ಹುಣಸೆ ವ್ಯಾಪಾರಿಗಳ ಸೋಗಲ್ಲಿ ಬಂದು ವೃದ್ಧೆಯ ಚಿನ್ನದ ಮಾಂಗಲ್ಯ ಸರ ಕದ್ದೊಯ್ದಿದ್ದ ಚೋರರ ಬೇಟೆ

ತಾಲ್ಲೂಕಿನ ಕೆಸ್ತೂರು ಗೇಟ್ ಬಳಿ ಡಿ.11ರಂದು ಹುಣಸೆ ವ್ಯಾಪಾರಿಗಳ ಸೋಗಲ್ಲಿ ಬಂದ ವೃದ್ಧೆಯ ಮಾಂಗಲ್ಯ ಸರ ಎಗರಸಿ ಪರಾರಿಯಾಗಿದ್ದ ಖದೀಮರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ.

ತಾಲೂಕಿನ ಕೆಸ್ತೂರು ಗ್ರಾಮದ 63 ವರ್ಷದ ಸರಸ್ವತಮ್ಮ ಮಾಂಗಲ್ಯ ಸರ ಕಳೆದುಕೊಂಡ ವೃದ್ಧೆ. ಹಸು ಮೇಸಲು ತೆರಳಿದ್ದ ವೇಳೆ ಹುಣಸೆ ಮರ ವ್ಯಾಪಾರಿಗಳು ಎಂಬಂತೆ ಬಂದ ಇಬ್ಬರು ಅಪರಿಚಿತರು ವೃದ್ಧೆಯೊಂದಿಗೆ ಮಾತಿಗಿಳಿದು ಆಕೆಯ ಕುತ್ತಿಗೆಯಲ್ಲಿದ್ದ ಸುಮಾರು 52 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು.

ಈ ಕುರಿತು ಪ್ರಕರಣ ದಾಖಲಿಸಿಕೊಂಡು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ ಖದೀಮರನ್ನು ಪತ್ತೆಹಚ್ಚುವಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಘಟನೆ ವಿವರ

ಡಿ.11ರಂದು ನಾನು ಎಂದಿನಂತೆ ಮಧ್ಯಾಹ್ನ 12ರ ಸುಮಾರಿನಲ್ಲಿ, ಹಸುವನ್ನು ತೋಟಕ್ಕೆ ಬಿಡಲು ಹೋದಾಗ ಇಬ್ಬರು ಬೈಕ್ ನಲ್ಲಿ ಬಂದು, ಒಬ್ಬ ವ್ಯಕ್ತಿ ಬೈಕ್ ಮೇಲೆಯೇ ಕುಳಿತುಕೊಂಡು ಇನ್ನೊಬ್ಬ ವ್ಯಕ್ತಿ ಬೈಕಿನಿಂದ ಇಳಿದು ಬಂದು ಹುಣಸೆ ಮರವನ್ನು ಕೊಡುತ್ತೀರಾ ಎಂದು ಕೇಳಿಕೊಂಡು ನಾನು ಇದ್ದ ಜಾಗಕ್ಕೆ ಬಂದ. ಆಗ ನಾನು ಆಯ್ತು ಮೂರು ಮರಗಳಿವೆ ಕೊಡುತ್ತೇವೆಂದು ಹೇಳುತ್ತಾ ಮುಂದೆ ಹೋಗುತ್ತಿದ್ದೆ, ಆಗ ಆತನು ನನ್ನನ್ನೇ ಹಿಂಬಾಲಿಸಿಕೊಂಡು ಬಂದು ನನ್ನ ಕೊರಳಿನಲ್ಲಿದ್ದ ಮಾಂಗಲ್ಯದ ಚಿನ್ನದ ಸರಕ್ಕೆ ಕೈ ಹಾಕಿ ಮಾಂಗಲ್ಯವನ್ನು ಕಿತ್ತುಕೊಂಡು ಓಡಿ ಹೋಗಿ ಬೈಕ್ ಹತ್ತಿಕೊಂಡು ದೊಡ್ಡಬಳ್ಳಾಪುರ ಕಡೆಗೆ ಪರಾರಿಯಾದರು.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದೆ. ಇದೀಗ ಪೊಲೀಸರು ಕಳ್ಳರನ್ನು ಬಂಧಿಸಿ ನನಗೆ ನ್ಯಾಯ ಒದಗಿಸಿದ್ದಾರೆ ಎಂದು ಮಾಂಗಲ್ಯ ಸರ ಕಳೆದುಕೊಂಡಿದ್ದ ಸರಸ್ವತಮ್ಮ ಹೇಳಿದ್ದಾರೆ.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

7 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

22 hours ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

2 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

3 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago