ತಾಲ್ಲೂಕಿನ ಕೆಸ್ತೂರು ಗೇಟ್ ಬಳಿ ಡಿ.11ರಂದು ಹುಣಸೆ ವ್ಯಾಪಾರಿಗಳ ಸೋಗಲ್ಲಿ ಬಂದ ವೃದ್ಧೆಯ ಮಾಂಗಲ್ಯ ಸರ ಎಗರಸಿ ಪರಾರಿಯಾಗಿದ್ದ ಖದೀಮರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ ಖದೀಮರನ್ನು ಪತ್ತೆಹಚ್ಚುವಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಘಟನೆ ವಿವರ
ಡಿ.11ರಂದು ನಾನು ಎಂದಿನಂತೆ ಮಧ್ಯಾಹ್ನ 12ರ ಸುಮಾರಿನಲ್ಲಿ, ಹಸುವನ್ನು ತೋಟಕ್ಕೆ ಬಿಡಲು ಹೋದಾಗ ಇಬ್ಬರು ಬೈಕ್ ನಲ್ಲಿ ಬಂದು, ಒಬ್ಬ ವ್ಯಕ್ತಿ ಬೈಕ್ ಮೇಲೆಯೇ ಕುಳಿತುಕೊಂಡು ಇನ್ನೊಬ್ಬ ವ್ಯಕ್ತಿ ಬೈಕಿನಿಂದ ಇಳಿದು ಬಂದು ಹುಣಸೆ ಮರವನ್ನು ಕೊಡುತ್ತೀರಾ ಎಂದು ಕೇಳಿಕೊಂಡು ನಾನು ಇದ್ದ ಜಾಗಕ್ಕೆ ಬಂದ. ಆಗ ನಾನು ಆಯ್ತು ಮೂರು ಮರಗಳಿವೆ ಕೊಡುತ್ತೇವೆಂದು ಹೇಳುತ್ತಾ ಮುಂದೆ ಹೋಗುತ್ತಿದ್ದೆ, ಆಗ ಆತನು ನನ್ನನ್ನೇ ಹಿಂಬಾಲಿಸಿಕೊಂಡು ಬಂದು ನನ್ನ ಕೊರಳಿನಲ್ಲಿದ್ದ ಮಾಂಗಲ್ಯದ ಚಿನ್ನದ ಸರಕ್ಕೆ ಕೈ ಹಾಕಿ ಮಾಂಗಲ್ಯವನ್ನು ಕಿತ್ತುಕೊಂಡು ಓಡಿ ಹೋಗಿ ಬೈಕ್ ಹತ್ತಿಕೊಂಡು ದೊಡ್ಡಬಳ್ಳಾಪುರ ಕಡೆಗೆ ಪರಾರಿಯಾದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…