ತಾಲ್ಲೂಕಿನ ಕೆಸ್ತೂರು ಗೇಟ್ ಬಳಿ ಡಿ.11ರಂದು ಹುಣಸೆ ವ್ಯಾಪಾರಿಗಳ ಸೋಗಲ್ಲಿ ಬಂದ ವೃದ್ಧೆಯ ಮಾಂಗಲ್ಯ ಸರ ಎಗರಸಿ ಪರಾರಿಯಾಗಿದ್ದ ಖದೀಮರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ ಖದೀಮರನ್ನು ಪತ್ತೆಹಚ್ಚುವಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಘಟನೆ ವಿವರ
ಡಿ.11ರಂದು ನಾನು ಎಂದಿನಂತೆ ಮಧ್ಯಾಹ್ನ 12ರ ಸುಮಾರಿನಲ್ಲಿ, ಹಸುವನ್ನು ತೋಟಕ್ಕೆ ಬಿಡಲು ಹೋದಾಗ ಇಬ್ಬರು ಬೈಕ್ ನಲ್ಲಿ ಬಂದು, ಒಬ್ಬ ವ್ಯಕ್ತಿ ಬೈಕ್ ಮೇಲೆಯೇ ಕುಳಿತುಕೊಂಡು ಇನ್ನೊಬ್ಬ ವ್ಯಕ್ತಿ ಬೈಕಿನಿಂದ ಇಳಿದು ಬಂದು ಹುಣಸೆ ಮರವನ್ನು ಕೊಡುತ್ತೀರಾ ಎಂದು ಕೇಳಿಕೊಂಡು ನಾನು ಇದ್ದ ಜಾಗಕ್ಕೆ ಬಂದ. ಆಗ ನಾನು ಆಯ್ತು ಮೂರು ಮರಗಳಿವೆ ಕೊಡುತ್ತೇವೆಂದು ಹೇಳುತ್ತಾ ಮುಂದೆ ಹೋಗುತ್ತಿದ್ದೆ, ಆಗ ಆತನು ನನ್ನನ್ನೇ ಹಿಂಬಾಲಿಸಿಕೊಂಡು ಬಂದು ನನ್ನ ಕೊರಳಿನಲ್ಲಿದ್ದ ಮಾಂಗಲ್ಯದ ಚಿನ್ನದ ಸರಕ್ಕೆ ಕೈ ಹಾಕಿ ಮಾಂಗಲ್ಯವನ್ನು ಕಿತ್ತುಕೊಂಡು ಓಡಿ ಹೋಗಿ ಬೈಕ್ ಹತ್ತಿಕೊಂಡು ದೊಡ್ಡಬಳ್ಳಾಪುರ ಕಡೆಗೆ ಪರಾರಿಯಾದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…