೇಳಿಕೊಂಡು ನಾನು ಇದ್ದ ಜಾಗಕ್ಕೆ ಬಂದ. ಆಗ ನಾನು ಆಯ್ತು ಮೂರು ಮರಗಳಿವೆ ಕೊಡುತ್ತೇವೆಂದು ಹೇಳುತ್ತಾ ಮುಂದೆ ಹೋಗುತ್ತಿದ್ದೆ, ಆಗ ಆತನು ನನ್ನನ್ನೇ ಹಿಂಬಾಲಿಸಿಕೊಂಡು ಬಂದು ನನ್ನ ಕೊರಳಿನಲ್ಲಿದ್ದ ಮಾಂಗಲ್ಯದ ಚಿನ್ನದ ಸರಕ್ಕೆ ಕೈ ಹಾಕಿ ಮಾಂಗಲ್ಯವನ್ನು ಕಿತ್ತುಕೊಂಡು ಓಡಿ ಹೋಗಿ ಬೈಕ್ ಹತ್ತಿಕೊಂಡು ದೊಡ್ಡಬಳ್ಳಾಪುರ ಕಡೆಗೆ ಪರಾರಿಯಾದರು.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದೆ. ಇದೀಗ ಪೊಲೀಸರು ಕಳ್ಳರನ್ನು ಬಂಧಿಸಿ ನನಗೆ ನ್ಯಾಯ ಒದಗಿಸಿದ್ದಾರೆ ಎಂದು ಮಾಂಗಲ್ಯ ಸರ ಕಳೆದುಕೊಂಡಿದ್ದ ಸರಸ್ವತಮ್ಮ ಹೇಳಿದ್ದಾರೆ.

Ramesh Babu

Journalist

Recent Posts

ಮಳೆ, ಗಾಳಿ ಅವಾಂತರ: ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಕುಂಟನಹಳ್ಳಿ, ಹುಸ್ಕೂರು ದಾರಿ ಬಂದ್

ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…

46 minutes ago

ಆನ್‌ಲೈನ್ ಗೇಮ್ ನಿಷೇಧ: ‘ಆನ್‌ಲೈನ್ ಗೇಮಿಂಗ್ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ 2025’ ಜಾರಿ: ಕಾಯ್ದೆ ಉಲ್ಲಂಘಿಸಿದರೆ ಭಾರೀ ದಂಡ ಮತ್ತು ಕಠಿಣ ಶಿಕ್ಷೆ ನಿಗದಿ

ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್‌ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…

2 hours ago

ಹೊಸಕೋಟೆ ಹೊರವಲಯದ ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟ: ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಖಾಕಿ ಪಾಠ

ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…

3 hours ago

ಬಿರುಗಾಳಿ ಸಹಿತ ಮಳೆ: ನೆಲ ಕಚ್ಚಿದ ಫಸಲಿಗೆ ಬಂದಿದ್ದ  ಬಾಳೆ ಬೆಳೆ: ಲಕ್ಷಾಂತರ ರೂ. ನಷ್ಟ: ಸಂಕಷ್ಟದಲ್ಲಿ ರೈತ

ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…

5 hours ago

ಮಳೆ, ಗಾಳಿ ಅವಾಂತರ: ವಿದ್ಯುತ್ ತಂತಿ ಮೇಲೆ ಬಿದ್ದ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಭಾರೀ ಗಾತ್ರದ ಝಿಂಕ್ ಅಲ್ಯೂಮಿನಿಯಮ್ ಶೀಟ್‌: ರಸ್ತೆಗೆ ಅಡ್ಡಲಾಗಿ ಬಿದ್ದ 7 ವಿದ್ಯುತ್ ಕಂಬಗಳು

ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್‌ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…

6 hours ago

ಬಿರುಗಾಳಿ ಸಹಿತ ಜೋರು ಮಳೆ: ಧರೆಗುರುಳಿದ 2 ಟ್ರಾನ್ಸ್‌ಫಾರ್ಮರ್ (ವಿದ್ಯುತ್ ಪರಿವರ್ತಕ), 9 ವಿದ್ಯುತ್ ಕಂಬಗಳು: ತಪ್ಪಿದ ಭಾರೀ ಅನಾಹುತ

ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…

17 hours ago