ಹುಣಸೆ ವ್ಯಾಪಾರಿಗಳ ಸೋಗಲ್ಲಿ ಬಂದು ವೃದ್ಧೆಯ ಚಿನ್ನದ ಮಾಂಗಲ್ಯ ಸರ ಕದ್ದೊಯ್ದಿದ್ದ ಚೋರರ ಬೇಟೆ

ತಾಲ್ಲೂಕಿನ ಕೆಸ್ತೂರು ಗೇಟ್ ಬಳಿ ಡಿ.11ರಂದು ಹುಣಸೆ ವ್ಯಾಪಾರಿಗಳ ಸೋಗಲ್ಲಿ ಬಂದ ವೃದ್ಧೆಯ ಮಾಂಗಲ್ಯ ಸರ ಎಗರಸಿ ಪರಾರಿಯಾಗಿದ್ದ ಖದೀಮರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ.

ತಾಲೂಕಿನ ಕೆಸ್ತೂರು ಗ್ರಾಮದ 63 ವರ್ಷದ ಸರಸ್ವತಮ್ಮ ಮಾಂಗಲ್ಯ ಸರ ಕಳೆದುಕೊಂಡ ವೃದ್ಧೆ. ಹಸು ಮೇಸಲು ತೆರಳಿದ್ದ ವೇಳೆ ಹುಣಸೆ ಮರ ವ್ಯಾಪಾರಿಗಳು ಎಂಬಂತೆ ಬಂದ ಇಬ್ಬರು ಅಪರಿಚಿತರು ವೃದ್ಧೆಯೊಂದಿಗೆ ಮಾತಿಗಿಳಿದು ಆಕೆಯ ಕುತ್ತಿಗೆಯಲ್ಲಿದ್ದ ಸುಮಾರು 52 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು.

ಈ ಕುರಿತು ಪ್ರಕರಣ ದಾಖಲಿಸಿಕೊಂಡು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ ಖದೀಮರನ್ನು ಪತ್ತೆಹಚ್ಚುವಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಘಟನೆ ವಿವರ

ಡಿ.11ರಂದು ನಾನು ಎಂದಿನಂತೆ ಮಧ್ಯಾಹ್ನ 12ರ ಸುಮಾರಿನಲ್ಲಿ, ಹಸುವನ್ನು ತೋಟಕ್ಕೆ ಬಿಡಲು ಹೋದಾಗ ಇಬ್ಬರು ಬೈಕ್ ನಲ್ಲಿ ಬಂದು, ಒಬ್ಬ ವ್ಯಕ್ತಿ ಬೈಕ್ ಮೇಲೆಯೇ ಕುಳಿತುಕೊಂಡು ಇನ್ನೊಬ್ಬ ವ್ಯಕ್ತಿ ಬೈಕಿನಿಂದ ಇಳಿದು ಬಂದು ಹುಣಸೆ ಮರವನ್ನು ಕೊಡುತ್ತೀರಾ ಎಂದು ಕೇಳಿಕೊಂಡು ನಾನು ಇದ್ದ ಜಾಗಕ್ಕೆ ಬಂದ. ಆಗ ನಾನು ಆಯ್ತು ಮೂರು ಮರಗಳಿವೆ ಕೊಡುತ್ತೇವೆಂದು ಹೇಳುತ್ತಾ ಮುಂದೆ ಹೋಗುತ್ತಿದ್ದೆ, ಆಗ ಆತನು ನನ್ನನ್ನೇ ಹಿಂಬಾಲಿಸಿಕೊಂಡು ಬಂದು ನನ್ನ ಕೊರಳಿನಲ್ಲಿದ್ದ ಮಾಂಗಲ್ಯದ ಚಿನ್ನದ ಸರಕ್ಕೆ ಕೈ ಹಾಕಿ ಮಾಂಗಲ್ಯವನ್ನು ಕಿತ್ತುಕೊಂಡು ಓಡಿ ಹೋಗಿ ಬೈಕ್ ಹತ್ತಿಕೊಂಡು ದೊಡ್ಡಬಳ್ಳಾಪುರ ಕಡೆಗೆ ಪರಾರಿಯಾದರು.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದೆ. ಇದೀಗ ಪೊಲೀಸರು ಕಳ್ಳರನ್ನು ಬಂಧಿಸಿ ನನಗೆ ನ್ಯಾಯ ಒದಗಿಸಿದ್ದಾರೆ ಎಂದು ಮಾಂಗಲ್ಯ ಸರ ಕಳೆದುಕೊಂಡಿದ್ದ ಸರಸ್ವತಮ್ಮ ಹೇಳಿದ್ದಾರೆ.

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

16 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

17 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

17 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

17 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

20 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

23 hours ago