ಹುಣಸೆ ವ್ಯಾಪಾರಿಗಳ ಸೋಗಲ್ಲಿ ಬಂದು ವೃದ್ಧೆಯ ಚಿನ್ನದ ಮಾಂಗಲ್ಯ ಸರ ಕದ್ದೊಯ್ದಿದ್ದ ಚೋರರ ಬೇಟೆ

ತಾಲ್ಲೂಕಿನ ಕೆಸ್ತೂರು ಗೇಟ್ ಬಳಿ ಡಿ.11ರಂದು ಹುಣಸೆ ವ್ಯಾಪಾರಿಗಳ ಸೋಗಲ್ಲಿ ಬಂದ ವೃದ್ಧೆಯ ಮಾಂಗಲ್ಯ ಸರ ಎಗರಸಿ ಪರಾರಿಯಾಗಿದ್ದ ಖದೀಮರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ.

ತಾಲೂಕಿನ ಕೆಸ್ತೂರು ಗ್ರಾಮದ 63 ವರ್ಷದ ಸರಸ್ವತಮ್ಮ ಮಾಂಗಲ್ಯ ಸರ ಕಳೆದುಕೊಂಡ ವೃದ್ಧೆ. ಹಸು ಮೇಸಲು ತೆರಳಿದ್ದ ವೇಳೆ ಹುಣಸೆ ಮರ ವ್ಯಾಪಾರಿಗಳು ಎಂಬಂತೆ ಬಂದ ಇಬ್ಬರು ಅಪರಿಚಿತರು ವೃದ್ಧೆಯೊಂದಿಗೆ ಮಾತಿಗಿಳಿದು ಆಕೆಯ ಕುತ್ತಿಗೆಯಲ್ಲಿದ್ದ ಸುಮಾರು 52 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು.

ಈ ಕುರಿತು ಪ್ರಕರಣ ದಾಖಲಿಸಿಕೊಂಡು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ ಖದೀಮರನ್ನು ಪತ್ತೆಹಚ್ಚುವಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಘಟನೆ ವಿವರ

ಡಿ.11ರಂದು ನಾನು ಎಂದಿನಂತೆ ಮಧ್ಯಾಹ್ನ 12ರ ಸುಮಾರಿನಲ್ಲಿ, ಹಸುವನ್ನು ತೋಟಕ್ಕೆ ಬಿಡಲು ಹೋದಾಗ ಇಬ್ಬರು ಬೈಕ್ ನಲ್ಲಿ ಬಂದು, ಒಬ್ಬ ವ್ಯಕ್ತಿ ಬೈಕ್ ಮೇಲೆಯೇ ಕುಳಿತುಕೊಂಡು ಇನ್ನೊಬ್ಬ ವ್ಯಕ್ತಿ ಬೈಕಿನಿಂದ ಇಳಿದು ಬಂದು ಹುಣಸೆ ಮರವನ್ನು ಕೊಡುತ್ತೀರಾ ಎಂದು ಕೇಳಿಕೊಂಡು ನಾನು ಇದ್ದ ಜಾಗಕ್ಕೆ ಬಂದ. ಆಗ ನಾನು ಆಯ್ತು ಮೂರು ಮರಗಳಿವೆ ಕೊಡುತ್ತೇವೆಂದು ಹೇಳುತ್ತಾ ಮುಂದೆ ಹೋಗುತ್ತಿದ್ದೆ, ಆಗ ಆತನು ನನ್ನನ್ನೇ ಹಿಂಬಾಲಿಸಿಕೊಂಡು ಬಂದು ನನ್ನ ಕೊರಳಿನಲ್ಲಿದ್ದ ಮಾಂಗಲ್ಯದ ಚಿನ್ನದ ಸರಕ್ಕೆ ಕೈ ಹಾಕಿ ಮಾಂಗಲ್ಯವನ್ನು ಕಿತ್ತುಕೊಂಡು ಓಡಿ ಹೋಗಿ ಬೈಕ್ ಹತ್ತಿಕೊಂಡು ದೊಡ್ಡಬಳ್ಳಾಪುರ ಕಡೆಗೆ ಪರಾರಿಯಾದರು.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದೆ. ಇದೀಗ ಪೊಲೀಸರು ಕಳ್ಳರನ್ನು ಬಂಧಿಸಿ ನನಗೆ ನ್ಯಾಯ ಒದಗಿಸಿದ್ದಾರೆ ಎಂದು ಮಾಂಗಲ್ಯ ಸರ ಕಳೆದುಕೊಂಡಿದ್ದ ಸರಸ್ವತಮ್ಮ ಹೇಳಿದ್ದಾರೆ.

Ramesh Babu

Journalist

Recent Posts

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

5 hours ago

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

16 hours ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

1 day ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

1 day ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

1 day ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

2 days ago